Homeನಿಜವೋ ಸುಳ್ಳೋವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕೊರೊನಾ ವಿರುದ್ಧದ ಹೋರಾಟದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಆದೇಶ ಹೊರಡಿಸಿದೆ ಎಂಬ ಸಂದೇಶ ವೈರಲ್‌ ಆಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಪ್ರೋಟೋಕಾಲ್ ಮತ್ತು ಅತ್ಯಂತ ಅಪಾಯಕಾರಿ ವೈರಸ್ ಅನ್ನು ನಿಯಂತ್ರಿಸಲು ಲಾಕ್‌ಡೌನ್‌ ಅವಧಿಗಳ ಕಾರ್ಯವಿಧಾನ” ಹೆಸರಿನಲ್ಲಿ ಮಧ್ಯೆ ಮಧ್ಯೆ ಒಂದು ವಾರಗಳ ಬಿಡುವು ಕೊಟ್ಟು ಜೂನ್‌ ಅಂತ್ಯದವರೆಗೂ ಲಾಕ್‌ಡೌನ್‌ ಚಾಲ್ತಿಯಲ್ಲಿರುತ್ತದೆ ಎಂದು ವಾಟ್ಸಾಪ್‌, ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ಗಳಲ್ಲಿ ಸುಳ್ಳು ಸುದ್ದಿ ಹರಡಲಾಗಿದೆ.

*WORLD HEALTH ORGANISATION PROTOCOL & PROCEDURE OF LOCKDOWN PERIODS FOR CONTROLLING A MOST DANGEROUS VIRUS*STEP 1 – 1…

Posted by Hema Sankhe on Saturday, April 4, 2020

ಆ ಸಂದೇಶದಲ್ಲಿ ಒಂದು ದಿನದ ಜನತಾ ಕರ್ಫ್ಯೂ ಮತ್ತು 21ದಿನಗಳ ಲಾಕ್‌ಡೌನ್ ನಂತರ, ಡಬ್ಲ್ಯುಎಚ್‌ಒ ಐದು ದಿನಗಳವರೆಗೆ ವಿಶ್ರಾಂತಿ ನೀಡುವಂತೆ ಪ್ರಸ್ತಾಪಿಸುತ್ತದೆ. ನಂತರ ಮತ್ತೆ 28 ದಿನಗಳ ಕಾಲ ಲಾಕ್‌ಡೌನ್‌ ಘೋಷಿಸುತ್ತದೆ. ಅದು ಮುಗಿದಾಗ 5 ದಿನಗಳ ವಿಶ್ರಾಂತಿ ಜೊತೆಗೆ ಮತ್ತೆ 14 ದಿನಗಳ ಲಾಕ್‌ಡೌನ್‌ ಇದ್ದು ಅಲ್ಲಿಗೆ ಕೊನೆಯಾಗುತ್ತದೆ ಎಂದು ಬರೆಯಲಾಗಿದೆ. ಬಹಳಷ್ಟು ಜನ ಇದನ್ನು ನಂಬಿಬಿಟ್ಟಿದ್ದಾರೆ.

Fact Check

ಮೊದಲಿಗೆ WHO ಲಾಕ್‌ಡೌನ್ ಟೈಮ್‌ಲೈನ್ ಅನ್ನು ಬಿಡುಗಡೆಮಾಡಿರುವುದು ಎಲ್ಲಿಯೂ ಸಹ ವರದಿಯಾಗಿಲ್ಲ. ಕೊರೊನಾ ರೋಗದ ಹರಡುವಿಕೆಯನ್ನು ಅವಲಂಬಿಸಿ ಎಷ್ಟು ದಿನ ಲಾಕ್‌ಡೌನ್ ಮಾಡಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸುವುದು ದೇಶಗಳಿಗೆ ಬಿಟ್ಟಿದ ವಿಚಾರವಾಗಿದೆ.

ಈ ಸುದ್ದಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಆಧಾರ ರಹಿತ ಮತ್ತು ಮಹಾನ್‌ ಸುಳ್ಳು ಎಂದು ಕರೆದಿದೆ. ನಾವು ಈ ರೀತಿಯ ನಿರ್ದೇಶನ ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದಿದೆ. ಈ ಕುರಿತು ಅದು ಅಧಿಕೃತವಾಗಿ ಟ್ವೀಟ್‌ ಮಾಡಿದೆ ನೋಡಿ.

ಆದರೆ ಮೇಲಿನ ವೈರಲ್ ಆದ ಸಂದೇಶವು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಇಬ್ಬರು ಭಾರತೀಯ ಮೂಲದ ಸಂಶೋಧಕರ ಸಂಶೋಧನಾ ಪ್ರಬಂಧವನ್ನು ಆಧರಿಸಿದ್ದು, ಇದು ವೈರಸ್‌ ಹರಡುವಿಕೆಯನ್ನು ತಡೆಯಲು ಆವರ್ತಕ ವಿಶ್ರಾಂತಿಯೊಂದಿಗೆ ನಿರಂತರ ಲಾಕ್‌ಡೌನ್ ಅನ್ನು ಪ್ರಸ್ತಾಪಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಗೂ ಆ ಸಂದೇಶಕ್ಕೂ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...