Homeಕರ್ನಾಟಕ'ಧರ್ಮಸ್ಥಳದಲ್ಲಿ ಕೊಂದವರು ಯಾರು..?'; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

‘ಧರ್ಮಸ್ಥಳದಲ್ಲಿ ಕೊಂದವರು ಯಾರು..?’; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

- Advertisement -
- Advertisement -

ಧರ್ಮಸ್ಥಳದ ಸುತ್ತಲ ಗ್ರಾಮಗಳಲ್ಲಿ ವರದಿಯಾಗಿರುವ ನೂರಾರು ಮಹಿಳೆಯರ ಅತ್ಯಾಚಾರ, ಕೊಲೆ, ಅನುಮಾನಾಸ್ಪದ ಸಾವುಗಳ ಪ್ರಕರಣಗಳನ್ನು ತನಿಖೆ ಮಾಡಲು ರಚಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಯಾವ ಒತ್ತಡಗಳಿಲ್ಲದೆ, ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಅಗತ್ಯ ಅಧಿಕಾರವನ್ನು ಹಾಗೂ ಅವಕಾಶವನ್ನು ಒದಗಿಸಬೇಕು ಎಂದು ‘ಕೊಂದವರು ಯಾರು’ ಆಂದೋಲನವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆರಂಭವಾದ “ಕೊಂದವರು ಯಾರು” ಆಂದೋಲನವು, ‘ನೊಂದವರೊಂದಿಗೆ ನಾವಿದ್ದೇವೆ’ ಎಂದು ಘೋಷಿಸಿತು. ಜೊತೆಗೆ, ಎಲ್ಲ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ತನಿಖೆಯನ್ನು ಸರಿಯಾಗಿ ನಡೆಸದೆ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳು, ವೈದ್ಯರು, ತನಿಖಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನೂ ಅಪರಾಧಿಗಳೆಂದು ಪರಿಗಣಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿತು.

ನೊಂದ ಕುಟುಂಬಗಳನ್ನು ಭೇಟಿ ಮಾಡಿದ ಅನುಭವಗಳನ್ನು ಹಂಚಿಕೊಂಡ ಮಾನಸ ಬಳಗದ ಚಂಪಾವತಿ, “ಮಹಿಳಾ ಚಳವಳಿಯು ಸದಾಕಾಲ ನೊಂದವರ ಜೊತೆ ನಿಂತಿದೆ, ಆದ್ದರಿಂದಲೇ ಧರ್ಮಸ್ಥಳದ ನೊಂದ ಕುಟುಂಬಗಳನ್ನು ಭೇಟಿ ಮಾಡುವುದು ನಮಗೆ ಅತ್ಯಗತ್ಯವಾಗಿತ್ತು” ಎಂದರು.

ಮಹಿಳಾ ಮುನ್ನಡೆ ಸಂಘಟನೆಯ ಮಲ್ಲಿಗೆ ಮಾತನಾಡಿ, “ಧರ್ಮಸ್ಥಳದಲ್ಲಿ ನಡೆದಿರುವ ಹಲವಾರು ಹೆಣ್ಣುಮಕ್ಕಳ ಅಪಹರಣ, ಅತ್ಯಾಚಾರ, ಕೊಲೆಗಳ ವಿರುದ್ದ ಹೋರಾಟ ಸುಧೀಘ ಕಾಲದಿಂದ ನಡೆದುಬಂದಿದೆ. ನಿರಂತರವಾಗಿ, ಅಂತರ್ಗಾಮಿಯಾಗಿ ಸ್ಥಳೀಯರು ಈ ಹೋರಾಟವನ್ನು ಆರದಂತೆ ಮುನ್ನಡೆಸುತ್ತಿದ್ದಾರೆ. ಇವರೊಂದಿಗೆ ʼಕೊಂದವರು ಯಾರು?ʼ ವೇದಿಕೆಯೂ ಜೊತೆನಿಂತಿದ್ದು, ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಮುಂದುವರೆಯಲಿದೆ” ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್ ವಿಮಲಾ ಮಾತನಾಡಿ, “ನಿನ್ನೆ ವಿಶ್ವ ಪ್ರಜಾಪ್ರಭುತ್ವದ ದಿನ; ವಿಪರ್ಯಾಸವೆದಂರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಪ್ರಭುತ್ವದ ಅಣಕವಾಗುತ್ತಿದೆ. ಧರ್ಮಸ್ಥಳದಲ್ಲಿ ಹಲವಾರುಹೆಣ್ಣುಮಕ್ಕಳ ಕೊಲೆಯಾಗಿದ್ದರೂ, ಇನ್ನೂ ತಪ್ಪಿಸ್ಥರಿಗೆ ಶಿಕ್ಷೆಕೊಡಿಸುವಲ್ಲಿ ವಿಳಂಬವಾಗುತ್ತಿದೆ. ವೇದವಲ್ಲಿ ಪ್ರಕರಣದಲ್ಲಿ ಗಂಡನನ್ನೇ ಆರೋಪಿಯನ್ನಾಗಿ ಮಾಡಿದ್ದರು. ಪದ್ಮಲತರವರ ಪ್ರಕರಣದಲ್ಲಿಯೂ ದೇವಾನಂದ್ ರವರನ್ನು ಆರೋಪಿಗಳನ್ನಾಗಿ ಮಾಡುವ ಷಡ್ಯಂತ್ರ ನಡೆಯಿತು. ಸೌಜನ್ಯ ಪ್ರಕರಣದಲ್ಲೂ ಮಾವನನ್ನೇ ಆರೋಪಿಯನ್ನಾಗಿ ಬಿಂಬಿಸುವ ಪ್ರಯತ್ನ ನಡೆಯಿತು” ಎಂದರು.

“ನಾವು ನೊಂದವರ ಸಂಭಂಧಿಕರನ್ನು ಮಾತನಾಡಿಸಿದಾಗ ಧರ್ಮಸ್ಥಳದಲ್ಲಿ ನಡೆದಿರುವ ಹಲವು ಕೇಸ್‌ಗಳಲ್ಲಿ ಸೂಕ್ತ ತನಿಖೆ ಮಾಡಬೇಕಿದ್ದ ಪೋಲೀಸರೇ ಯಾವುದೋ ಖಾಸಗಿ ಸಂಸ್ಥೆಯ ವಾಹನದಲ್ಲಿ ಬಂದು ಜನರಿಗೆ ಬೆದರಿಕೆ ನೀಡಿದ ಪ್ರಸಂಗಳಿವೆ. ಹೀಗೆ, ಪ್ರಜಾತಾಂತ್ರಿಕವಾಗಿ ಕೆಲಸ ಮಾಡಬೇಕಾದ ಸಂಸ್ಥೆಗಳೇ ಇಲ್ಲಿ ವಿಫಲವಾಗಿರುವುದೇ ನ್ಯಾಯದೊರಕುವುದರಲ್ಲಾಗುತ್ತಿರುವ ವಿಳಂಬಕ್ಕೆ ಕಾರಣ. ಸೌಜನ್ಯ ಪ್ರಕರಣದಲ್ಲಿ ಈ ಹಿಂದೆ, ಮಂಗಳೂರು, ಬೆಳ್ತಂಗಡಿ ಹಾಗೂ ಬೆಂಗಳೂರಿನಲ್ಲಿ ಸುಮಾರು 56 ಜನಪರ ಸಂಘಟನೆಗಳು ಒಗ್ಗೂಡಿ ನ್ಯಾಯಕ್ಕಾಗಿ ಹೋರಾಡಿದ ಪರಿಣಾಮದಿಂದಾಗಿ ಮಾತ್ರ ಆ ಪ್ರಕರಣ ಸಿಬಿಐ ತನಿಖೆಗೆ ಹೋಗಿತ್ತು. ಇದೀಗ ಸೌಜನ್ಯ ಪ್ರಕರಣದೊಟ್ಟಿಗೆ ಅದೇ ರೀತಿಯ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವ ಈ ಸನ್ನಿವೇಶದಲ್ಲಿ, ಎಲ್ಲ ನೊಂದವರಿಗೆ ನ್ಯಾಯ ದೊರಕುವವರೆಗೆ ಈ ವೇದಿಕೆಯ ಹೋರಾಟ ಮುಂದುವರಿಯಲಿದೆ” ಎಂದು ಪ್ರತಿಪಾದಿಸಿದರು.

ಹಿರಿಯ ಸಾಹಿತಿ ದು.ಸರಸ್ವತಿ ಮಾತನಾಡಿ, “ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರ, ದೌರ್ಜನ್ಯ ಹಾಗೂ ಅವರು ಇದನ್ನು ದಿಟ್ಟವಾಗಿ ಎದುರಿಸುತ್ತಿರುವುದು ಕೇವಲ ಹಿಂಸೆಯ ಖಂಡನೆಯಲ್ಲ, ಬದಲಾಗಿ ನನಗೆ ವ್ಯಕ್ತಿತ್ವ, ಗುರುತು ನೀಡಿರುವ ಈ ನನ್ನ ದೇಹ, ನನ್ನ ಹಕ್ಕು ಹಾಗೂ ಅದಕ್ಕೆ ಕಾಳಜಿ ವಹಿಸುವುದು ನನ್ನ ಹೊಣೆ ಎಂಬ ವಾಸ್ತವಕ್ಕೆ ಹೆಣ್ಣುಮಕ್ಕಳು ಎಚ್ಚೆತ್ತುಕೊಂಡಿದ್ದಾರೆಂಬುದಕ್ಕೆ ಉದಾಹರಣೆ” ಎಂದು ಹೇಳಿದರು.

ಸೌಜನ್ಯ ಪ್ರಕರಣದ ವಕೀಲರಲ್ಲಿ ಒಬ್ಬರಾದ ಮೋಹಿತ್ರ ಮಾತನಾಡಿ, “ಹಲವಾರು ಪ್ರಕರಣಗಳು ಕಣ್ಣ ಮುಂದಿದ್ದರೂ ಏಕೆ ಸತ್ಯ ಹೊರಗೆ ಬರುತ್ತಿಲ್ಲ ಎನ್ನುವುದು ಯಕ್ಷ ಪ್ರಶ್ನೆ. ಇದಕ್ಕೆ ಮುಖ್ಯ ಕಾರಣ ಈ ಪ್ರಕರಣಗಳು ಇದುವರೆಗೂ ತನಿಖೆಯಾಗದ ರೀತಿ. ಇದರಲ್ಲಿ ಬೆಳ್ತಂಗಡಿ ಪೋಲೀಸರ ಒಂದು ಪ್ಯಾಟರ್ನ್ ಕಾಣಸಿಗುತ್ತಿದೆ. ಬಹುಪಾಲು ಎಲ್ಲ ಪ್ರಕರಣಗಳಲ್ಲೂ ತನಿಖೆಯಲ್ಲಿ ಅಪಾರ ಲೋಪಗಳು, ಸಾಕ್ಷಿಗಳ ಆತ್ಮಹತ್ಯೆ ಅಥವಾ ಸಾವು, ಅಮಾಯಕರ ಮೇಲೆ ಆರೋಪ, ಅದರಿಂದಾಗಿ ಕೊನೆಗೆ ಪ್ರಕರಣದ ಮುಚ್ಚುವಿಕೆ… ಇದೇ ವಿಧಾನ ಕಾಣಬರುತ್ತದೆ. ಯಾಕೆ ಯಾವುದೇ ತನಿಖೆ ನಡೆದ ದಾಖಲೆಗಳಿಲ್ಲ? ಹಲವಾರು ಪ್ರಕರಣಗಳಲ್ಲಿ ಅಲ್ಲಿಗೆ ಬಂದ ಶ್ವಾನ ದಳ ಹಾಗೂ ಪೋರೀನ್ಸಿಕ್ ತಜ್ಙರನ್ನು ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೋಲೀಸರು ಕರೆದುಕೊಂಡು ಹೋಗಲಿಲ್ಲ ಯಾಕೆ? ಸೌಜನ್ಯ ತಾಯಿಯನ್ನು ವಿಟ್ನೆಸ್ ಅಗಿ ಪರಿಗಣಿಸಲಿಲ್ಲ. ಈ ಪ್ರಶ್ನೆಗಳನ್ನು ನಾವು ಕೇಳಬೇಕಾಗಿದೆ” ಎಂದರು.

ಪ್ರಮುಖ ಬೇಡಿಕೆಗಳು:

1. ವಿಶೇಷ ತನಿಖಾ ತಂಡವು ಸ್ವತಂತ್ರವಾಗಿ, ಮುಕ್ತವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ದಶಕಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು.
2. ಸೌಜನ್ಯ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ತನಿಖೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು.
3. ಲಿಂಗತ್ವ ನ್ಯಾಯ ಮತ್ತು ಹೊಣೆಗಾರಿಕೆಯನ್ನು ಖಾತ್ರಿಪಡಿಸಲು ಎಸ್‌ಐಟಿಯನ್ನು ಬೆಂಬಲಿಸುವ, ಮಹಿಳಾ ಹಕ್ಕುಗಳ ಪರಿಣತರಿರುವ ಸ್ವತಂತ್ರ ಬೆಂಬಲ ತಂಡವನ್ನು ರಚಿಸಬೇಕು; ಸಾಕ್ಷಿಗಳು ಮತ್ತು ದೂರುದಾರರು ಭೀತಿಯಿಲ್ಲದೆ ದೂರು ಸಲ್ಲಿಸಲು ಅನುವಾಗುವಂತೆ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ, ಭದ್ರತೆ ಮತ್ತು ಗೌಪ್ಯತೆಯನ್ನು ಒದಗಿಸಬೇಕು.
4. ಧಾರ್ಮಿಕ ಕೇಂದ್ರಗಳನ್ನೂ ಒಳಗೊಂಡಂತೆ ಎಲ್ಲಾಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿಕಡ್ಡಾಯವಾಗಿನಿಯಮಗಳನ್ನು ರೂಪಿಸಬೇಕು.
5. ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸೆಯನ್ನು ತಡೆಗಟ್ಟಲು ಶಿಫಾರಸ್ಸುಗಳನ್ನು ಮಾಡಿರುವ ಉಗ್ರಪ್ಪ ಸಮಿತಿ ವರದಿ ಮತ್ತು ನ್ಯಾಯಮೂರ್ತಿ ವರ್ಮಾ ಸಮಿತಿ ವರದಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಪರಿಣತರ ಸಮಿತಿಯೊಂದನ್ನು ರಚಿಸಬೇಕು ಎಂಬ ಬೇಡಿಕೆಗಳನ್ನು “ಕೊಂದವರು ಯಾರು” ಆಂದೋಲನವು ಸರ್ಕಾರಕ್ಕೆ ಮಂಡಿಸಿತು.

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...