Homeಕರ್ನಾಟಕ'ಧರ್ಮಸ್ಥಳದಲ್ಲಿ ಕೊಂದವರು ಯಾರು..?'; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

‘ಧರ್ಮಸ್ಥಳದಲ್ಲಿ ಕೊಂದವರು ಯಾರು..?’; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

- Advertisement -
- Advertisement -

ಧರ್ಮಸ್ಥಳದ ಸುತ್ತಲ ಗ್ರಾಮಗಳಲ್ಲಿ ವರದಿಯಾಗಿರುವ ನೂರಾರು ಮಹಿಳೆಯರ ಅತ್ಯಾಚಾರ, ಕೊಲೆ, ಅನುಮಾನಾಸ್ಪದ ಸಾವುಗಳ ಪ್ರಕರಣಗಳನ್ನು ತನಿಖೆ ಮಾಡಲು ರಚಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಯಾವ ಒತ್ತಡಗಳಿಲ್ಲದೆ, ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಅಗತ್ಯ ಅಧಿಕಾರವನ್ನು ಹಾಗೂ ಅವಕಾಶವನ್ನು ಒದಗಿಸಬೇಕು ಎಂದು ‘ಕೊಂದವರು ಯಾರು’ ಆಂದೋಲನವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆರಂಭವಾದ “ಕೊಂದವರು ಯಾರು” ಆಂದೋಲನವು, ‘ನೊಂದವರೊಂದಿಗೆ ನಾವಿದ್ದೇವೆ’ ಎಂದು ಘೋಷಿಸಿತು. ಜೊತೆಗೆ, ಎಲ್ಲ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ತನಿಖೆಯನ್ನು ಸರಿಯಾಗಿ ನಡೆಸದೆ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳು, ವೈದ್ಯರು, ತನಿಖಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನೂ ಅಪರಾಧಿಗಳೆಂದು ಪರಿಗಣಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿತು.

ನೊಂದ ಕುಟುಂಬಗಳನ್ನು ಭೇಟಿ ಮಾಡಿದ ಅನುಭವಗಳನ್ನು ಹಂಚಿಕೊಂಡ ಮಾನಸ ಬಳಗದ ಚಂಪಾವತಿ, “ಮಹಿಳಾ ಚಳವಳಿಯು ಸದಾಕಾಲ ನೊಂದವರ ಜೊತೆ ನಿಂತಿದೆ, ಆದ್ದರಿಂದಲೇ ಧರ್ಮಸ್ಥಳದ ನೊಂದ ಕುಟುಂಬಗಳನ್ನು ಭೇಟಿ ಮಾಡುವುದು ನಮಗೆ ಅತ್ಯಗತ್ಯವಾಗಿತ್ತು” ಎಂದರು.

ಮಹಿಳಾ ಮುನ್ನಡೆ ಸಂಘಟನೆಯ ಮಲ್ಲಿಗೆ ಮಾತನಾಡಿ, “ಧರ್ಮಸ್ಥಳದಲ್ಲಿ ನಡೆದಿರುವ ಹಲವಾರು ಹೆಣ್ಣುಮಕ್ಕಳ ಅಪಹರಣ, ಅತ್ಯಾಚಾರ, ಕೊಲೆಗಳ ವಿರುದ್ದ ಹೋರಾಟ ಸುಧೀಘ ಕಾಲದಿಂದ ನಡೆದುಬಂದಿದೆ. ನಿರಂತರವಾಗಿ, ಅಂತರ್ಗಾಮಿಯಾಗಿ ಸ್ಥಳೀಯರು ಈ ಹೋರಾಟವನ್ನು ಆರದಂತೆ ಮುನ್ನಡೆಸುತ್ತಿದ್ದಾರೆ. ಇವರೊಂದಿಗೆ ʼಕೊಂದವರು ಯಾರು?ʼ ವೇದಿಕೆಯೂ ಜೊತೆನಿಂತಿದ್ದು, ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಮುಂದುವರೆಯಲಿದೆ” ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್ ವಿಮಲಾ ಮಾತನಾಡಿ, “ನಿನ್ನೆ ವಿಶ್ವ ಪ್ರಜಾಪ್ರಭುತ್ವದ ದಿನ; ವಿಪರ್ಯಾಸವೆದಂರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಪ್ರಭುತ್ವದ ಅಣಕವಾಗುತ್ತಿದೆ. ಧರ್ಮಸ್ಥಳದಲ್ಲಿ ಹಲವಾರುಹೆಣ್ಣುಮಕ್ಕಳ ಕೊಲೆಯಾಗಿದ್ದರೂ, ಇನ್ನೂ ತಪ್ಪಿಸ್ಥರಿಗೆ ಶಿಕ್ಷೆಕೊಡಿಸುವಲ್ಲಿ ವಿಳಂಬವಾಗುತ್ತಿದೆ. ವೇದವಲ್ಲಿ ಪ್ರಕರಣದಲ್ಲಿ ಗಂಡನನ್ನೇ ಆರೋಪಿಯನ್ನಾಗಿ ಮಾಡಿದ್ದರು. ಪದ್ಮಲತರವರ ಪ್ರಕರಣದಲ್ಲಿಯೂ ದೇವಾನಂದ್ ರವರನ್ನು ಆರೋಪಿಗಳನ್ನಾಗಿ ಮಾಡುವ ಷಡ್ಯಂತ್ರ ನಡೆಯಿತು. ಸೌಜನ್ಯ ಪ್ರಕರಣದಲ್ಲೂ ಮಾವನನ್ನೇ ಆರೋಪಿಯನ್ನಾಗಿ ಬಿಂಬಿಸುವ ಪ್ರಯತ್ನ ನಡೆಯಿತು” ಎಂದರು.

“ನಾವು ನೊಂದವರ ಸಂಭಂಧಿಕರನ್ನು ಮಾತನಾಡಿಸಿದಾಗ ಧರ್ಮಸ್ಥಳದಲ್ಲಿ ನಡೆದಿರುವ ಹಲವು ಕೇಸ್‌ಗಳಲ್ಲಿ ಸೂಕ್ತ ತನಿಖೆ ಮಾಡಬೇಕಿದ್ದ ಪೋಲೀಸರೇ ಯಾವುದೋ ಖಾಸಗಿ ಸಂಸ್ಥೆಯ ವಾಹನದಲ್ಲಿ ಬಂದು ಜನರಿಗೆ ಬೆದರಿಕೆ ನೀಡಿದ ಪ್ರಸಂಗಳಿವೆ. ಹೀಗೆ, ಪ್ರಜಾತಾಂತ್ರಿಕವಾಗಿ ಕೆಲಸ ಮಾಡಬೇಕಾದ ಸಂಸ್ಥೆಗಳೇ ಇಲ್ಲಿ ವಿಫಲವಾಗಿರುವುದೇ ನ್ಯಾಯದೊರಕುವುದರಲ್ಲಾಗುತ್ತಿರುವ ವಿಳಂಬಕ್ಕೆ ಕಾರಣ. ಸೌಜನ್ಯ ಪ್ರಕರಣದಲ್ಲಿ ಈ ಹಿಂದೆ, ಮಂಗಳೂರು, ಬೆಳ್ತಂಗಡಿ ಹಾಗೂ ಬೆಂಗಳೂರಿನಲ್ಲಿ ಸುಮಾರು 56 ಜನಪರ ಸಂಘಟನೆಗಳು ಒಗ್ಗೂಡಿ ನ್ಯಾಯಕ್ಕಾಗಿ ಹೋರಾಡಿದ ಪರಿಣಾಮದಿಂದಾಗಿ ಮಾತ್ರ ಆ ಪ್ರಕರಣ ಸಿಬಿಐ ತನಿಖೆಗೆ ಹೋಗಿತ್ತು. ಇದೀಗ ಸೌಜನ್ಯ ಪ್ರಕರಣದೊಟ್ಟಿಗೆ ಅದೇ ರೀತಿಯ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವ ಈ ಸನ್ನಿವೇಶದಲ್ಲಿ, ಎಲ್ಲ ನೊಂದವರಿಗೆ ನ್ಯಾಯ ದೊರಕುವವರೆಗೆ ಈ ವೇದಿಕೆಯ ಹೋರಾಟ ಮುಂದುವರಿಯಲಿದೆ” ಎಂದು ಪ್ರತಿಪಾದಿಸಿದರು.

ಹಿರಿಯ ಸಾಹಿತಿ ದು.ಸರಸ್ವತಿ ಮಾತನಾಡಿ, “ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರ, ದೌರ್ಜನ್ಯ ಹಾಗೂ ಅವರು ಇದನ್ನು ದಿಟ್ಟವಾಗಿ ಎದುರಿಸುತ್ತಿರುವುದು ಕೇವಲ ಹಿಂಸೆಯ ಖಂಡನೆಯಲ್ಲ, ಬದಲಾಗಿ ನನಗೆ ವ್ಯಕ್ತಿತ್ವ, ಗುರುತು ನೀಡಿರುವ ಈ ನನ್ನ ದೇಹ, ನನ್ನ ಹಕ್ಕು ಹಾಗೂ ಅದಕ್ಕೆ ಕಾಳಜಿ ವಹಿಸುವುದು ನನ್ನ ಹೊಣೆ ಎಂಬ ವಾಸ್ತವಕ್ಕೆ ಹೆಣ್ಣುಮಕ್ಕಳು ಎಚ್ಚೆತ್ತುಕೊಂಡಿದ್ದಾರೆಂಬುದಕ್ಕೆ ಉದಾಹರಣೆ” ಎಂದು ಹೇಳಿದರು.

ಸೌಜನ್ಯ ಪ್ರಕರಣದ ವಕೀಲರಲ್ಲಿ ಒಬ್ಬರಾದ ಮೋಹಿತ್ರ ಮಾತನಾಡಿ, “ಹಲವಾರು ಪ್ರಕರಣಗಳು ಕಣ್ಣ ಮುಂದಿದ್ದರೂ ಏಕೆ ಸತ್ಯ ಹೊರಗೆ ಬರುತ್ತಿಲ್ಲ ಎನ್ನುವುದು ಯಕ್ಷ ಪ್ರಶ್ನೆ. ಇದಕ್ಕೆ ಮುಖ್ಯ ಕಾರಣ ಈ ಪ್ರಕರಣಗಳು ಇದುವರೆಗೂ ತನಿಖೆಯಾಗದ ರೀತಿ. ಇದರಲ್ಲಿ ಬೆಳ್ತಂಗಡಿ ಪೋಲೀಸರ ಒಂದು ಪ್ಯಾಟರ್ನ್ ಕಾಣಸಿಗುತ್ತಿದೆ. ಬಹುಪಾಲು ಎಲ್ಲ ಪ್ರಕರಣಗಳಲ್ಲೂ ತನಿಖೆಯಲ್ಲಿ ಅಪಾರ ಲೋಪಗಳು, ಸಾಕ್ಷಿಗಳ ಆತ್ಮಹತ್ಯೆ ಅಥವಾ ಸಾವು, ಅಮಾಯಕರ ಮೇಲೆ ಆರೋಪ, ಅದರಿಂದಾಗಿ ಕೊನೆಗೆ ಪ್ರಕರಣದ ಮುಚ್ಚುವಿಕೆ… ಇದೇ ವಿಧಾನ ಕಾಣಬರುತ್ತದೆ. ಯಾಕೆ ಯಾವುದೇ ತನಿಖೆ ನಡೆದ ದಾಖಲೆಗಳಿಲ್ಲ? ಹಲವಾರು ಪ್ರಕರಣಗಳಲ್ಲಿ ಅಲ್ಲಿಗೆ ಬಂದ ಶ್ವಾನ ದಳ ಹಾಗೂ ಪೋರೀನ್ಸಿಕ್ ತಜ್ಙರನ್ನು ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೋಲೀಸರು ಕರೆದುಕೊಂಡು ಹೋಗಲಿಲ್ಲ ಯಾಕೆ? ಸೌಜನ್ಯ ತಾಯಿಯನ್ನು ವಿಟ್ನೆಸ್ ಅಗಿ ಪರಿಗಣಿಸಲಿಲ್ಲ. ಈ ಪ್ರಶ್ನೆಗಳನ್ನು ನಾವು ಕೇಳಬೇಕಾಗಿದೆ” ಎಂದರು.

ಪ್ರಮುಖ ಬೇಡಿಕೆಗಳು:

1. ವಿಶೇಷ ತನಿಖಾ ತಂಡವು ಸ್ವತಂತ್ರವಾಗಿ, ಮುಕ್ತವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ದಶಕಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು.
2. ಸೌಜನ್ಯ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ತನಿಖೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು.
3. ಲಿಂಗತ್ವ ನ್ಯಾಯ ಮತ್ತು ಹೊಣೆಗಾರಿಕೆಯನ್ನು ಖಾತ್ರಿಪಡಿಸಲು ಎಸ್‌ಐಟಿಯನ್ನು ಬೆಂಬಲಿಸುವ, ಮಹಿಳಾ ಹಕ್ಕುಗಳ ಪರಿಣತರಿರುವ ಸ್ವತಂತ್ರ ಬೆಂಬಲ ತಂಡವನ್ನು ರಚಿಸಬೇಕು; ಸಾಕ್ಷಿಗಳು ಮತ್ತು ದೂರುದಾರರು ಭೀತಿಯಿಲ್ಲದೆ ದೂರು ಸಲ್ಲಿಸಲು ಅನುವಾಗುವಂತೆ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ, ಭದ್ರತೆ ಮತ್ತು ಗೌಪ್ಯತೆಯನ್ನು ಒದಗಿಸಬೇಕು.
4. ಧಾರ್ಮಿಕ ಕೇಂದ್ರಗಳನ್ನೂ ಒಳಗೊಂಡಂತೆ ಎಲ್ಲಾಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿಕಡ್ಡಾಯವಾಗಿನಿಯಮಗಳನ್ನು ರೂಪಿಸಬೇಕು.
5. ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸೆಯನ್ನು ತಡೆಗಟ್ಟಲು ಶಿಫಾರಸ್ಸುಗಳನ್ನು ಮಾಡಿರುವ ಉಗ್ರಪ್ಪ ಸಮಿತಿ ವರದಿ ಮತ್ತು ನ್ಯಾಯಮೂರ್ತಿ ವರ್ಮಾ ಸಮಿತಿ ವರದಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಪರಿಣತರ ಸಮಿತಿಯೊಂದನ್ನು ರಚಿಸಬೇಕು ಎಂಬ ಬೇಡಿಕೆಗಳನ್ನು “ಕೊಂದವರು ಯಾರು” ಆಂದೋಲನವು ಸರ್ಕಾರಕ್ಕೆ ಮಂಡಿಸಿತು.

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...