Homeಕರ್ನಾಟಕಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ.

- Advertisement -
- Advertisement -

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಈ ಕ್ಷಣಕ್ಕೂ ನಂಬಲು ಸಿದ್ದರಿಲ್ಲ. ಆದರೆ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಈ ಘಟನೆಯೇ ಆತ್ಮಹತ್ಯೆಗೆ ಕಾರಣ ಎಂಬ ಚರ್ಚೆಗಳು ಕೇಳಿ ಬರುತ್ತಿವೆ.

ಧರ್ಮೇಗೌಡರು ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜಕೀಯ ಜೀವನ ಮುನ್ನಡೆಸಿಕೊಂಡು ಬಂದವರು. ಅವರು ಜೆಡಿಎಸ್‌ಗೆ ನಿಷ್ಠರಾಗಿದ್ದರೂ ಎದುರಾಳಿ ಪಕ್ಷದವರೊಂದಿಗೆ ಎಲ್ಲಿಯೂ ಸಂಘರ್ಷಾತ್ಮಕ ರಾಜಕಾರಣಕ್ಕೆ ಇಳಿದವರಲ್ಲ. ದ್ವೇ಼ಷ ಬೆಳೆಸಿಕೊಂಡಂತಹ ಯಾವ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರಲ್ಲ, ಎಂತಹುದ್ದೆ ಸಂದರ್ಭದಲ್ಲೂ ಧೈರ್ಯ, ಆತ್ಮವಿಶ್ವಾಸ ಕಳೆದುಕೊಂಡದ್ದನ್ನು ಅವರ ಹಿಂಬಾಲಕರು, ಸ್ನೇಹಿತರು, ಅವರನ್ನು ಹತ್ತಿರದಿಂದ ಬಲ್ಲ ಯಾರೊಬ್ಬರು ಕಂಡಿದ್ದಿಲ್ಲ. ಗಂಡೆದೆಯ ವ್ಯಕ್ತಿತ್ವ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಕೌಟುಂಬಿಕವಾಗಿ ಅಂತಹ ಯಾವ ಸಮಸ್ಯೆಗಳೂ ಇರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಸಹೋದರ ಎಂಎಲ್‌ಸಿಯೂ ಆಗಿರುವ ಭೋಜೇಗೌಡರೊಂದಿಗೂ ಆಪ್ತತೆ ದಟ್ಟವಾಗಿತ್ತು. ಇನ್ನೂ ರಾಜಕೀಯವಾಗಿ ಉಪಸಭಾಪತಿಯಂತ‌ ಘನ ಹುದ್ದೆಯೇ ಅನಿರೀಕ್ಷಿತವಾಗಿ ದಕ್ಕಿತ್ತು. ಅದರಾಚೆ ಉನ್ನತ ಹುದ್ದೆಯ ಯಾವ ಆಕಾಂಕ್ಷೆಗಳನ್ನು ಅವರು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಿರಲಿಲ್ಲ. ಹೀಗಿದ್ದಾಗ್ಯೂ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವಂತ ಪ್ರಬಲ ಕಾರಣವಾದರೂ ಏನಿತ್ತು ಎಂಬ ಮಿಲಿಯನ್ ಪ್ರಶ್ನೆಗಳು ಸದ್ಯಕ್ಕೆ ಎಲ್ಲರನ್ನು ಕಾಡುತ್ತಿವೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಆಪ್ತ ಧರ್ಮೇಗೌಡರ ಆತ್ಮಹತ್ಯೆಗೆ “ರಾಜಕೀಯ ವ್ಯವಸ್ಥೆ, ವಿಧಾನ ಪರಿಷತ್ತಿನಲ್ಲಿ ನಡೆದ ವಿದ್ಯಮಾನಗಳೇ ಕಾರಣ, ಅವರದ್ದು ರಾಜಕೀಯ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಸ್ಥಿತಿಗೆ ಕಾರಣರ್ಯಾರು ಎಂಬುದು ತನಿಖೆ ಆಗಬೇಕು. ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಆರೋಪಕ್ಕೆ ಬಿಜೆಪಿ, ಕಾಂಗ್ರೇಸ್ ನಾಯಕರು ಪ್ರತಿಕ್ರಿಯೆ ಕೊಡದೆ ಪ್ರಕರಣವನ್ನು ರಾಜಕೀಕರಣಗೊಳಿಸದೆ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಹಾಗೊಮ್ಮೆ ಕುಮಾರಸ್ವಾಮಿ ಅವರ ಹೇಳಿಕೆಯಂತೆ ಇತ್ತೀಚೆಗೆ ವಿಧಾನಪರಿಷತ್ತಿನಲ್ಲಿ ನಡೆದ ರಾಜಕೀಯ ಗಲಾಟೆಯೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ ಎಂಬುದು ನಿಜವಾದರೆ, ಅದಕ್ಕೆ ಎಲ್ಲಾ ರಾಜಕೀಯ ಪಕ್ಷಗಳೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಸಂವಿಧಾನ ರಿವಾಜ್ಹುಗಳನ್ನು ಕಾಲಕಸವಾಗಿಸಿಕೊಂಡು ತುಳಿದಾಡಿದವರ ದರ್ಪಕ್ಕೆ ಧರ್ಮೇಗೌಡರಂತ ಗಟ್ಟಿ ಮನುಷ್ಯನೂ ಕುಸಿದು ಆತ್ಮಹತ್ಯೆಗೆ ತಲೆಯೊಡ್ಡಿಬಿಟ್ಟರಾ? ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆಯೇ ಆಗುತ್ತದೆ. ಇದಕ್ಕೆ ಮೂರೂ ಪಕ್ಷಗಳು ಕೊಲೆಪಾತಕರಾಗಿ ಕಟಕಟೆಗೆ ನಿಲ್ಲಬೇಕಾಗುತ್ತದೆ.

ರಾಜಕೀಯ ಮೌಲ್ಯಗಳು, ಸಂವಿಧಾನಿಕ ನಿಯಮಗಳ ಪಾಲನೆ ಮಣ್ಣುಪಾಲಾಗಿ ಯಾವುದೋ ಕಾಲವಾಗಿವೆ. ಈಗ ಉಳಿದಿರುವುದು ಕೇವಲ “ದಂಧೆಕೋರ ರಾಜಕಾರಣ” ಮಾತ್ರ. ಇದಕ್ಕೆ ಯಾರು ಬಲಿಯಾದರೂ ಆಶ್ಚರ್ಯಪಡುವಂತಿಲ್ಲ. ಧರ್ಮೇಗೌಡರು ಅನೇಕ ಅನುಮಾನ, ಸಂದೇಶಗಳನ್ನು ಬಿಟ್ಟು ಹೋಗಿದ್ದಾರೆ. ಅದು ನಿಷ್ಪಕ್ಷಪಾತ ತನಿಖೆಯಿಂದ ಬಯಲಾಗಬೇಕು.


ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. YELLA MUGIDA MELEW MATADUVADE DHARMA SAMRAJYA!
    MAULYAGALU KUSIYUTTIVE PAKSHA MUKHANDARINDA.. YIDARALLI GEDDAVARESTO SOTU SUNNAVADAVARESTO LEKKAKKILLA!

  2. tomorrow news today! vidhana parishattina man haraju madidantayitalla annuva sandarbhadalli dharmegoudar marana parishatti gene maran mridanga hadidantagide?!!! adara mana marya de ulisalosugavadaru. siddhavagiruva varadi oppikollabeku???!!!>!< pranesha obba aparadhi sthanadalliddanendu bahiranga sabeetagihogide aste satya! yinnulida reetineeti anusarisuvadadare " SABHAPATI STHANADA MARYADEYANNADARU KAPADA BEKASTE ALLAVE? yidukaran parisha sabhapati sthanakke gourava needuvadadalli .. yeegiruva sabhapatiyannu khurchiyinda yilisuvalli yavude artha kanadu?" bre arthakkene bele koduvadadalli avara rajiname sweekratavadante annusutte! adarina sadanada ghanate mattastu mannu palu madidanteye allave??!

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...