HomeಅಂಕಣಗಳುKarnataka against SIRನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

- Advertisement -
- Advertisement -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾನುವಾರ (ಜೂ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಿಂದ ಟ್ರಾಫಿಕ್ ಜಾಮ್ ಉಂಟಾಗಿ ನೀಟ್ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು.

ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ನಿರೀಕ್ಷೆ ಮೀರಿ ಜನರು ಭಾಗವಹಿಸಿ ಯಶಸ್ವಿ ಮಾಡಿದ್ದಾರೆ. ಆ ಸಮಯದಲ್ಲಿ ಬೆಂಗಳೂರಿನ ಜನರಿಗೆ ಟ್ರಾಫಿಕ್ ಸಮಸ್ಯೆ ಆಗುವ ಮೂಲಕ ಸಣ್ಣಪುಟ್ಟ ತೊಂದರೆಗಳಾಗಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ.

ಭಾನುವಾರ ಜನರ ಓಡಾಟ ಕಡಿಮೆ ಇರುವ ಕಾರಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆ ದಿನವೇ ನೀಟ್ ಪರೀಕ್ಷೆ ಇರುವ ಕಾರಣ ನೀಟ್ ಪರೀಕ್ಷೆಯ ಸಮಯವನ್ನು ನೋಡಿಯೇ ಕಾರ್ಯಕ್ರಮದ ವೇಳಾಪಟ್ಟಿಯನ್ನು ಕೂಡ ನಿಗದಿ ಮಾಡಿದ್ದೇವೆ. ಆದರೂ ನೀಟ್ ಪರೀಕ್ಷೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಎರಡು ಮೂರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೆ ಉಳಿದಿದ್ದಾರೆ ಎಂದು ನೋಡಿದೆ.

ನಮ್ಮ ಕಾರ್ಯಕ್ರಮದಿಂದ ಇಂತಹ ಪ್ರಮಾದ ನಡೆದಿದ್ದರೆ ಖಂಡಿತಾ ಪರೀಕ್ಷೆಗೆ ಹಾಜರಾಗದೆ ಇರುವ ಎರಡು-ಮೂರು ವಿದ್ಯಾರ್ಥಿಗಳಿಗೆ ಹಾಗೂ‌ ಜನ ಸಾಮಾನ್ಯರಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪರೀಕ್ಷೆಯಿಂದ ಹೊರಗುಳಿದಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ನಮ್ಮ ತಂಡ ಹೋಗಲಿದೆ. ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಗೊತ್ತಾಗಿದೆ.

ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ಮೇರೆಗೆ ನಮ್ಮ ಸರ್ಕಾರದ ಗೃಹ ಇಲಾಖೆ ಎರಡು ದಿನದ ಮುಂಚೆ ಬದಲಿ ರಸ್ತೆಗಳನ್ನು ಪ್ರಕಟಣೆ ಮಾಡಿತ್ತು. ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿತ್ತು. ಅದನ್ನು ಮೀರಿಯೂ ಲಕ್ಷಾಂತರ ಜನರು ನಮ್ಮ ಕಾರ್ಯಕ್ರಮಕ್ಕೆ ಬಂದಿರುವ ಕಾರಣ ಸಣ್ಣಪುಟ್ಟ ಲೋಪಗಳು ಆಗಿರಬಹುದು ಎಂದರು.

ಬಿಜೆಪಿಯ ನಾಯಕರ ಆರೋಪಗಳನ್ನು ನೋಡಿದ್ರೆ ಬಿಜೆಪಿ ನಾಯಕರಿಗೆ ನಾಚಿಕೆ ಅನ್ನೋದೇ ಇಲ್ವಾ? ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ದೇಶದಾದ್ಯಂತ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಯಾರು? ಎಂದು ಪ್ರಶ್ನಿಸಿದರು.

ಆತ್ಮಹತ್ಯೆಗಳು ಮಾಡಿಕೊಂಡ ವಿದ್ಯಾರ್ಥಿಗಳು ಆತ್ಮಹತ್ಯೆ ಪತ್ರವನ್ನು ಬರೆದು ಬಿಜೆಪಿ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಗೆ ಕಾರಣವಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಬಿಜೆಪಿಗೆ ಧೈರ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಯುವ ಸಂಸದರಿಗೆ ನೈತಿಕತೆ ಇದ್ದರೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಲಿ. ದೇಶದಾದ್ಯಂತ ವಿದ್ಯಾರ್ಥಿಗಳು ಏಕೆ ಆತಂಕಕ್ಕೆ ಒಳಗಾದರು? ಪ್ರಶ್ನೆ ಪತ್ರಿಕೆ ಸೋರಿಕೆ ಏಕೆ ನಡೆಯಿತು? ಪರೀಕ್ಷೆಯ ವಿಶ್ವಾಸಾರ್ಹತೆ ಏಕೆ ಕುಸಿಯಿತು? ಮರುಪರೀಕ್ಷೆಯ ಅನಿವಾರ್ಯತೆ ಏಕೆ ಎದುರಾಯಿತು? ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲು ಕಾಂಗ್ರೆಸ್ ಮೇಲೆ ಬೆರಳು ತೋರಿಸುವುದು ಬಿಜೆಪಿಯ ಹಳೆಯ ಚಾಳಿ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಉತ್ತರ ಕೊಡುವವರು ಯಾರು? ಪರೀಕ್ಷಾ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಹೋಗುವಂತೆ ಮಾಡಿದವರು ಯಾರು? ಎಂದು ಹರಿಪ್ರಸಾದ್ ಪ್ರಶ್ನಿಸಿದರು.

ಈಗ ಕರ್ನಾಟಕದಲ್ಲಿ ನಡೆದ ನಮ್ಮ ಕಾರ್ಯಕ್ರಮವನ್ನು ಕಾರಣವನ್ನಾಗಿ ಮಾಡಿ ವಿದ್ಯಾರ್ಥಿಗಳ ಗೈರುಹಾಜರಾತಿಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ. ಇದು ರಾಜಕೀಯ ದಿವಾಳಿತನದ ಪರಮಾವಧಿ. ಮೈಸೂರಿನಲ್ಲಿ 1,847 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಾದಗಿರಿಯಲ್ಲಿ 286 ಅಭ್ಯರ್ಥಿಗಳು ಗೈರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯದ ಹಲವೆಡೆ ಇದೇ ಪರಿಸ್ಥಿತಿ ಕಂಡುಬಂದಿದೆ. ಹಾಗಾದರೆ ಈ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಾರ್ಯಕ್ರಮ ನಡೆದಿತ್ತೇ? ಎಂದು ಕೇಳಿದರು.

ಬೆಂಗಳೂರಿನಲ್ಲಿ ಕಾರ್ಯಕ್ರಮ ಇತ್ತು ಎಂಬ ಕಾರಣಕ್ಕೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ ಎಂಬ ವಾದವನ್ನು ಮಾಡುವವರು ವಿದ್ಯಾರ್ಥಿಗಳ ನೋವನ್ನು ಯಾಕೆ ಮೊದಲೇ ಕೇಳಲಿಲ್ಲ. ಈ ಪ್ರಶ್ನೆಗಳಿಗೆ ಉತ್ತರ ನೀಡದೆ ಕಾಂಗ್ರೆಸ್ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ನಾವು ವಿದ್ಯಾರ್ಥಿಗಳ ಹಕ್ಕುಗಳ ಪರವಾಗಿ ನಿಲ್ಲುತ್ತೇವೆ. ಆದರೆ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜಕೀಯ ಆರೋಪಗಳ ಹಿಂದೆ ಅಡಗಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡಿದವರು ಇಂದು ನೀತಿ ಪಾಠ ಹೇಳಲು ಹೊರಟಿರುವುದು ಈ ದೇಶದ ದುರಂತ ಎಂದು ವಾಗ್ದಾಳಿ ನಡೆಸಿದರು.

ಮೊದಲು ನೀಟ್ ಹಗರಣದ ಬಗ್ಗೆ ದೇಶಕ್ಕೆ ಕ್ಷಮೆ ಕೇಳಿ. ನಂತರ ಕಾಂಗ್ರೆಸ್ ಬಗ್ಗೆ ಮಾತನಾಡಿ. ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರ ಬಾಯಲ್ಲಿ ನೈತಿಕತೆಯ ಮಾತುಗಳು ಶೋಭೆ ತರುವುದಿಲ್ಲ. ಮೊದಲು ಈ ದೇಶದ ಶಿಕ್ಷಣ ಸಚಿವ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗ ಅಧ್ಯಕ್ಷ ರಮೇಶ್ ಬಾಬು, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಎಂಎಲ್ ಸಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...