Homeಚಳವಳಿವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ 'ಹೀರೋ' ಮೇಲೆ ಕೊಲೆಯತ್ನದ ಕೇಸು!

ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ನಡೆಸಿದ ’ದೆಹಲಿ ಚಲೋ’ ಪ್ರತಿಭಟನಾ ಜಾಥಾದಲ್ಲಿ ರೈತರ ಮೇಲೆ ದಾಳಿ ಮಾಡುತ್ತಿದ್ದ ವಾಟರ್‌ ಜೆಟ್‌ ಅನ್ನು ಅತ್ಯಂತ ಸಾಹಸಿಕವಾಗಿ ನಿಲ್ಲಿಸಿದ ಹರಿಯಾಣದ ಅಂಬಾಲದ ಯುವ ರೈತನ ಮೇಲೆ ಪೊಲೀಸರು ಕೊಲೆ ಯತ್ನ ಕೇಸು ದಾಖಲಿಸಿದ್ದಾರೆ.

ಘಟನೆಯ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, 26 ವರ್ಷದ ನವದೀಪ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ’ಹೀರೋ’ ಆಗಿ ಮಿಂಚಿದರು. ಉತ್ತರ ಭಾರತದ ಕಠಿಣ ಚಳಿಯನ್ನು ಲೆಕ್ಕಿಸದೆ ದೆಹಲಿ ಚಲೋಗೆ ಹೊರಟಿದ್ದ ರೈತರ ಜಾಥಾದ ಮೇಲೆ ಪೊಲೀಸರು ವಾಟರ್‌ ಜೆಟ್‌‌ ದಾಳಿ ಮಾಡಿದ್ದರು. ಇದನ್ನು ನಿಲ್ಲಿಸಲು ವಾಟರ್‌ ಜೆಟ್ ವಾಹನವನ್ನು ಹತ್ತಿದೆ ಯುವ ರೈತ ಅದನ್ನು ನಿಲ್ಲಿಸಿ ವಾಪಾಸು ತಮ್ಮ ವಾಹನಕ್ಕೆ ಹಾರಿ ಜಾಥಾವನ್ನು ಸೇರಿಕೊಂಡಿದ್ದರು.

ಇದನ್ನೂ ಓದಿ: ದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ರೈತ ಸಂಘದ ಮುಖಂಡ ಜೈ ಸಿಂಗ್ ಅವರ ಪುತ್ರನಾಗಿರುವ ನವದೀಪ್ ವಿರುದ್ಧ ಜೀವಾವಧಿವರೆಗೆ ಶಿಕ್ಷೆ ನೀಡಬಹುದಾದ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಅಲ್ಲದೆ ಗಲಭೆ ಮತ್ತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕೇಸುಗಳನ್ನು ಕೂಡಾ ದಾಖಲಿಸಲಾಗಿದೆ.

“ನನ್ನ ಓದಿನ ನಂತರ ನನ್ನ ತಂದೆಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ನಾನು ಯಾವತ್ತೂ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿಲ್ಲ. ಪ್ರತಿಭಟನಾ ನಿರತ ರೈತರಿಗೆ ವಾಹನ ಹತ್ತಲು ಮತ್ತು ಅವರ ವಿರುದ್ದ ದಾಳಿ ಮಾಡುತ್ತಿದ್ದ ಪಿರಂಗಿಯ ಟ್ಯಾಪ್ ಆಫ್ ಮಾಡಿದ್ದೇನೆ” ಎಂದು ನವದೀಪ್ ಸಿಂಗ್ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ತಿಳಿಸಿದ್ದಾರೆ.

“ಶಾಂತಿಯುತವಾಗಿ ಪ್ರತಿಭಟಿಸಲು ನಾವು ದೆಹಲಿಗೆ ಹೋಗಬೇಕೆಂದು ಹೊರಟಿದ್ದೆವು ಆದರೆ ಪೊಲೀಸರು ನಮ್ಮನ್ನು ನಿರ್ಬಂಧಿಸಿದರು. ಸರ್ಕಾರವನ್ನು ಪ್ರಶ್ನಿಸಲು ಮತ್ತು ಯಾವುದೇ ಜನ ವಿರೋಧಿ ಕಾನೂನುಗಳು ಜಾರಿಗೆ ಬಂದರೆ ಪ್ರತಿಭಟಿಸಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಳ್ವಿಕೆಯ ಹರಿಯಾಣದ ಮತ್ತು ದೆಹಲಿಯ ಪೊಲೀಸರು ಕೃಷಿ ನೀತಿಗಳ ವಿರುದ್ದ ಜಾಥಾ ಹೊರಟಿದ್ದ ರೈತರ ಮೇಲೆ ಭಾರೀ ಪ್ರಮಾಣದ ದಬ್ಬಾಳಿಕೆ ನಡೆಸಿದ್ದಾರೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕಾನೂನುಗಳನ್ನು ವಿರೋಧಿಸಿ ಅಂತಿಮವಾಗಿ ದೆಹಲಿ ತಲುಪಲು ಯಶಸ್ವಿಯಾದ ರೈತರ ಮೇಲೆ ಮೂರನೇ ದಿನವು ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿಯನ್ನು ಹಾರಿಸಿದರು.

ಇದನ್ನೂ ಓದಿ: ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಅಷ್ಟೇ ಅಲ್ಲದೆ ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...