HomeಅಂಕಣಗಳುKarnataka against SIRನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

- Advertisement -
- Advertisement -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾನುವಾರ (ಜೂ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಿಂದ ಟ್ರಾಫಿಕ್ ಜಾಮ್ ಉಂಟಾಗಿ ನೀಟ್ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು.

ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ನಿರೀಕ್ಷೆ ಮೀರಿ ಜನರು ಭಾಗವಹಿಸಿ ಯಶಸ್ವಿ ಮಾಡಿದ್ದಾರೆ. ಆ ಸಮಯದಲ್ಲಿ ಬೆಂಗಳೂರಿನ ಜನರಿಗೆ ಟ್ರಾಫಿಕ್ ಸಮಸ್ಯೆ ಆಗುವ ಮೂಲಕ ಸಣ್ಣಪುಟ್ಟ ತೊಂದರೆಗಳಾಗಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ.

ಭಾನುವಾರ ಜನರ ಓಡಾಟ ಕಡಿಮೆ ಇರುವ ಕಾರಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆ ದಿನವೇ ನೀಟ್ ಪರೀಕ್ಷೆ ಇರುವ ಕಾರಣ ನೀಟ್ ಪರೀಕ್ಷೆಯ ಸಮಯವನ್ನು ನೋಡಿಯೇ ಕಾರ್ಯಕ್ರಮದ ವೇಳಾಪಟ್ಟಿಯನ್ನು ಕೂಡ ನಿಗದಿ ಮಾಡಿದ್ದೇವೆ. ಆದರೂ ನೀಟ್ ಪರೀಕ್ಷೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಎರಡು ಮೂರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೆ ಉಳಿದಿದ್ದಾರೆ ಎಂದು ನೋಡಿದೆ.

ನಮ್ಮ ಕಾರ್ಯಕ್ರಮದಿಂದ ಇಂತಹ ಪ್ರಮಾದ ನಡೆದಿದ್ದರೆ ಖಂಡಿತಾ ಪರೀಕ್ಷೆಗೆ ಹಾಜರಾಗದೆ ಇರುವ ಎರಡು-ಮೂರು ವಿದ್ಯಾರ್ಥಿಗಳಿಗೆ ಹಾಗೂ‌ ಜನ ಸಾಮಾನ್ಯರಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪರೀಕ್ಷೆಯಿಂದ ಹೊರಗುಳಿದಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ನಮ್ಮ ತಂಡ ಹೋಗಲಿದೆ. ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಗೊತ್ತಾಗಿದೆ.

ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ಮೇರೆಗೆ ನಮ್ಮ ಸರ್ಕಾರದ ಗೃಹ ಇಲಾಖೆ ಎರಡು ದಿನದ ಮುಂಚೆ ಬದಲಿ ರಸ್ತೆಗಳನ್ನು ಪ್ರಕಟಣೆ ಮಾಡಿತ್ತು. ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿತ್ತು. ಅದನ್ನು ಮೀರಿಯೂ ಲಕ್ಷಾಂತರ ಜನರು ನಮ್ಮ ಕಾರ್ಯಕ್ರಮಕ್ಕೆ ಬಂದಿರುವ ಕಾರಣ ಸಣ್ಣಪುಟ್ಟ ಲೋಪಗಳು ಆಗಿರಬಹುದು ಎಂದರು.

ಬಿಜೆಪಿಯ ನಾಯಕರ ಆರೋಪಗಳನ್ನು ನೋಡಿದ್ರೆ ಬಿಜೆಪಿ ನಾಯಕರಿಗೆ ನಾಚಿಕೆ ಅನ್ನೋದೇ ಇಲ್ವಾ? ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ದೇಶದಾದ್ಯಂತ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ಯಾರು? ಎಂದು ಪ್ರಶ್ನಿಸಿದರು.

ಆತ್ಮಹತ್ಯೆಗಳು ಮಾಡಿಕೊಂಡ ವಿದ್ಯಾರ್ಥಿಗಳು ಆತ್ಮಹತ್ಯೆ ಪತ್ರವನ್ನು ಬರೆದು ಬಿಜೆಪಿ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಗೆ ಕಾರಣವಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಬಿಜೆಪಿಗೆ ಧೈರ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಯುವ ಸಂಸದರಿಗೆ ನೈತಿಕತೆ ಇದ್ದರೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಲಿ. ದೇಶದಾದ್ಯಂತ ವಿದ್ಯಾರ್ಥಿಗಳು ಏಕೆ ಆತಂಕಕ್ಕೆ ಒಳಗಾದರು? ಪ್ರಶ್ನೆ ಪತ್ರಿಕೆ ಸೋರಿಕೆ ಏಕೆ ನಡೆಯಿತು? ಪರೀಕ್ಷೆಯ ವಿಶ್ವಾಸಾರ್ಹತೆ ಏಕೆ ಕುಸಿಯಿತು? ಮರುಪರೀಕ್ಷೆಯ ಅನಿವಾರ್ಯತೆ ಏಕೆ ಎದುರಾಯಿತು? ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲು ಕಾಂಗ್ರೆಸ್ ಮೇಲೆ ಬೆರಳು ತೋರಿಸುವುದು ಬಿಜೆಪಿಯ ಹಳೆಯ ಚಾಳಿ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಉತ್ತರ ಕೊಡುವವರು ಯಾರು? ಪರೀಕ್ಷಾ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಹೋಗುವಂತೆ ಮಾಡಿದವರು ಯಾರು? ಎಂದು ಹರಿಪ್ರಸಾದ್ ಪ್ರಶ್ನಿಸಿದರು.

ಈಗ ಕರ್ನಾಟಕದಲ್ಲಿ ನಡೆದ ನಮ್ಮ ಕಾರ್ಯಕ್ರಮವನ್ನು ಕಾರಣವನ್ನಾಗಿ ಮಾಡಿ ವಿದ್ಯಾರ್ಥಿಗಳ ಗೈರುಹಾಜರಾತಿಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ. ಇದು ರಾಜಕೀಯ ದಿವಾಳಿತನದ ಪರಮಾವಧಿ. ಮೈಸೂರಿನಲ್ಲಿ 1,847 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಾದಗಿರಿಯಲ್ಲಿ 286 ಅಭ್ಯರ್ಥಿಗಳು ಗೈರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯದ ಹಲವೆಡೆ ಇದೇ ಪರಿಸ್ಥಿತಿ ಕಂಡುಬಂದಿದೆ. ಹಾಗಾದರೆ ಈ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಾರ್ಯಕ್ರಮ ನಡೆದಿತ್ತೇ? ಎಂದು ಕೇಳಿದರು.

ಬೆಂಗಳೂರಿನಲ್ಲಿ ಕಾರ್ಯಕ್ರಮ ಇತ್ತು ಎಂಬ ಕಾರಣಕ್ಕೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ ಎಂಬ ವಾದವನ್ನು ಮಾಡುವವರು ವಿದ್ಯಾರ್ಥಿಗಳ ನೋವನ್ನು ಯಾಕೆ ಮೊದಲೇ ಕೇಳಲಿಲ್ಲ. ಈ ಪ್ರಶ್ನೆಗಳಿಗೆ ಉತ್ತರ ನೀಡದೆ ಕಾಂಗ್ರೆಸ್ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ನಾವು ವಿದ್ಯಾರ್ಥಿಗಳ ಹಕ್ಕುಗಳ ಪರವಾಗಿ ನಿಲ್ಲುತ್ತೇವೆ. ಆದರೆ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜಕೀಯ ಆರೋಪಗಳ ಹಿಂದೆ ಅಡಗಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡಿದವರು ಇಂದು ನೀತಿ ಪಾಠ ಹೇಳಲು ಹೊರಟಿರುವುದು ಈ ದೇಶದ ದುರಂತ ಎಂದು ವಾಗ್ದಾಳಿ ನಡೆಸಿದರು.

ಮೊದಲು ನೀಟ್ ಹಗರಣದ ಬಗ್ಗೆ ದೇಶಕ್ಕೆ ಕ್ಷಮೆ ಕೇಳಿ. ನಂತರ ಕಾಂಗ್ರೆಸ್ ಬಗ್ಗೆ ಮಾತನಾಡಿ. ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರ ಬಾಯಲ್ಲಿ ನೈತಿಕತೆಯ ಮಾತುಗಳು ಶೋಭೆ ತರುವುದಿಲ್ಲ. ಮೊದಲು ಈ ದೇಶದ ಶಿಕ್ಷಣ ಸಚಿವ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗ ಅಧ್ಯಕ್ಷ ರಮೇಶ್ ಬಾಬು, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಎಂಎಲ್ ಸಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...