HomeಅಂಕಣಗಳುKarnataka against SIRಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು:...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

- Advertisement -
- Advertisement -

“ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ 19.37 ಕೋಟಿಗೆ ಏರಿಕೆಯಾಯಿತು. ಆದರೆ, ಇಂದು 2024ರಲ್ಲಿ ಸರ್ಕಾರ ರಚಿಸಿದವರು, 2025ರ ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ನೆಪದಲ್ಲಿ ಕೋಟ್ಯಂತರ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ” ಎಂದು ಜಮಾತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಯೂಸುಫ್ ಕನ್ನಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ಒಟ್ಟು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವರೆಲ್ಲರೂ ನುಸುಳುಕೋರರಾ ಅಥವಾ ಸತ್ತು ಹೋಗಿದ್ದಾರಾ? 2024ರಿಂದ 26ರ ಅವಧಿಯಲ್ಲಿ ಸತ್ತವರನ್ನು ನೆಪವಾಗಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದವರು, ಈಗ 65 ಲಕ್ಷ ಜನರನ್ನು ಹೊರಹಾಕುವಾಗ 23 ಲಕ್ಷ ಜನ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ ಈ ಸತ್ತವರು ಮತ ಹಾಕಿದ್ದರೇ? ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಆ ಜನರು ಯಾರು ಎಂಬುವುದನ್ನು ಚುನಾವಣಾ ಆಯೋಗ ಮೊದಲು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಇಲ್ಲಿಯವರೆಗೆ ಪಟ್ಟಿಯಿಂದ ತೆಗೆದ ಲಕ್ಷಾಂತರ ಜನರಲ್ಲಿ ಒಬ್ಬನೇ ಒಬ್ಬ ನುಸುಳುಕೋರ ಸಿಕ್ಕಿಲ್ಲ. ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದು ಏಕೆ? ಇದು ಚುನಾವಣಾ ಆಯೋಗದ ಜವಾಬ್ದಾರಿಯಲ್ಲವೇ? ಈ ಹೊಣೆಗಾರಿಕೆಯನ್ನು ಆಯೋಗ ಏಕೆ ನಿರ್ವಹಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

“ಕರ್ನಾಟಕಕ್ಕೆ ಎಸ್ಐಆರ್ (SIR) ಕಾಲಿಟ್ಟಿದೆ. ಕಳೆದ ಆರು ತಿಂಗಳಿನಿಂದ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಒಂದಕ್ಕೂ ಉತ್ತರ ಸಿಕ್ಕಿಲ್ಲ. ‘ಎದ್ದೇಳು ಕರ್ನಾಟಕ’, ‘ನನ್ನ ಮತ-ನನ್ನ ಹಕ್ಕು’, ‘ಜಾಗೃತ ಕರ್ನಾಟಕ’ದಂತಹ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಲು ಹೋಗುತ್ತಿದ್ದೇವೆ. ಆದರೆ, ಎಸ್ಐಆರ್ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯೇ ಇಲ್ಲ. ಹಿಂದೆಲ್ಲಾ ಚುನಾವಣಾ ಆಯೋಗವೇ ಹಳ್ಳಿ ಹಳ್ಳಿಗಳಿಗೆ ಹೋಗಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುತ್ತಿತ್ತು. ಈಗ ಅದೇ ಆಯೋಗ ಮಾಡುತ್ತಿರುವುದೇನು?” ಎಂದು ಅವರು ತೀವ್ರವಾಗಿ ಆಕ್ಷೇಪಿಸಿದರು.

“ಈ ಸಭೆಯಲ್ಲಿರುವ ಪ್ರತಿಯೊಬ್ಬರೂ ಜಾಗೃತರಾಗಬೇಕು. ರಾಜ್ಯದಲ್ಲಿ ಯಾರೊಬ್ಬರ ಮತವೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮೆಲ್ಲಾ ಸಂಘಟನೆಗಳ ಜವಾಬ್ದಾರಿಯಾಗಿದೆ” ಎಂದು ಮೊಹಮ್ಮದ್ ಯೂಸುಫ್ ಕನ್ನಿ ಅವರು ಕರೆ ನೀಡಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಆಗ್ರಹಿಸಿದರು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು ಎಂದು ಒತ್ತಾಯಿಸಿದರು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಆಗ್ರಹಿಸಿದರು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಒತ್ತಾಯಿಸಿದರು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...