Homeಕರ್ನಾಟಕ6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ.

“ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ ಎಕ್ಸ್‌ನಲ್ಲಿ ಅಭಿಪ್ರಾಯಿಸಿದ್ದಾರೆ. 17 ವರ್ಷಗಳ ತನಿಖೆಯು ಪುರಾವೆಗಳ ಕೊರತೆಯಿಂದಾಗಿ ಆರೋಪಿಗಳ  ಖುಲಾಸೆಯಲ್ಲಿ ಹೇಗೆ ಕೊನೆಗೊಂಡಿತು ಎಂದು ಅವರು ಪ್ರಶ್ನಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಿಗೊಳಿಸಿದಾಗ ಈ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮೇಲ್ಮನವಿಯನ್ನು ಸಲ್ಲಿಸಿದ್ದವು.  ಅದೇ ತುರ್ತನ್ನು ಈ ಮಾಲೆಗಾಂವ್ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಈ ಕೇಂದ್ರ ಮತ್ತು ಮಹಾರಾಷ್ಟ್ರ ಸರಕಾರಗಳು ಮೇಲ್ಮನವಿಯನ್ನು ಸಲ್ಲಿಸುತ್ತವೆಯೇ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಮುಂಬೈ ರೈಲು ಸ್ಫೋಟದ ಖುಲಾಸೆಗಳಲ್ಲಿ ತಕ್ಷಣ ತಡೆ ನೀಡಲು ಒತ್ತಾಯಿಸಿದಂತೆ ಮೋದಿ ಮತ್ತು ಫಡ್ನವೀಸ್ ಸರ್ಕಾರಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆಯೇ? ಮಹಾರಾಷ್ಟ್ರದ ‘ಜಾತ್ಯತೀತ’ ರಾಜಕೀಯ ಪಕ್ಷಗಳು ಈ ಸ್ಫೋಟದ ಕುರಿತು ಜವಾಬ್ದಾರಿ ಯಾರೆಂದು ಪ್ರಶ್ನಿಸುತ್ತವೆಯೇ? ಆ 6 ಜನರನ್ನು ಕೊಂದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಕರಣದ ಸುತ್ತ ಇದ್ದ ಹಿಂದಿನ ವಿವಾದಗಳನ್ನು ಸಹ ಓವೈಸಿ ನೆನಪಿಸಿಕೊಂಡಿದ್ದಾರೆ. “ನೆನಪಿರಲಿ, 2016ರಲ್ಲಿ ಆಗಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಸಾಲಿಯನ್ ಅವರು ಎನ್‌ಐಎ ತಂಡವು ತಮಗೆ ಆರೋಪಿಗಳ ವಿರುದ್ಧ ‘ಮೃದು ಧೋರಣೆ’ ತೋರಿಸಲು ಹೇಳಿತ್ತು ಎಂದು ಹೇಳಿದ್ದರು. 2017ರಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಅವರನ್ನು ಖುಲಾಸೆಗೊಳಿಸಲು ಪ್ರಯತ್ನಿಸಿತ್ತು, ಇದೇ ಸಾಧ್ವಿ 2019ರಲ್ಲಿ ಬಿಜೆಪಿ ಸಂಸದೆಯಾದರು” ಎಂದು ಅವರು ಹೇಳಿದ್ದಾರೆ.

ಮಾಜಿ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ತನಿಖೆಯ ಪಾತ್ರವನ್ನು ಸಹ ಅವರು ಸ್ಮರಿಸಿದ್ದಾರೆ. “ಕರ್ಕರೆ ಅವರು ಮಾಲೆಗಾಂವ್‌ನಲ್ಲಿನ ಸಂಚನ್ನು ಭೇದಿಸಿದ್ದರು ಮತ್ತು 26/11ರ ದಾಳಿಯ ಸಮಯದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಂದ ದುರಂತವಾಗಿ ಹತ್ಯೆಯಾದರು” ಎಂದು ಅವರು ಹೇಳಿದ್ದಾರೆ.  “ಬಿಜೆಪಿ ಸಂಸದೆ (ಸಾಧ್ವಿ ಪ್ರಜ್ಞಾ) ತಾವು ಅವರಿಗೆ ಶಾಪ ಹಾಕಿದ್ದಾಗಿ ಮತ್ತು ಅವರ ಸಾವು ತಮ್ಮ ಶಾಪದ ಪರಿಣಾಮ ಎಂದು ಹೇಳಿದ್ದರು” ಎಂದು ಓವೈಸಿ ನೆನಸಿಪಿಸಿದ್ದಾರೆ.

ಈ ಸ್ಫೋಟದ ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಓವೈಸಿ, “ಎನ್‌ಐಎ ಮತ್ತು ಎಟಿಎಸ್ ಅಧಿಕಾರಿಗಳನ್ನು ಅವರ ದೋಷಪೂರಿತ ತನಿಖೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ನಮಗೆಲ್ಲಾ ಉತ್ತರ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಇದು ‘ಭಯೋತ್ಪಾದನೆಯ ವಿರುದ್ಧ ಕಠಿಣ’ ಎಂದು ಹೇಳಿಕೊಳ್ಳುವ ಮೋದಿ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ.

“ಈ ಬಿಜೆಪಿ ಸರ್ಕಾರ ಭಯೋತ್ಪಾದನೆಯ ಆರೋಪಿಯನ್ನು ಸಂಸದೆಯನ್ನಾಗಿ ಮಾಡಿದೆ ಎಂಬುದನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಗುರುವಾರ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ.

“ಸ್ಫೋಟವು ನ್ಯಾಯಾಲಯದಿಂದ ಸಾಬೀತಾಗಿದೆ. ನಾವು ಈ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ನಾವು ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಮಾಲೆಗಾಂವ್ ಸ್ಫೋಟದ ಸಂತ್ರಸ್ತರ ಕುಟುಂಬಗಳ ಪರ ವಕೀಲ ಅಡ್ವೊಕೇಟ್ ಶಾಹಿದ್ ನದೀಮ್ ಎಎನ್‌ಐಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...