Homeಕರ್ನಾಟಕಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ.

- Advertisement -
- Advertisement -

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಈ ಕ್ಷಣಕ್ಕೂ ನಂಬಲು ಸಿದ್ದರಿಲ್ಲ. ಆದರೆ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಈ ಘಟನೆಯೇ ಆತ್ಮಹತ್ಯೆಗೆ ಕಾರಣ ಎಂಬ ಚರ್ಚೆಗಳು ಕೇಳಿ ಬರುತ್ತಿವೆ.

ಧರ್ಮೇಗೌಡರು ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜಕೀಯ ಜೀವನ ಮುನ್ನಡೆಸಿಕೊಂಡು ಬಂದವರು. ಅವರು ಜೆಡಿಎಸ್‌ಗೆ ನಿಷ್ಠರಾಗಿದ್ದರೂ ಎದುರಾಳಿ ಪಕ್ಷದವರೊಂದಿಗೆ ಎಲ್ಲಿಯೂ ಸಂಘರ್ಷಾತ್ಮಕ ರಾಜಕಾರಣಕ್ಕೆ ಇಳಿದವರಲ್ಲ. ದ್ವೇ಼ಷ ಬೆಳೆಸಿಕೊಂಡಂತಹ ಯಾವ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರಲ್ಲ, ಎಂತಹುದ್ದೆ ಸಂದರ್ಭದಲ್ಲೂ ಧೈರ್ಯ, ಆತ್ಮವಿಶ್ವಾಸ ಕಳೆದುಕೊಂಡದ್ದನ್ನು ಅವರ ಹಿಂಬಾಲಕರು, ಸ್ನೇಹಿತರು, ಅವರನ್ನು ಹತ್ತಿರದಿಂದ ಬಲ್ಲ ಯಾರೊಬ್ಬರು ಕಂಡಿದ್ದಿಲ್ಲ. ಗಂಡೆದೆಯ ವ್ಯಕ್ತಿತ್ವ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಕೌಟುಂಬಿಕವಾಗಿ ಅಂತಹ ಯಾವ ಸಮಸ್ಯೆಗಳೂ ಇರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಸಹೋದರ ಎಂಎಲ್‌ಸಿಯೂ ಆಗಿರುವ ಭೋಜೇಗೌಡರೊಂದಿಗೂ ಆಪ್ತತೆ ದಟ್ಟವಾಗಿತ್ತು. ಇನ್ನೂ ರಾಜಕೀಯವಾಗಿ ಉಪಸಭಾಪತಿಯಂತ‌ ಘನ ಹುದ್ದೆಯೇ ಅನಿರೀಕ್ಷಿತವಾಗಿ ದಕ್ಕಿತ್ತು. ಅದರಾಚೆ ಉನ್ನತ ಹುದ್ದೆಯ ಯಾವ ಆಕಾಂಕ್ಷೆಗಳನ್ನು ಅವರು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಿರಲಿಲ್ಲ. ಹೀಗಿದ್ದಾಗ್ಯೂ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವಂತ ಪ್ರಬಲ ಕಾರಣವಾದರೂ ಏನಿತ್ತು ಎಂಬ ಮಿಲಿಯನ್ ಪ್ರಶ್ನೆಗಳು ಸದ್ಯಕ್ಕೆ ಎಲ್ಲರನ್ನು ಕಾಡುತ್ತಿವೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಆಪ್ತ ಧರ್ಮೇಗೌಡರ ಆತ್ಮಹತ್ಯೆಗೆ “ರಾಜಕೀಯ ವ್ಯವಸ್ಥೆ, ವಿಧಾನ ಪರಿಷತ್ತಿನಲ್ಲಿ ನಡೆದ ವಿದ್ಯಮಾನಗಳೇ ಕಾರಣ, ಅವರದ್ದು ರಾಜಕೀಯ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಸ್ಥಿತಿಗೆ ಕಾರಣರ್ಯಾರು ಎಂಬುದು ತನಿಖೆ ಆಗಬೇಕು. ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಆರೋಪಕ್ಕೆ ಬಿಜೆಪಿ, ಕಾಂಗ್ರೇಸ್ ನಾಯಕರು ಪ್ರತಿಕ್ರಿಯೆ ಕೊಡದೆ ಪ್ರಕರಣವನ್ನು ರಾಜಕೀಕರಣಗೊಳಿಸದೆ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಹಾಗೊಮ್ಮೆ ಕುಮಾರಸ್ವಾಮಿ ಅವರ ಹೇಳಿಕೆಯಂತೆ ಇತ್ತೀಚೆಗೆ ವಿಧಾನಪರಿಷತ್ತಿನಲ್ಲಿ ನಡೆದ ರಾಜಕೀಯ ಗಲಾಟೆಯೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ ಎಂಬುದು ನಿಜವಾದರೆ, ಅದಕ್ಕೆ ಎಲ್ಲಾ ರಾಜಕೀಯ ಪಕ್ಷಗಳೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಸಂವಿಧಾನ ರಿವಾಜ್ಹುಗಳನ್ನು ಕಾಲಕಸವಾಗಿಸಿಕೊಂಡು ತುಳಿದಾಡಿದವರ ದರ್ಪಕ್ಕೆ ಧರ್ಮೇಗೌಡರಂತ ಗಟ್ಟಿ ಮನುಷ್ಯನೂ ಕುಸಿದು ಆತ್ಮಹತ್ಯೆಗೆ ತಲೆಯೊಡ್ಡಿಬಿಟ್ಟರಾ? ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆಯೇ ಆಗುತ್ತದೆ. ಇದಕ್ಕೆ ಮೂರೂ ಪಕ್ಷಗಳು ಕೊಲೆಪಾತಕರಾಗಿ ಕಟಕಟೆಗೆ ನಿಲ್ಲಬೇಕಾಗುತ್ತದೆ.

ರಾಜಕೀಯ ಮೌಲ್ಯಗಳು, ಸಂವಿಧಾನಿಕ ನಿಯಮಗಳ ಪಾಲನೆ ಮಣ್ಣುಪಾಲಾಗಿ ಯಾವುದೋ ಕಾಲವಾಗಿವೆ. ಈಗ ಉಳಿದಿರುವುದು ಕೇವಲ “ದಂಧೆಕೋರ ರಾಜಕಾರಣ” ಮಾತ್ರ. ಇದಕ್ಕೆ ಯಾರು ಬಲಿಯಾದರೂ ಆಶ್ಚರ್ಯಪಡುವಂತಿಲ್ಲ. ಧರ್ಮೇಗೌಡರು ಅನೇಕ ಅನುಮಾನ, ಸಂದೇಶಗಳನ್ನು ಬಿಟ್ಟು ಹೋಗಿದ್ದಾರೆ. ಅದು ನಿಷ್ಪಕ್ಷಪಾತ ತನಿಖೆಯಿಂದ ಬಯಲಾಗಬೇಕು.


ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. YELLA MUGIDA MELEW MATADUVADE DHARMA SAMRAJYA!
    MAULYAGALU KUSIYUTTIVE PAKSHA MUKHANDARINDA.. YIDARALLI GEDDAVARESTO SOTU SUNNAVADAVARESTO LEKKAKKILLA!

  2. tomorrow news today! vidhana parishattina man haraju madidantayitalla annuva sandarbhadalli dharmegoudar marana parishatti gene maran mridanga hadidantagide?!!! adara mana marya de ulisalosugavadaru. siddhavagiruva varadi oppikollabeku???!!!>!< pranesha obba aparadhi sthanadalliddanendu bahiranga sabeetagihogide aste satya! yinnulida reetineeti anusarisuvadadare " SABHAPATI STHANADA MARYADEYANNADARU KAPADA BEKASTE ALLAVE? yidukaran parisha sabhapati sthanakke gourava needuvadadalli .. yeegiruva sabhapatiyannu khurchiyinda yilisuvalli yavude artha kanadu?" bre arthakkene bele koduvadadalli avara rajiname sweekratavadante annusutte! adarina sadanada ghanate mattastu mannu palu madidanteye allave??!

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...