Homeಕರ್ನಾಟಕಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ.

- Advertisement -
- Advertisement -

ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ರೈಲಿಗೆ ಸಿಕ್ಕು ಅತ್ಯಂತ ಧಾರುಣವಾಗಿ ಸಾವು ಕಂಡಿದ್ದಾರೆ. ಅವರದ್ದು ಆತ್ಮಹತ್ಯೆ ನಿಜ. ಧರ್ಮೇಗೌಡರನ್ನು ಬಲ್ಲವರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಈ ಕ್ಷಣಕ್ಕೂ ನಂಬಲು ಸಿದ್ದರಿಲ್ಲ. ಆದರೆ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅವರ ಜೇಬಿನಲ್ಲಿ ಸಿಕ್ಕ ಡೆತ್ ನೋಟ್‌ ಸಾಕ್ಷಿಯಾಗಿದೆ. ಆತ್ಮಹತ್ಯೆಗೆ ಅಂತಹ ಪ್ರಬಲವಾದ ಕಾರಣಗಳು ಆ ಪತ್ರದಲ್ಲಿಲ್ಲ. ಆದರೆ ಅದರಲ್ಲಿ ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ವಿದ್ಯಮಾನದ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಈ ಘಟನೆಯೇ ಆತ್ಮಹತ್ಯೆಗೆ ಕಾರಣ ಎಂಬ ಚರ್ಚೆಗಳು ಕೇಳಿ ಬರುತ್ತಿವೆ.

ಧರ್ಮೇಗೌಡರು ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜಕೀಯ ಜೀವನ ಮುನ್ನಡೆಸಿಕೊಂಡು ಬಂದವರು. ಅವರು ಜೆಡಿಎಸ್‌ಗೆ ನಿಷ್ಠರಾಗಿದ್ದರೂ ಎದುರಾಳಿ ಪಕ್ಷದವರೊಂದಿಗೆ ಎಲ್ಲಿಯೂ ಸಂಘರ್ಷಾತ್ಮಕ ರಾಜಕಾರಣಕ್ಕೆ ಇಳಿದವರಲ್ಲ. ದ್ವೇ಼ಷ ಬೆಳೆಸಿಕೊಂಡಂತಹ ಯಾವ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರಲ್ಲ, ಎಂತಹುದ್ದೆ ಸಂದರ್ಭದಲ್ಲೂ ಧೈರ್ಯ, ಆತ್ಮವಿಶ್ವಾಸ ಕಳೆದುಕೊಂಡದ್ದನ್ನು ಅವರ ಹಿಂಬಾಲಕರು, ಸ್ನೇಹಿತರು, ಅವರನ್ನು ಹತ್ತಿರದಿಂದ ಬಲ್ಲ ಯಾರೊಬ್ಬರು ಕಂಡಿದ್ದಿಲ್ಲ. ಗಂಡೆದೆಯ ವ್ಯಕ್ತಿತ್ವ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಕೌಟುಂಬಿಕವಾಗಿ ಅಂತಹ ಯಾವ ಸಮಸ್ಯೆಗಳೂ ಇರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಸಹೋದರ ಎಂಎಲ್‌ಸಿಯೂ ಆಗಿರುವ ಭೋಜೇಗೌಡರೊಂದಿಗೂ ಆಪ್ತತೆ ದಟ್ಟವಾಗಿತ್ತು. ಇನ್ನೂ ರಾಜಕೀಯವಾಗಿ ಉಪಸಭಾಪತಿಯಂತ‌ ಘನ ಹುದ್ದೆಯೇ ಅನಿರೀಕ್ಷಿತವಾಗಿ ದಕ್ಕಿತ್ತು. ಅದರಾಚೆ ಉನ್ನತ ಹುದ್ದೆಯ ಯಾವ ಆಕಾಂಕ್ಷೆಗಳನ್ನು ಅವರು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಿರಲಿಲ್ಲ. ಹೀಗಿದ್ದಾಗ್ಯೂ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವಂತ ಪ್ರಬಲ ಕಾರಣವಾದರೂ ಏನಿತ್ತು ಎಂಬ ಮಿಲಿಯನ್ ಪ್ರಶ್ನೆಗಳು ಸದ್ಯಕ್ಕೆ ಎಲ್ಲರನ್ನು ಕಾಡುತ್ತಿವೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಆಪ್ತ ಧರ್ಮೇಗೌಡರ ಆತ್ಮಹತ್ಯೆಗೆ “ರಾಜಕೀಯ ವ್ಯವಸ್ಥೆ, ವಿಧಾನ ಪರಿಷತ್ತಿನಲ್ಲಿ ನಡೆದ ವಿದ್ಯಮಾನಗಳೇ ಕಾರಣ, ಅವರದ್ದು ರಾಜಕೀಯ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಸ್ಥಿತಿಗೆ ಕಾರಣರ್ಯಾರು ಎಂಬುದು ತನಿಖೆ ಆಗಬೇಕು. ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಆರೋಪಕ್ಕೆ ಬಿಜೆಪಿ, ಕಾಂಗ್ರೇಸ್ ನಾಯಕರು ಪ್ರತಿಕ್ರಿಯೆ ಕೊಡದೆ ಪ್ರಕರಣವನ್ನು ರಾಜಕೀಕರಣಗೊಳಿಸದೆ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಹಾಗೊಮ್ಮೆ ಕುಮಾರಸ್ವಾಮಿ ಅವರ ಹೇಳಿಕೆಯಂತೆ ಇತ್ತೀಚೆಗೆ ವಿಧಾನಪರಿಷತ್ತಿನಲ್ಲಿ ನಡೆದ ರಾಜಕೀಯ ಗಲಾಟೆಯೇ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ ಎಂಬುದು ನಿಜವಾದರೆ, ಅದಕ್ಕೆ ಎಲ್ಲಾ ರಾಜಕೀಯ ಪಕ್ಷಗಳೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಸಂವಿಧಾನ ರಿವಾಜ್ಹುಗಳನ್ನು ಕಾಲಕಸವಾಗಿಸಿಕೊಂಡು ತುಳಿದಾಡಿದವರ ದರ್ಪಕ್ಕೆ ಧರ್ಮೇಗೌಡರಂತ ಗಟ್ಟಿ ಮನುಷ್ಯನೂ ಕುಸಿದು ಆತ್ಮಹತ್ಯೆಗೆ ತಲೆಯೊಡ್ಡಿಬಿಟ್ಟರಾ? ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆಯೇ ಆಗುತ್ತದೆ. ಇದಕ್ಕೆ ಮೂರೂ ಪಕ್ಷಗಳು ಕೊಲೆಪಾತಕರಾಗಿ ಕಟಕಟೆಗೆ ನಿಲ್ಲಬೇಕಾಗುತ್ತದೆ.

ರಾಜಕೀಯ ಮೌಲ್ಯಗಳು, ಸಂವಿಧಾನಿಕ ನಿಯಮಗಳ ಪಾಲನೆ ಮಣ್ಣುಪಾಲಾಗಿ ಯಾವುದೋ ಕಾಲವಾಗಿವೆ. ಈಗ ಉಳಿದಿರುವುದು ಕೇವಲ “ದಂಧೆಕೋರ ರಾಜಕಾರಣ” ಮಾತ್ರ. ಇದಕ್ಕೆ ಯಾರು ಬಲಿಯಾದರೂ ಆಶ್ಚರ್ಯಪಡುವಂತಿಲ್ಲ. ಧರ್ಮೇಗೌಡರು ಅನೇಕ ಅನುಮಾನ, ಸಂದೇಶಗಳನ್ನು ಬಿಟ್ಟು ಹೋಗಿದ್ದಾರೆ. ಅದು ನಿಷ್ಪಕ್ಷಪಾತ ತನಿಖೆಯಿಂದ ಬಯಲಾಗಬೇಕು.


ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. YELLA MUGIDA MELEW MATADUVADE DHARMA SAMRAJYA!
    MAULYAGALU KUSIYUTTIVE PAKSHA MUKHANDARINDA.. YIDARALLI GEDDAVARESTO SOTU SUNNAVADAVARESTO LEKKAKKILLA!

  2. tomorrow news today! vidhana parishattina man haraju madidantayitalla annuva sandarbhadalli dharmegoudar marana parishatti gene maran mridanga hadidantagide?!!! adara mana marya de ulisalosugavadaru. siddhavagiruva varadi oppikollabeku???!!!>!< pranesha obba aparadhi sthanadalliddanendu bahiranga sabeetagihogide aste satya! yinnulida reetineeti anusarisuvadadare " SABHAPATI STHANADA MARYADEYANNADARU KAPADA BEKASTE ALLAVE? yidukaran parisha sabhapati sthanakke gourava needuvadadalli .. yeegiruva sabhapatiyannu khurchiyinda yilisuvalli yavude artha kanadu?" bre arthakkene bele koduvadadalli avara rajiname sweekratavadante annusutte! adarina sadanada ghanate mattastu mannu palu madidanteye allave??!

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...