Homeಅಂತರಾಷ್ಟ್ರೀಯಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

- Advertisement -
- Advertisement -

ಡೆಲ್ಟಾ ರೂಪಾಂತರಿ ಕೊರೋನಾ ವೈರಸ್ ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳನ್ನು ತೀವ್ರವಾಗಿ ಕಾಡುತ್ತಿದೆ. ಡೆಲ್ಟಾ ರೂಪಾಂತರಿ ತಳಿಯ ವೈರಸ್‌ನಿಂದಲೇ ಇಷ್ಟು ಸಾವು ನೋವು ಸಂಭವಿಸಿರುವಾಗ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಜಗತ್ತಿನಲ್ಲಿ ಹೊಸ ಆತಂಕಗಳನ್ನು ಸೃಷ್ಟಿಸಿದೆ.

ಡೆಲ್ಟಾ ರೂಪಾಂತರಿ ವೈರಸ್‌ ಸೋಂಕಿಗೆ ಲಕ್ಷಾಂತರ ಜನರು ತುತ್ತಾಗಿರುವ ಸಂದರ್ಭದಲ್ಲಿ ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೋನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.

ಕೊರೋನಾ ಸೋಂಕಿತರ ಸಾವನ್ನು ತಡೆಯುವಲ್ಲಿ ವ್ಯಾಕ್ಸಿನ್‌ಗಳು ಇದುವರೆಗೆ ಸಹಕಾರಿಯಾಗಿವೆ. ಆದರೆ ಹೊಸ ರೂಪಾಂತರಿ ಡೆಲ್ಟಾ ಪ್ಲಸ್‌ ವೇರಿಯಂಟ್‌ ವಿಷಯದಲ್ಲಿ ವ್ಯಾಕ್ಸಿನ್‌ಗಳು ಮುಂಚಿನಷ್ಟು ಪರಿಣಾಮಕಾರಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಾಂಕ್ರಾಮಿಕ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

WHO ಪಟ್ಟಿ ಮಾಡಿರುವ ಜಗತ್ತಿನ 4 ಅತ್ಯಂತ ಅಪಾಯಕಾರಿ ಕೊರೋನಾ ರೂಪಾಂತರಿ ತಳಿ ವೈರಸ್‌ಗಳಲ್ಲಿ ಡೆಲ್ಟಾ ಪ್ಲಸ್‌ ಕೂಡ ಒಂದಾಗಿದೆ.

ಡೆಲ್ಟಾ ಮ್ಯುಟೇಷನ್ ನಿಂದ ಹುಟ್ಟಿಕೊಂಡಿರುವ B.1.617.2 ವೇರಿಯಂಟ್ ವೈರಸ್‌ ಸಾಮಾನ್ಯ ಡೆಲ್ಟಾ ವೈರಸ್‌ಗಿಂತಲೂ ಹೆಚ್ಚು ತಿವ್ರವಾಗಿ ಸಮುದಾಯಗಳಲ್ಲಿ ಹರಡುವ ಸಾಮರ್ಥ್ಯವನ್ನು ಹೊಂದಿದೆ  ಎಂದು ವಿಶ್ವ ಆರೊಗ್ಯ ಸಂಸ್ಥೆಯು ಹೇಳಿದೆ. ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ತಳಿಯ ವೈರಸ್ ಕಾರಣದಿಂದ ಸೋಮವಾರ ಬ್ರಿಟನ್‌ನಲ್ಲಿ 10,000 ಕ್ಕೂ ಹೆಚ್ಚಿನ ಜನರು ಸೋಂಕಿಗೆ ತುತ್ತಾಗಿದ್ದಾರೆ.

ರಷ್ಯಾದಲ್ಲಿಯೂ ಕೂಡ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು ಹೊಸ ರೂಂಪಾತರಿ ವೈರಸ್‌ ಕಾರಣದಿಂದ ದಿನ ನಿತ್ಯ ರಷ್ಯಾದಲ್ಲಿ 17,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.

ಪೋರ್ಚುಗೀಸ್ ಅಧಿಕಾರಿಗಳು ಸಹ ದೇಶದಲ್ಲಿ ಹೊಸ ಡೆಲ್ಟಾ ರೂಪಾಂತರಿ ವೈರಸ್‌ ಕಾಣಿಸಿಕೊಂಡಿರುವುದನ್ನು ದೃಢಿಕರಿಸಿದ್ದಾರೆ. ಹೊಸ ರೂಪಾಂತರಿ ವೈರಸ್ ಸಾಧಾರಣ ಕೊರೋನಾ ವೈರಸ್‌ಗಿಂತಲೂ 10 ಪಟ್ಟು ಹೆಚ್ಚು ವೇಗವಾಗಿ ದೇಶದಲ್ಲಿ ಹರಡುತ್ತಿರುವ ಕುರಿತು ಪೋರ್ಚುಗೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ 3 ನೇ ಅಲೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯು ಈಗಾಗಲೇ ಎಚ್ಚರಿಸಿದೆ. ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಕಾರಣದಿಂದಲೇ ಕೋವಿಡ್ ಮೂರನೇ ಅಲೆ ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಕೂಡ ಹಲವು ದೇಶಗಳಿಗೆ ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ : ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...