HomeUncategorizedತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

- Advertisement -
- Advertisement -

‘ದೇಶದ್ರೋಹ’: ಈ ಮೊದಲು ಯಾವುದೋ ನಕ್ಸಲ್ ಕೇಸಲ್ಲಿ ಅದಕ್ಕೂ ಮುಂಚೆ ಖಲಿಸ್ತಾನ್ ಕೇಸುಗಳಲ್ಲಿ, ಮತ್ತಂಥದ್ಯಾವುದೋ ಕೇಸುಗಳಲ್ಲಿ ನಾವು ಪೇಪರಿನಲ್ಲಿ ಓದುತ್ತಿದ್ದೆವು. ನಮ್ಮ ಸುತ್ತಲಿನ ನಿತ್ಯದ ಬದುಕಲ್ಲಿ ಅದರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆಯೂ ಇರಲಿಲ್ಲ.

‘ದೇಶದ್ರೋಹ’ದ ಆಪಾದನೆಗಳು ಒಂದು ಕಾಲಘಟ್ಟದಲ್ಲಿ ಹೆಚ್ಚಾಗಿ ಕಂಡುಬಂದಿದ್ದು ಎಪ್ಪತ್ತರ ದಶಕದ ಎಮರ್ಜೆನ್ಸಿ ಸಮಯದಲ್ಲಿ. ಸ್ವಾತಂತ್ರ್ಯಪೂರ್ವದಲ್ಲಿ ಅದೊಂದು ನಿತ್ಯದ ಅಪರಾಧವಾಗಿತ್ತು. ದೇಶದ್ರೋಹದ ಆಪಾದನೆಯಿಲ್ಲದ ಸ್ವಾತಂತ್ರ್ಯ ಹೋರಾಟಗಾರನಿರಲಿಲ್ಲ. ನಮ್ಮ ದ.ರಾ ಬೇಂದ್ರೆಯವರನ್ನು ಕಾಡಿತ್ತು ದೇಶದ್ರೋಹದ ಶಿಕ್ಷೆ. ಅವರ ‘ನಾದಲೀಲೆ’ ಕವನಸಂಕಲನ ಆ ಸಮಯದಲ್ಲಿ ಬರೆದದ್ದು.

ಅಷ್ಟಕ್ಕೂ ಏನಿದು ‘ದೇಶದ್ರೋಹ’? ನಮ್ಮ ಕಾನೂನಿನಲ್ಲಿ, ಸಾಮಾನ್ಯರ ಭಾಷೆಯಲ್ಲಿ ಹೇಳುವುದಾದರೆ, ಕಾನೂನಾತ್ಮಕವಾಗಿ ನಡೆಸುತ್ತಿರುವ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಶಾಂತಿಭಂಗವಾಗುವಂಥ ವಾತಾವರಣ ಸೃಷ್ಟಿ ಮಾಡುವುದು ‘ದೇಶದ್ರೋಹ’ವೆನ್ನಲಾಗುತ್ತದೆ.

ಸರ್ಕಾರವನ್ನು ಟೀಕಿಸುವ, ವಿಮರ್ಶಿಸುವ ಅಧಿಕಾರ ನಮಗಿಲ್ಲವೇ? ಅದೆಷ್ಟೋ ಜನ ಸರ್ಕಾರಗಳನ್ನ ತರಾಟೆಗೆ ತೆಗೆದುಕೊಳ್ತಾರೆ – ವಿರೋಧಪಕ್ಷವಾಗಲೀ, ಮಾಧ್ಯಮದವರಾಗಲೀ ತಮ್ಮ ಹದ್ದಿನಕಣ್ಣಿನಿಂದ ಯಾವಾಗಲೂ ನೋಡುತ್ತಿರುತ್ತಾರೆ ಹಾಗೂ ಪ್ರತಿ ಚಿಕ್ಕತಪ್ಪನ್ನು ಎತ್ತಿಹಿಡಿಯುತ್ತಾರೆ. ಅದೇನಾದರೂ ಭ್ರಷ್ಟತೆಯ ಆರೋಪವಾದರೆ ಮುಗಿಯಿತು ಸರ್ಕಾರವನ್ನು ಹಿಗ್ಗಾಮುಗ್ಗಾ ಬೈಯುತ್ತಿರುತ್ತಾರೆ. ಎಂತೆಂಥದೋ ಕೆಟ್ಟ ಶಬ್ದಗಳನ್ನ ಉಪಯೋಗಿಸಲಾಗುತ್ತದೆ. ಅದೇ ಅಲ್ಲವೇ ಪ್ರಜಾಪ್ರಭುತ್ವವೆಂದರೆ ಎಂದು ನೀವು ಕೇಳಬಹುದು. ಆಶ್ಚರ್ಯದ ಸಂಗತಿ ಏನೆಂದರೆ ಸುಪ್ರೀಂಕೋರ್ಟು, ಹೈಕೋರ್ಟುಗಳು ಕೂಡ ಇದನ್ನೇ ಹೇಳುತ್ತವೆ. ಹಾಗಾದರೆ ಅದು ಅಪರಾಧ ಹೇಗಾಯಿತು?

ದುರಂತವೆಂದರೆ ಸ್ವಾತಂತ್ರ್ಯಾನಂತರ ದೇಶದ್ರೋಹದ ಅಪರಾಧವನ್ನು ಕಾನೂನಲ್ಲಿ ಉಳಿಸಿಕೊಳ್ಳಲಾಯಿತು. ಈ ಅಪರಾಧ ಊರ್ಜಿತವಲ್ಲವೆಂದು, ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದಾಗ ದೇಶದ್ರೋಹ ಉಳಿಯುವ ಅವಕಾಶವಿಲ್ಲವೆಂದು ಕೇದಾರನಾಥ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ವಾದಿಸಲಾಯಿತು. ಅಂದಿನ ಕಾಲಘಟ್ಟದಲ್ಲಿನ ಸ್ಥಿತಿಗಳು ಆ ಅಪರಾಧದ ಕಾನೂನನ್ನು ಉಳಿಸಿಕೊಳ್ಳುವ ಅವಶ್ಯಕತೆಯನ್ನ ಒಪ್ಪಿಸಿದ್ದವು. ಇಂದಿಗೂ ಕೇದಾರನಾಥ್ ಪ್ರಕರಣ ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮೈಲಿಗಲ್ಲು.

ಕೇದಾರನಾಥ್ ಪ್ರಕರಣದ ಮುಖ್ಯ ತೀರ್ಪೆಂದರೆ ಎಲ್ಲವುದೂ ದೇಶದ್ರೋಹವಲ್ಲ. 124ಎ ನಲ್ಲಿಯೇ ಅದಕ್ಕೆ ರಕ್ಷಣೆ ಕೊಡಲಾಗಿದೆ. ಸರ್ಕಾರದ ನೀತಿಗಳಿಗೆ ವಿರೋಧ ವ್ಯಕ್ತಪಡಿಸುವುದು, ಸರಿಯಿಲ್ಲವೆನ್ನುವುದು, ಮೂರ್ಖತ್ವದಿಂದ ಕೂಡಿದೆಯೆಂಬುದು, ಜನವಿರೋಧಿ ಎನ್ನುವುದು, ಮತ್ತು ಯಾವುದೇ ರೀತಿಯ ವಿಮರ್ಶೆಯನ್ನು ಅಲ್ಲಿ ರಕ್ಷಿಸಲಾಗಿದೆ. ಅದಿಲ್ಲದೇ ಇದ್ದರೇ ಪ್ರತಿ ವಿರೋಧಪಕ್ಷದ ರಾಜಕಾರಣಿಯನ್ನು ಜೈಲಲ್ಲಿಡಬಹುದು – ಅದು ಸಾಂವಿಧಾನಿಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ.

ಕೇದಾರನಾಥ್ ತೀರ್ಪು ಎಷ್ಟೇ ಸರಿಯಿದ್ದರೂ, ಸರ್ಕಾರಗಳೆಂದೂ ತುಂಬಾ ಶ್ರದ್ಧೆಯಿಂದ ಆ ತೀರ್ಪನ್ನು ಕಡೆಗಣಿಸಿವೆ ಎಂಬುದು ಚಾರಿತ್ರಿಕ ಸತ್ಯ. ಆದರೆ ಇದನ್ನ ಯಾರ ಮೇಲೆ ಪ್ರಯೋಗಿಸಲಾಯಿತು ಎಂದರೆ, ಸಾಮಾನ್ಯವಾಗಿ ಜನಪರ ಚಳವಳಿಗಳ ಮೇಲೆ. ಅವುಗಳ ನಾಯಕರನ್ನು ಯಾವಾಗಲೂ ದೇಶದ್ರೋಹದ ಪಟ್ಟಿಯಲ್ಲಿ ಸೇರಿಸಲಾಗಿದೆ. ಜಯಪ್ರಕಾಶ್ ನಾರಾಯಣ್ ಇರಲಿ, ಕಮ್ಯೂನಿಸ್ಟ್ ನಾಯಕರಿರಲಿ, ಅಟಲ್ ಬಿಹಾರಿ ವಾಜಪೇಯಿಯವರಿರಲಿ ಒಂದು ಚಳವಳಿಯ ನೇತಾರರಾಗಿದ್ದರೆ ದೇಶದ್ರೋಹದ ಆರೋಪ ಕಟ್ಟಿಟ್ಟಬುತ್ತಿ ಎಂಬಂತಿದೆ. ಇಂದಿಗೂ ಆ ಸ್ಥಿತಿ ಬದಲಾಗಿಲ್ಲ.

ಎಮರ್ಜೆನ್ಸಿ ಸಮಯದಲ್ಲಂತೂ ಈ ಅಪರಾಧ ಕಾನೂನನ್ನು, ಸರ್ಕಾರದ ಮಾತನ್ನು ವಿರೋಧಿಸಿದವರೆಲ್ಲರ ಮೇಲೂ ಉಪಯೋಗಿಸಲಾಯಿತು. ಅದರ ಪರಿಣಾಮ ನಮಗೆಲ್ಲರಿಗೂ ತಿಳಿದ ಇತಿಹಾಸ.

ಎಂಭತ್ತರ, ತೊಂಭತ್ತರ ದಶಕ ಹಾಗೂ ಇಪ್ಪತ್ತೊಂದನೇ ಶತಮಾನದ ಮೊದಲ ದಶಕದ ಆರಂಭದಲ್ಲಿ ಸ್ವಲ್ಪಮಟ್ಟಿಗೆ ಬದಲಾವಣೆ ಕಂಡರೂ (ಬಹುಶಃ ಮೈತ್ರಿ ಸರ್ಕಾರಗಳ ಕಾರಣವಿರಬಹುದು) ಕಳೆದೈದು ವರ್ಷಗಳಲ್ಲಿ ಇದರ ದುರುಪಯೋಗ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲೆಂದೆ ತಂದ UAPA ಕಾಯ್ದೆ ನಂತರದ ರೂಪಗಳಲ್ಲಿ, TADA ಹಾಗೂ POTA ಕಾಯ್ದೆಗಳಿಗೆ ಪರ್ಯಾಯವಾಗಿ ಬದಲಾವಣೆಯಾಗಿದ್ದು ಚಾರಿತ್ರಿಕ ಸತ್ಯ. ಯಾವುದೋ ಆತಂಕವಾದಿ ಸಂಘಟನೆಯನ್ನು ಬಹಿಷ್ಕರಿಸುವ ಹಾಗೂ ಅದರ ಕಾರ್ಯಗಳನ್ನು ಕಟ್ಟಿಹಾಕುವ ಹಾಗೂ ಯಾವುದೇ ಅಂಥಾ ಘಟನೆಗಳಿಗೆ ಶಿಕ್ಷಿಸುವಂಥಾ ಉದ್ದೇಶವನ್ನು ಹೊಂದಿದ್ದು ತನ್ನ ಹೊಸ ಅವತಾರದಲ್ಲಿ ಯಾರನ್ನಾದರೂ ಅದರಡಿಯಲ್ಲಿ ಜೈಲಿಗೆ ತಳ್ಳಬಹುದಾದ ಮತ್ತು ಸಂವಿಧಾನ ಜನಿತ ಹಕ್ಕುಗಳನ್ನು ಇಲ್ಲದಂತೆ ಮಾಡುವ ಅಧಿಕಾರವನ್ನು ಹೊಂದಿದೆ.

ಅದರ ತೀವ್ರ ದುರುಪಯೋಗ ಇಂದು ನಾವೆಲ್ಲ ಕಾಣುತ್ತಿದ್ದೇವೆ. ಬೀದರಿನ ಶಾಲೆಯಲ್ಲಿ ನಾಟಕಕ್ಕೆಂದು ಮಗುವಿಗೆ ಹಳೆಯ ಚಪ್ಪಲಿಯೊಂದು ಕೊಟ್ಟಿದ್ದು ತಾಯಿಯ ದೇಶದ್ರೋಹವಾಗುವಷ್ಟು, ಒಂದು ಕವನ ಬರೆದರೆ, ಒಂದು ಕಾರ್ಟೂನನ್ನು ಶೇರ್ ಮಾಡಿದರೆ, ಕಾರ್ಟೂನ್ ಚಿತ್ರಿಸಿದರೆ, ಒಂದು ಸ್ಲೋಗನ್ ಕೂಗಿದರೂ ದೇಶದ್ರೋಹ ಪ್ರಕರಣ ದಾಖಲಿಸುವ ಸ್ಥಿತಿಯನ್ನು ನಾವು ತಲುಪಿದ್ದೇವೆ. ಮಾನವ ಹಕ್ಕುಗಳನ್ನು ಕೇಳುವವರನ್ನು ಜೈಲಿಗಟ್ಟುತ್ತಿದೇವೆ. ಅದು ಒಬ್ಬ ಕವಿಯಿರಲಿ, ಪ್ರಾಧ್ಯಾಪಕನಿರಲಿ, ವಿದ್ಯಾರ್ಥಿಯಿರಲಿ, ಬಸರಿಯಿರಲಿ, ಸಂವಿಧಾನಿಕ ರೀತಿಯ ಹೋರಾಟವನ್ನು ತನ್ನದಾಗಿಸಿಕೊಂಡವನಿರಲಿ, ಸರ್ಕಾರಗಳು ಸಹಿಸುತ್ತಿಲ್ಲ. ಇಂದು ಇಂಥಾ ಕಾನೂನುಗಳಲ್ಲಿ ಆರೋಪಿಸುವುದಕ್ಕೆ ಬಲವಾದ ಕಾರಣಗಳೂ ಬೇಕಿಲ್ಲ.

ಇವು ನಾವು ನಮಗಾಗಿ ಬರೆದುಕೊಂಡಿರುವ, ನಮ್ಮದಾದ ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಚ್ಯುತಿ ತಂದಿವೆ. ಇಂಥಾ ಕರಾಳ ಕಾಯ್ದೆಗಳ ಮರುಪರಿಶೀಲನೆ ಅತ್ಯವಶ್ಯವಾಗಿದೆ. ಇಂಥಾ ಕಾನೂನುಗಳ ದುರುಪಯೋಗ ನಿಲ್ಲಬೇಕಿದೆ.


ಇದನ್ನು ಓದಿ: ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...