HomeಅಂಕಣಗಳುKarnataka against SIRನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

- Advertisement -
- Advertisement -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾನುವಾರ (ಜೂ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಿಂದ ಟ್ರಾಫಿಕ್ ಜಾಮ್ ಉಂಟಾಗಿ ನೀಟ್ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು.

ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ನಿರೀಕ್ಷೆ ಮೀರಿ ಜನರು ಭಾಗವಹಿಸಿ ಯಶಸ್ವಿ ಮಾಡಿದ್ದಾರೆ. ಆ ಸಮಯದಲ್ಲಿ ಬೆಂಗಳೂರಿನ ಜನರಿಗೆ ಟ್ರಾಫಿಕ್ ಸಮಸ್ಯೆ ಆಗುವ ಮೂಲಕ ಸಣ್ಣಪುಟ್ಟ ತೊಂದರೆಗಳಾಗಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ.

ಭಾನುವಾರ ಜನರ ಓಡಾಟ ಕಡಿಮೆ ಇರುವ ಕಾರಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆ ದಿನವೇ ನೀಟ್ ಪರೀಕ್ಷೆ ಇರುವ ಕಾರಣ ನೀಟ್ ಪರೀಕ್ಷೆಯ ಸಮಯವನ್ನು ನೋಡಿಯೇ ಕಾರ್ಯಕ್ರಮದ ವೇಳಾಪಟ್ಟಿಯನ್ನು ಕೂಡ ನಿಗದಿ ಮಾಡಿದ್ದೇವೆ. ಆದರೂ ನೀಟ್ ಪರೀಕ್ಷೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಎರಡು ಮೂರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೆ ಉಳಿದಿದ್ದಾರೆ ಎಂದು ನೋಡಿದೆ.

ನಮ್ಮ ಕಾರ್ಯಕ್ರಮದಿಂದ ಇಂತಹ ಪ್ರಮಾದ ನಡೆದಿದ್ದರೆ ಖಂಡಿತಾ ಪರೀಕ್ಷೆಗೆ ಹಾಜರಾಗದೆ ಇರುವ ಎರಡು-ಮೂರು ವಿದ್ಯಾರ್ಥಿಗಳಿಗೆ ಹಾಗೂ‌ ಜನ ಸಾಮಾನ್ಯರಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪರೀಕ್ಷೆಯಿಂದ ಹೊರಗುಳಿದಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ನಮ್ಮ ತಂಡ ಹೋಗಲಿದೆ. ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಗೊತ್ತಾಗಿದೆ.

ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ಮೇರೆಗೆ ನಮ್ಮ ಸರ್ಕಾರದ ಗೃಹ ಇಲಾಖೆ ಎರಡು ದಿನದ ಮುಂಚೆ ಬದಲಿ ರಸ್ತೆಗಳನ್ನು ಪ್ರಕಟಣೆ ಮಾಡಿತ್ತು. ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿತ್ತು. ಅದನ್ನು ಮೀರಿಯೂ ಲಕ್ಷಾಂತರ ಜನರು ನಮ್ಮ ಕಾರ್ಯಕ್ರಮಕ್ಕೆ ಬಂದಿರುವ ಕಾರಣ ಸಣ್ಣಪುಟ್ಟ ಲೋಪಗಳು ಆಗಿರಬಹುದು ಎಂದರು.

ಬಿಜೆಪಿಯ ನಾಯಕರ ಆರೋಪಗಳನ್ನು ನೋಡಿದ್ರೆ ಬಿಜೆಪಿ ನಾಯಕರಿಗೆ ನಾಚಿಕೆ ಅನ್ನೋದೇ ಇಲ್ವಾ? ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ದೇಶದಾದ್ಯಂತ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಯಾರು? ಎಂದು ಪ್ರಶ್ನಿಸಿದರು.

ಆತ್ಮಹತ್ಯೆಗಳು ಮಾಡಿಕೊಂಡ ವಿದ್ಯಾರ್ಥಿಗಳು ಆತ್ಮಹತ್ಯೆ ಪತ್ರವನ್ನು ಬರೆದು ಬಿಜೆಪಿ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಗೆ ಕಾರಣವಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಬಿಜೆಪಿಗೆ ಧೈರ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಯುವ ಸಂಸದರಿಗೆ ನೈತಿಕತೆ ಇದ್ದರೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಲಿ. ದೇಶದಾದ್ಯಂತ ವಿದ್ಯಾರ್ಥಿಗಳು ಏಕೆ ಆತಂಕಕ್ಕೆ ಒಳಗಾದರು? ಪ್ರಶ್ನೆ ಪತ್ರಿಕೆ ಸೋರಿಕೆ ಏಕೆ ನಡೆಯಿತು? ಪರೀಕ್ಷೆಯ ವಿಶ್ವಾಸಾರ್ಹತೆ ಏಕೆ ಕುಸಿಯಿತು? ಮರುಪರೀಕ್ಷೆಯ ಅನಿವಾರ್ಯತೆ ಏಕೆ ಎದುರಾಯಿತು? ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲು ಕಾಂಗ್ರೆಸ್ ಮೇಲೆ ಬೆರಳು ತೋರಿಸುವುದು ಬಿಜೆಪಿಯ ಹಳೆಯ ಚಾಳಿ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಉತ್ತರ ಕೊಡುವವರು ಯಾರು? ಪರೀಕ್ಷಾ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಹೋಗುವಂತೆ ಮಾಡಿದವರು ಯಾರು? ಎಂದು ಹರಿಪ್ರಸಾದ್ ಪ್ರಶ್ನಿಸಿದರು.

ಈಗ ಕರ್ನಾಟಕದಲ್ಲಿ ನಡೆದ ನಮ್ಮ ಕಾರ್ಯಕ್ರಮವನ್ನು ಕಾರಣವನ್ನಾಗಿ ಮಾಡಿ ವಿದ್ಯಾರ್ಥಿಗಳ ಗೈರುಹಾಜರಾತಿಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ. ಇದು ರಾಜಕೀಯ ದಿವಾಳಿತನದ ಪರಮಾವಧಿ. ಮೈಸೂರಿನಲ್ಲಿ 1,847 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಾದಗಿರಿಯಲ್ಲಿ 286 ಅಭ್ಯರ್ಥಿಗಳು ಗೈರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯದ ಹಲವೆಡೆ ಇದೇ ಪರಿಸ್ಥಿತಿ ಕಂಡುಬಂದಿದೆ. ಹಾಗಾದರೆ ಈ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಾರ್ಯಕ್ರಮ ನಡೆದಿತ್ತೇ? ಎಂದು ಕೇಳಿದರು.

ಬೆಂಗಳೂರಿನಲ್ಲಿ ಕಾರ್ಯಕ್ರಮ ಇತ್ತು ಎಂಬ ಕಾರಣಕ್ಕೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ ಎಂಬ ವಾದವನ್ನು ಮಾಡುವವರು ವಿದ್ಯಾರ್ಥಿಗಳ ನೋವನ್ನು ಯಾಕೆ ಮೊದಲೇ ಕೇಳಲಿಲ್ಲ. ಈ ಪ್ರಶ್ನೆಗಳಿಗೆ ಉತ್ತರ ನೀಡದೆ ಕಾಂಗ್ರೆಸ್ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ನಾವು ವಿದ್ಯಾರ್ಥಿಗಳ ಹಕ್ಕುಗಳ ಪರವಾಗಿ ನಿಲ್ಲುತ್ತೇವೆ. ಆದರೆ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜಕೀಯ ಆರೋಪಗಳ ಹಿಂದೆ ಅಡಗಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡಿದವರು ಇಂದು ನೀತಿ ಪಾಠ ಹೇಳಲು ಹೊರಟಿರುವುದು ಈ ದೇಶದ ದುರಂತ ಎಂದು ವಾಗ್ದಾಳಿ ನಡೆಸಿದರು.

ಮೊದಲು ನೀಟ್ ಹಗರಣದ ಬಗ್ಗೆ ದೇಶಕ್ಕೆ ಕ್ಷಮೆ ಕೇಳಿ. ನಂತರ ಕಾಂಗ್ರೆಸ್ ಬಗ್ಗೆ ಮಾತನಾಡಿ. ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರ ಬಾಯಲ್ಲಿ ನೈತಿಕತೆಯ ಮಾತುಗಳು ಶೋಭೆ ತರುವುದಿಲ್ಲ. ಮೊದಲು ಈ ದೇಶದ ಶಿಕ್ಷಣ ಸಚಿವ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗ ಅಧ್ಯಕ್ಷ ರಮೇಶ್ ಬಾಬು, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಎಂಎಲ್ ಸಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...