HomeಅಂಕಣಗಳುKarnataka against SIRಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು:...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

- Advertisement -
- Advertisement -

“ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ 19.37 ಕೋಟಿಗೆ ಏರಿಕೆಯಾಯಿತು. ಆದರೆ, ಇಂದು 2024ರಲ್ಲಿ ಸರ್ಕಾರ ರಚಿಸಿದವರು, 2025ರ ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ನೆಪದಲ್ಲಿ ಕೋಟ್ಯಂತರ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ” ಎಂದು ಜಮಾತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಯೂಸುಫ್ ಕನ್ನಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ಒಟ್ಟು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವರೆಲ್ಲರೂ ನುಸುಳುಕೋರರಾ ಅಥವಾ ಸತ್ತು ಹೋಗಿದ್ದಾರಾ? 2024ರಿಂದ 26ರ ಅವಧಿಯಲ್ಲಿ ಸತ್ತವರನ್ನು ನೆಪವಾಗಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದವರು, ಈಗ 65 ಲಕ್ಷ ಜನರನ್ನು ಹೊರಹಾಕುವಾಗ 23 ಲಕ್ಷ ಜನ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ ಈ ಸತ್ತವರು ಮತ ಹಾಕಿದ್ದರೇ? ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಆ ಜನರು ಯಾರು ಎಂಬುವುದನ್ನು ಚುನಾವಣಾ ಆಯೋಗ ಮೊದಲು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಇಲ್ಲಿಯವರೆಗೆ ಪಟ್ಟಿಯಿಂದ ತೆಗೆದ ಲಕ್ಷಾಂತರ ಜನರಲ್ಲಿ ಒಬ್ಬನೇ ಒಬ್ಬ ನುಸುಳುಕೋರ ಸಿಕ್ಕಿಲ್ಲ. ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದು ಏಕೆ? ಇದು ಚುನಾವಣಾ ಆಯೋಗದ ಜವಾಬ್ದಾರಿಯಲ್ಲವೇ? ಈ ಹೊಣೆಗಾರಿಕೆಯನ್ನು ಆಯೋಗ ಏಕೆ ನಿರ್ವಹಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

“ಕರ್ನಾಟಕಕ್ಕೆ ಎಸ್ಐಆರ್ (SIR) ಕಾಲಿಟ್ಟಿದೆ. ಕಳೆದ ಆರು ತಿಂಗಳಿನಿಂದ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಒಂದಕ್ಕೂ ಉತ್ತರ ಸಿಕ್ಕಿಲ್ಲ. ‘ಎದ್ದೇಳು ಕರ್ನಾಟಕ’, ‘ನನ್ನ ಮತ-ನನ್ನ ಹಕ್ಕು’, ‘ಜಾಗೃತ ಕರ್ನಾಟಕ’ದಂತಹ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಲು ಹೋಗುತ್ತಿದ್ದೇವೆ. ಆದರೆ, ಎಸ್ಐಆರ್ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯೇ ಇಲ್ಲ. ಹಿಂದೆಲ್ಲಾ ಚುನಾವಣಾ ಆಯೋಗವೇ ಹಳ್ಳಿ ಹಳ್ಳಿಗಳಿಗೆ ಹೋಗಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುತ್ತಿತ್ತು. ಈಗ ಅದೇ ಆಯೋಗ ಮಾಡುತ್ತಿರುವುದೇನು?” ಎಂದು ಅವರು ತೀವ್ರವಾಗಿ ಆಕ್ಷೇಪಿಸಿದರು.

“ಈ ಸಭೆಯಲ್ಲಿರುವ ಪ್ರತಿಯೊಬ್ಬರೂ ಜಾಗೃತರಾಗಬೇಕು. ರಾಜ್ಯದಲ್ಲಿ ಯಾರೊಬ್ಬರ ಮತವೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮೆಲ್ಲಾ ಸಂಘಟನೆಗಳ ಜವಾಬ್ದಾರಿಯಾಗಿದೆ” ಎಂದು ಮೊಹಮ್ಮದ್ ಯೂಸುಫ್ ಕನ್ನಿ ಅವರು ಕರೆ ನೀಡಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಆಗ್ರಹಿಸಿದರು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು ಎಂದು ಒತ್ತಾಯಿಸಿದರು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಆಗ್ರಹಿಸಿದರು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಒತ್ತಾಯಿಸಿದರು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...