Homeಅಂತರಾಷ್ಟ್ರೀಯಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

- Advertisement -
- Advertisement -

ಡೆಲ್ಟಾ ರೂಪಾಂತರಿ ಕೊರೋನಾ ವೈರಸ್ ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳನ್ನು ತೀವ್ರವಾಗಿ ಕಾಡುತ್ತಿದೆ. ಡೆಲ್ಟಾ ರೂಪಾಂತರಿ ತಳಿಯ ವೈರಸ್‌ನಿಂದಲೇ ಇಷ್ಟು ಸಾವು ನೋವು ಸಂಭವಿಸಿರುವಾಗ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಜಗತ್ತಿನಲ್ಲಿ ಹೊಸ ಆತಂಕಗಳನ್ನು ಸೃಷ್ಟಿಸಿದೆ.

ಡೆಲ್ಟಾ ರೂಪಾಂತರಿ ವೈರಸ್‌ ಸೋಂಕಿಗೆ ಲಕ್ಷಾಂತರ ಜನರು ತುತ್ತಾಗಿರುವ ಸಂದರ್ಭದಲ್ಲಿ ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೋನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.

ಕೊರೋನಾ ಸೋಂಕಿತರ ಸಾವನ್ನು ತಡೆಯುವಲ್ಲಿ ವ್ಯಾಕ್ಸಿನ್‌ಗಳು ಇದುವರೆಗೆ ಸಹಕಾರಿಯಾಗಿವೆ. ಆದರೆ ಹೊಸ ರೂಪಾಂತರಿ ಡೆಲ್ಟಾ ಪ್ಲಸ್‌ ವೇರಿಯಂಟ್‌ ವಿಷಯದಲ್ಲಿ ವ್ಯಾಕ್ಸಿನ್‌ಗಳು ಮುಂಚಿನಷ್ಟು ಪರಿಣಾಮಕಾರಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಾಂಕ್ರಾಮಿಕ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

WHO ಪಟ್ಟಿ ಮಾಡಿರುವ ಜಗತ್ತಿನ 4 ಅತ್ಯಂತ ಅಪಾಯಕಾರಿ ಕೊರೋನಾ ರೂಪಾಂತರಿ ತಳಿ ವೈರಸ್‌ಗಳಲ್ಲಿ ಡೆಲ್ಟಾ ಪ್ಲಸ್‌ ಕೂಡ ಒಂದಾಗಿದೆ.

ಡೆಲ್ಟಾ ಮ್ಯುಟೇಷನ್ ನಿಂದ ಹುಟ್ಟಿಕೊಂಡಿರುವ B.1.617.2 ವೇರಿಯಂಟ್ ವೈರಸ್‌ ಸಾಮಾನ್ಯ ಡೆಲ್ಟಾ ವೈರಸ್‌ಗಿಂತಲೂ ಹೆಚ್ಚು ತಿವ್ರವಾಗಿ ಸಮುದಾಯಗಳಲ್ಲಿ ಹರಡುವ ಸಾಮರ್ಥ್ಯವನ್ನು ಹೊಂದಿದೆ  ಎಂದು ವಿಶ್ವ ಆರೊಗ್ಯ ಸಂಸ್ಥೆಯು ಹೇಳಿದೆ. ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ತಳಿಯ ವೈರಸ್ ಕಾರಣದಿಂದ ಸೋಮವಾರ ಬ್ರಿಟನ್‌ನಲ್ಲಿ 10,000 ಕ್ಕೂ ಹೆಚ್ಚಿನ ಜನರು ಸೋಂಕಿಗೆ ತುತ್ತಾಗಿದ್ದಾರೆ.

ರಷ್ಯಾದಲ್ಲಿಯೂ ಕೂಡ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು ಹೊಸ ರೂಂಪಾತರಿ ವೈರಸ್‌ ಕಾರಣದಿಂದ ದಿನ ನಿತ್ಯ ರಷ್ಯಾದಲ್ಲಿ 17,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.

ಪೋರ್ಚುಗೀಸ್ ಅಧಿಕಾರಿಗಳು ಸಹ ದೇಶದಲ್ಲಿ ಹೊಸ ಡೆಲ್ಟಾ ರೂಪಾಂತರಿ ವೈರಸ್‌ ಕಾಣಿಸಿಕೊಂಡಿರುವುದನ್ನು ದೃಢಿಕರಿಸಿದ್ದಾರೆ. ಹೊಸ ರೂಪಾಂತರಿ ವೈರಸ್ ಸಾಧಾರಣ ಕೊರೋನಾ ವೈರಸ್‌ಗಿಂತಲೂ 10 ಪಟ್ಟು ಹೆಚ್ಚು ವೇಗವಾಗಿ ದೇಶದಲ್ಲಿ ಹರಡುತ್ತಿರುವ ಕುರಿತು ಪೋರ್ಚುಗೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ 3 ನೇ ಅಲೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯು ಈಗಾಗಲೇ ಎಚ್ಚರಿಸಿದೆ. ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಕಾರಣದಿಂದಲೇ ಕೋವಿಡ್ ಮೂರನೇ ಅಲೆ ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಕೂಡ ಹಲವು ದೇಶಗಳಿಗೆ ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ : ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...