Homeಅಂತರಾಷ್ಟ್ರೀಯಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

- Advertisement -
- Advertisement -

ಡೆಲ್ಟಾ ರೂಪಾಂತರಿ ಕೊರೋನಾ ವೈರಸ್ ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳನ್ನು ತೀವ್ರವಾಗಿ ಕಾಡುತ್ತಿದೆ. ಡೆಲ್ಟಾ ರೂಪಾಂತರಿ ತಳಿಯ ವೈರಸ್‌ನಿಂದಲೇ ಇಷ್ಟು ಸಾವು ನೋವು ಸಂಭವಿಸಿರುವಾಗ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಜಗತ್ತಿನಲ್ಲಿ ಹೊಸ ಆತಂಕಗಳನ್ನು ಸೃಷ್ಟಿಸಿದೆ.

ಡೆಲ್ಟಾ ರೂಪಾಂತರಿ ವೈರಸ್‌ ಸೋಂಕಿಗೆ ಲಕ್ಷಾಂತರ ಜನರು ತುತ್ತಾಗಿರುವ ಸಂದರ್ಭದಲ್ಲಿ ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೋನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.

ಕೊರೋನಾ ಸೋಂಕಿತರ ಸಾವನ್ನು ತಡೆಯುವಲ್ಲಿ ವ್ಯಾಕ್ಸಿನ್‌ಗಳು ಇದುವರೆಗೆ ಸಹಕಾರಿಯಾಗಿವೆ. ಆದರೆ ಹೊಸ ರೂಪಾಂತರಿ ಡೆಲ್ಟಾ ಪ್ಲಸ್‌ ವೇರಿಯಂಟ್‌ ವಿಷಯದಲ್ಲಿ ವ್ಯಾಕ್ಸಿನ್‌ಗಳು ಮುಂಚಿನಷ್ಟು ಪರಿಣಾಮಕಾರಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಾಂಕ್ರಾಮಿಕ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

WHO ಪಟ್ಟಿ ಮಾಡಿರುವ ಜಗತ್ತಿನ 4 ಅತ್ಯಂತ ಅಪಾಯಕಾರಿ ಕೊರೋನಾ ರೂಪಾಂತರಿ ತಳಿ ವೈರಸ್‌ಗಳಲ್ಲಿ ಡೆಲ್ಟಾ ಪ್ಲಸ್‌ ಕೂಡ ಒಂದಾಗಿದೆ.

ಡೆಲ್ಟಾ ಮ್ಯುಟೇಷನ್ ನಿಂದ ಹುಟ್ಟಿಕೊಂಡಿರುವ B.1.617.2 ವೇರಿಯಂಟ್ ವೈರಸ್‌ ಸಾಮಾನ್ಯ ಡೆಲ್ಟಾ ವೈರಸ್‌ಗಿಂತಲೂ ಹೆಚ್ಚು ತಿವ್ರವಾಗಿ ಸಮುದಾಯಗಳಲ್ಲಿ ಹರಡುವ ಸಾಮರ್ಥ್ಯವನ್ನು ಹೊಂದಿದೆ  ಎಂದು ವಿಶ್ವ ಆರೊಗ್ಯ ಸಂಸ್ಥೆಯು ಹೇಳಿದೆ. ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ತಳಿಯ ವೈರಸ್ ಕಾರಣದಿಂದ ಸೋಮವಾರ ಬ್ರಿಟನ್‌ನಲ್ಲಿ 10,000 ಕ್ಕೂ ಹೆಚ್ಚಿನ ಜನರು ಸೋಂಕಿಗೆ ತುತ್ತಾಗಿದ್ದಾರೆ.

ರಷ್ಯಾದಲ್ಲಿಯೂ ಕೂಡ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು ಹೊಸ ರೂಂಪಾತರಿ ವೈರಸ್‌ ಕಾರಣದಿಂದ ದಿನ ನಿತ್ಯ ರಷ್ಯಾದಲ್ಲಿ 17,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.

ಪೋರ್ಚುಗೀಸ್ ಅಧಿಕಾರಿಗಳು ಸಹ ದೇಶದಲ್ಲಿ ಹೊಸ ಡೆಲ್ಟಾ ರೂಪಾಂತರಿ ವೈರಸ್‌ ಕಾಣಿಸಿಕೊಂಡಿರುವುದನ್ನು ದೃಢಿಕರಿಸಿದ್ದಾರೆ. ಹೊಸ ರೂಪಾಂತರಿ ವೈರಸ್ ಸಾಧಾರಣ ಕೊರೋನಾ ವೈರಸ್‌ಗಿಂತಲೂ 10 ಪಟ್ಟು ಹೆಚ್ಚು ವೇಗವಾಗಿ ದೇಶದಲ್ಲಿ ಹರಡುತ್ತಿರುವ ಕುರಿತು ಪೋರ್ಚುಗೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ 3 ನೇ ಅಲೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯು ಈಗಾಗಲೇ ಎಚ್ಚರಿಸಿದೆ. ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಕಾರಣದಿಂದಲೇ ಕೋವಿಡ್ ಮೂರನೇ ಅಲೆ ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಕೂಡ ಹಲವು ದೇಶಗಳಿಗೆ ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ : ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...