Homeಅಂತರಾಷ್ಟ್ರೀಯತುರ್ತು ಬಳಕೆಗಾಗಿ ಚೀನಾದ ಸಿನೊವಾಕ್ ಕೊರೊನಾ ಲಸಿಕೆಗೆ WHO ಅನುಮತಿ

ತುರ್ತು ಬಳಕೆಗಾಗಿ ಚೀನಾದ ಸಿನೊವಾಕ್ ಕೊರೊನಾ ಲಸಿಕೆಗೆ WHO ಅನುಮತಿ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ( WHO) ಮಂಗಳವಾರ ಸಿನೊವಾಕ್ ಕೊರೊನಾ ಲಸಿಕೆಯನ್ನು ತುರ್ತು ಬಳಕೆಗಾಗಿ ಅನುಮೋದಿಸಿದೆ. ಇದು WHO ನ ಅನುಮತಿ ಪಡೆದ ಎರಡನೇ ಚೀನೀ ಲಸಿಕೆಯಾಗಿದೆ. WHO ಎರಡು-ಡೋಸ್ ಲಸಿಕೆಗೆ ಸಹಿ ಹಾಕಿದ್ದು ಇದನ್ನು ಈಗಾಗಲೇ ವಿಶ್ವದ ಹಲವಾರು ದೇಶಗಳಿಗೆ ನೀಡಲಾಗುತ್ತಿದೆ.

“WHO ಇಂದು ಸಿನೊವಾಕ್-ಕೊರೊನಾವಾಕ್ ಕೊರೊನಾ ಲಸಿಕೆಯನ್ನು ತುರ್ತು ಬಳಕೆಗಾಗಿ ಮೌಲ್ಯೀಕರಿಸಿದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ತಿಂಗಳು ಸಿನೊಫಾರ್ಮ್ ಎಂಬ ಕೊರೊನಾ ಲಸಿಕೆಯನ್ನು WHO ಅನುಮೋದಿಸಿತ್ತು. ಸಿನೋಫಾರ್ಮ್ WHO ಅನುಮೋದಿಸಿದ ಮೊದಲ ಚೀನಿ ಲಸಿಕೆಯಾಗಿದೆ.

ಭಾರತ, ದಕ್ಷಿಣ ಕೊರಿಯಾ ಮತ್ತು ಯುರೋಪಿಯನ್‌ ಒಕ್ಕೂಟಗಳಲ್ಲಿ ಉತ್ಪಾದಿಸಲಾಗುತ್ತಿರುವ ಫಿಜರ್ / ಬಯೋಟೆಕ್, ಮಾಡರ್ನಾ, ಜಾನ್ಸನ್ & ಜಾನ್ಸನ್ ಮತ್ತು ಆಸ್ಟ್ರಝೆನಕ ಸಂಸ್ಥೆಗಳು ತಯಾರಿಸಿರುವ ಲಸಿಕೆಯನ್ನು WHO ಈಗಾಗಲೆ ತುರ್ತು ಬಳಕೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ದುಷ್ಕರ್ಮಿಗಳು 

ವಿಶೇಷವಾಗಿ ತಮ್ಮದೇ ಆದ ಅಂತರರಾಷ್ಟ್ರೀಯ ಗುಣಮಟ್ಟದ ನಿಯಂತ್ರಕವಿಲ್ಲದ ದೇಶಗಳಿಗೆ WHO ಅನುಮತಿಯು ಲಸಿಕೆಯನ್ನು ತ್ವರಿತವಾಗಿ ಅನುಮೋದಿಸಲು ಮತ್ತು ಆಮದು ಮಾಡಿಕೊಳ್ಳಲು ದಾರಿ ಮಾಡಿಕೊಡುತ್ತದೆ.

ಎಎಫ್‌ಪಿ ಎಣಿಕೆಯ ಪ್ರಕಾರ, ಸಿನೊವಾಕ್ ಲಸಿಕೆಯು ಈಗಾಗಲೇ ವಿಶ್ವದ 22 ದೇಶಗಳಲ್ಲಿ ಬಳಕೆಯಲ್ಲಿದೆ. ಚೀನಾ ಹೊರತುಪಡಿಸಿ ಚಿಲಿ, ಬ್ರೆಜಿಲ್, ಇಂಡೋನೇಷ್ಯಾ, ಮೆಕ್ಸಿಕೊ, ಥೈಲ್ಯಾಂಡ್ ಮತ್ತು ಟರ್ಕಿ ದೇಶಗಳು ಸಿನೊವಾಕ್ ಲಸಿಕೆಯನ್ನು ಬಳಸುತ್ತದೆ.

WHO ನ ಇಮ್ಯುನೈಸೇಶನ್ ಕುರಿತ ತಜ್ಞರ ಕಾರ್ಯತಂತ್ರದ ಸಲಹಾ ಗುಂಪು ಲಸಿಕೆಯನ್ನು ಪರಿಶೀಲಿಸಿದೆ ಮತ್ತು ಅದರ ಬಳಕೆಯ ಬಗ್ಗೆ ಅವರ ಸಲಹೆಯನ್ನು ಪ್ರಕಟಿಸಿದೆ.

“ಎರಡು ಮತ್ತು ನಾಲ್ಕು ವಾರಗಳ ಅಂತರದಲ್ಲಿ ಎರಡು-ಡೋಸ್‌ಗಳನ್ನು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಕರಿಗೆ ಈ ಲಸಿಕೆಯನ್ನು WHO ಶಿಫಾರಸು ಮಾಡಿದೆ” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...