Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...