Homeಕರ್ನಾಟಕಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? - ಸಿದ್ದರಾಮಯ್ಯ ಪ್ರಶ್ನೆ

ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ನಾಡಧ್ವಜ ಆರೋಹಣವನ್ನು ವಿರೋಧಿಸಿ ಜನಾಕ್ರೋಶಕ್ಕೆ ಕಾರಣವಾಗಿದ್ದನ್ನು ಅವರು ನೆನಪಿಸಿದ್ದಾರೆ.

- Advertisement -
- Advertisement -

ಕನ್ನಡ ರಾಜ್ಯೋತ್ಸವದ ದಿನ ನಾಡಧ್ವಜ ಹಾರಿಸದೆ ಹಲವಾರು ಜಿಲ್ಲಾಡಳಿತಗಳು ಅಗೌರವ ತೋರಿಸಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, “ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಹಲವು ಜಿಲ್ಲಾಕೇಂದ್ರದಲ್ಲಿ ಕನ್ನಡ ಧ್ವಜ ಹಾರಿಸದೇ ಇರುವುದು ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದಾದ್ಯಂತ ಕನ್ನಡಿಗರು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ವಿಪಕ್ಷ ನಾಯಕ ಕೂಡಾ ಅವರೊಂದಿಗೆ ಧ್ವನಿ ಸೇರಿಸಿದ್ದಾರೆ.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ‌, “ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮಕ್ಷಮದಲ್ಲಿಯೇ ನಾಡಧ್ವಜ ಹಾರಿಸಿರುವಾಗ ಜಿಲ್ಲಾಡಳಿತದ ಉಪೇಕ್ಷೆ ಯಾರ ಕುಮ್ಮಕ್ಕಿನಿಂದ ನಡೆಯಿತು ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದ್ದಾರೆ.

“ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾರಿಸುವ ಸಂಪ್ರದಾಯವನ್ನು ಹಿಂದಿನ ಎಲ್ಲ ಸರ್ಕಾರಗಳು ಪಾಲಿಸುತ್ತಾ ಬಂದಿವೆ” ಎಂದು ಅವರು ನೆನಪಿಸಿದ್ದಾರೆ.

“ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕು?” ಎಂದು ಅವರು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರಸರ್ಕಾರಕ್ಕೆ ಕಳಿಸಿದ್ದೆ. ಎರಡು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿಗೆ ಇರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ನಾವೇನು ಪ್ರತ್ಯೇಕ ಧ್ವಜವನ್ನು ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಆಗಿರುವ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವ ಅಡ್ಡಿಯೂ ಇಲ್ಲ. ಬಿಜೆಪಿಯ ಕೇಂದ್ರ ನಾಯಕರ ಅಭಿಪ್ರಾಯವೇನೇ ಇರಲಿ, ಆ ಪಕ್ಷದ ಸ್ಥಳೀಯ ನಾಯಕರು ಪ್ರಧಾನ ಮಂತ್ರಿ ಮೇಲೆ ಒತ್ತಡ ಹೇರಿ ಕರ್ನಾಟಕದ ನಾಡಧ್ವಜಕ್ಕೆ ಅಧಿಕೃತ ಮನ್ನಣೆ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ’ಕನ್ನಡ ಕಂಕಣ ದಿನ’; ಕರ್ನಾಟಕ ರಣಧೀರ ಪಡೆಯಿಂದ ವಿಭಿನ್ನ ರಾಜ್ಯೋತ್ಸವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...