Homeಚಳವಳಿವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ 'ಹೀರೋ' ಮೇಲೆ ಕೊಲೆಯತ್ನದ ಕೇಸು!

ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ನಡೆಸಿದ ’ದೆಹಲಿ ಚಲೋ’ ಪ್ರತಿಭಟನಾ ಜಾಥಾದಲ್ಲಿ ರೈತರ ಮೇಲೆ ದಾಳಿ ಮಾಡುತ್ತಿದ್ದ ವಾಟರ್‌ ಜೆಟ್‌ ಅನ್ನು ಅತ್ಯಂತ ಸಾಹಸಿಕವಾಗಿ ನಿಲ್ಲಿಸಿದ ಹರಿಯಾಣದ ಅಂಬಾಲದ ಯುವ ರೈತನ ಮೇಲೆ ಪೊಲೀಸರು ಕೊಲೆ ಯತ್ನ ಕೇಸು ದಾಖಲಿಸಿದ್ದಾರೆ.

ಘಟನೆಯ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, 26 ವರ್ಷದ ನವದೀಪ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ’ಹೀರೋ’ ಆಗಿ ಮಿಂಚಿದರು. ಉತ್ತರ ಭಾರತದ ಕಠಿಣ ಚಳಿಯನ್ನು ಲೆಕ್ಕಿಸದೆ ದೆಹಲಿ ಚಲೋಗೆ ಹೊರಟಿದ್ದ ರೈತರ ಜಾಥಾದ ಮೇಲೆ ಪೊಲೀಸರು ವಾಟರ್‌ ಜೆಟ್‌‌ ದಾಳಿ ಮಾಡಿದ್ದರು. ಇದನ್ನು ನಿಲ್ಲಿಸಲು ವಾಟರ್‌ ಜೆಟ್ ವಾಹನವನ್ನು ಹತ್ತಿದೆ ಯುವ ರೈತ ಅದನ್ನು ನಿಲ್ಲಿಸಿ ವಾಪಾಸು ತಮ್ಮ ವಾಹನಕ್ಕೆ ಹಾರಿ ಜಾಥಾವನ್ನು ಸೇರಿಕೊಂಡಿದ್ದರು.

ಇದನ್ನೂ ಓದಿ: ದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ರೈತ ಸಂಘದ ಮುಖಂಡ ಜೈ ಸಿಂಗ್ ಅವರ ಪುತ್ರನಾಗಿರುವ ನವದೀಪ್ ವಿರುದ್ಧ ಜೀವಾವಧಿವರೆಗೆ ಶಿಕ್ಷೆ ನೀಡಬಹುದಾದ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಅಲ್ಲದೆ ಗಲಭೆ ಮತ್ತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕೇಸುಗಳನ್ನು ಕೂಡಾ ದಾಖಲಿಸಲಾಗಿದೆ.

“ನನ್ನ ಓದಿನ ನಂತರ ನನ್ನ ತಂದೆಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ನಾನು ಯಾವತ್ತೂ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿಲ್ಲ. ಪ್ರತಿಭಟನಾ ನಿರತ ರೈತರಿಗೆ ವಾಹನ ಹತ್ತಲು ಮತ್ತು ಅವರ ವಿರುದ್ದ ದಾಳಿ ಮಾಡುತ್ತಿದ್ದ ಪಿರಂಗಿಯ ಟ್ಯಾಪ್ ಆಫ್ ಮಾಡಿದ್ದೇನೆ” ಎಂದು ನವದೀಪ್ ಸಿಂಗ್ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ತಿಳಿಸಿದ್ದಾರೆ.

“ಶಾಂತಿಯುತವಾಗಿ ಪ್ರತಿಭಟಿಸಲು ನಾವು ದೆಹಲಿಗೆ ಹೋಗಬೇಕೆಂದು ಹೊರಟಿದ್ದೆವು ಆದರೆ ಪೊಲೀಸರು ನಮ್ಮನ್ನು ನಿರ್ಬಂಧಿಸಿದರು. ಸರ್ಕಾರವನ್ನು ಪ್ರಶ್ನಿಸಲು ಮತ್ತು ಯಾವುದೇ ಜನ ವಿರೋಧಿ ಕಾನೂನುಗಳು ಜಾರಿಗೆ ಬಂದರೆ ಪ್ರತಿಭಟಿಸಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಳ್ವಿಕೆಯ ಹರಿಯಾಣದ ಮತ್ತು ದೆಹಲಿಯ ಪೊಲೀಸರು ಕೃಷಿ ನೀತಿಗಳ ವಿರುದ್ದ ಜಾಥಾ ಹೊರಟಿದ್ದ ರೈತರ ಮೇಲೆ ಭಾರೀ ಪ್ರಮಾಣದ ದಬ್ಬಾಳಿಕೆ ನಡೆಸಿದ್ದಾರೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕಾನೂನುಗಳನ್ನು ವಿರೋಧಿಸಿ ಅಂತಿಮವಾಗಿ ದೆಹಲಿ ತಲುಪಲು ಯಶಸ್ವಿಯಾದ ರೈತರ ಮೇಲೆ ಮೂರನೇ ದಿನವು ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿಯನ್ನು ಹಾರಿಸಿದರು.

ಇದನ್ನೂ ಓದಿ: ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಅಷ್ಟೇ ಅಲ್ಲದೆ ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...