Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...