Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...