Homeನಿಜವೋ ಸುಳ್ಳೋವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕೊರೊನಾ ವಿರುದ್ಧದ ಹೋರಾಟದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಆದೇಶ ಹೊರಡಿಸಿದೆ ಎಂಬ ಸಂದೇಶ ವೈರಲ್‌ ಆಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಪ್ರೋಟೋಕಾಲ್ ಮತ್ತು ಅತ್ಯಂತ ಅಪಾಯಕಾರಿ ವೈರಸ್ ಅನ್ನು ನಿಯಂತ್ರಿಸಲು ಲಾಕ್‌ಡೌನ್‌ ಅವಧಿಗಳ ಕಾರ್ಯವಿಧಾನ” ಹೆಸರಿನಲ್ಲಿ ಮಧ್ಯೆ ಮಧ್ಯೆ ಒಂದು ವಾರಗಳ ಬಿಡುವು ಕೊಟ್ಟು ಜೂನ್‌ ಅಂತ್ಯದವರೆಗೂ ಲಾಕ್‌ಡೌನ್‌ ಚಾಲ್ತಿಯಲ್ಲಿರುತ್ತದೆ ಎಂದು ವಾಟ್ಸಾಪ್‌, ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ಗಳಲ್ಲಿ ಸುಳ್ಳು ಸುದ್ದಿ ಹರಡಲಾಗಿದೆ.

*WORLD HEALTH ORGANISATION PROTOCOL & PROCEDURE OF LOCKDOWN PERIODS FOR CONTROLLING A MOST DANGEROUS VIRUS*STEP 1 – 1…

Posted by Hema Sankhe on Saturday, April 4, 2020

ಆ ಸಂದೇಶದಲ್ಲಿ ಒಂದು ದಿನದ ಜನತಾ ಕರ್ಫ್ಯೂ ಮತ್ತು 21ದಿನಗಳ ಲಾಕ್‌ಡೌನ್ ನಂತರ, ಡಬ್ಲ್ಯುಎಚ್‌ಒ ಐದು ದಿನಗಳವರೆಗೆ ವಿಶ್ರಾಂತಿ ನೀಡುವಂತೆ ಪ್ರಸ್ತಾಪಿಸುತ್ತದೆ. ನಂತರ ಮತ್ತೆ 28 ದಿನಗಳ ಕಾಲ ಲಾಕ್‌ಡೌನ್‌ ಘೋಷಿಸುತ್ತದೆ. ಅದು ಮುಗಿದಾಗ 5 ದಿನಗಳ ವಿಶ್ರಾಂತಿ ಜೊತೆಗೆ ಮತ್ತೆ 14 ದಿನಗಳ ಲಾಕ್‌ಡೌನ್‌ ಇದ್ದು ಅಲ್ಲಿಗೆ ಕೊನೆಯಾಗುತ್ತದೆ ಎಂದು ಬರೆಯಲಾಗಿದೆ. ಬಹಳಷ್ಟು ಜನ ಇದನ್ನು ನಂಬಿಬಿಟ್ಟಿದ್ದಾರೆ.

Fact Check

ಮೊದಲಿಗೆ WHO ಲಾಕ್‌ಡೌನ್ ಟೈಮ್‌ಲೈನ್ ಅನ್ನು ಬಿಡುಗಡೆಮಾಡಿರುವುದು ಎಲ್ಲಿಯೂ ಸಹ ವರದಿಯಾಗಿಲ್ಲ. ಕೊರೊನಾ ರೋಗದ ಹರಡುವಿಕೆಯನ್ನು ಅವಲಂಬಿಸಿ ಎಷ್ಟು ದಿನ ಲಾಕ್‌ಡೌನ್ ಮಾಡಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸುವುದು ದೇಶಗಳಿಗೆ ಬಿಟ್ಟಿದ ವಿಚಾರವಾಗಿದೆ.

ಈ ಸುದ್ದಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಆಧಾರ ರಹಿತ ಮತ್ತು ಮಹಾನ್‌ ಸುಳ್ಳು ಎಂದು ಕರೆದಿದೆ. ನಾವು ಈ ರೀತಿಯ ನಿರ್ದೇಶನ ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದಿದೆ. ಈ ಕುರಿತು ಅದು ಅಧಿಕೃತವಾಗಿ ಟ್ವೀಟ್‌ ಮಾಡಿದೆ ನೋಡಿ.

ಆದರೆ ಮೇಲಿನ ವೈರಲ್ ಆದ ಸಂದೇಶವು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಇಬ್ಬರು ಭಾರತೀಯ ಮೂಲದ ಸಂಶೋಧಕರ ಸಂಶೋಧನಾ ಪ್ರಬಂಧವನ್ನು ಆಧರಿಸಿದ್ದು, ಇದು ವೈರಸ್‌ ಹರಡುವಿಕೆಯನ್ನು ತಡೆಯಲು ಆವರ್ತಕ ವಿಶ್ರಾಂತಿಯೊಂದಿಗೆ ನಿರಂತರ ಲಾಕ್‌ಡೌನ್ ಅನ್ನು ಪ್ರಸ್ತಾಪಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಗೂ ಆ ಸಂದೇಶಕ್ಕೂ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...