Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...