Homeಅಂತರಾಷ್ಟ್ರೀಯಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ಕೊರೊನಾ ಸೋಂಕು ಎಂದಿಗೂ ಹೋಗುವುದಿಲ್ಲ, ಇದು ದೀರ್ಘಕಾಲ ಇರಬಹುದೆಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿ ಡಾ. ಮೈಕೆಲ್ ರಯಾನ್ ಈ ವೈರಸ್ ಎಂದಿಗೂ ಹೋಗುವುದಿಲ್ಲ, ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ ಇಲ್ಲಿಯವರೆಗೆ ಕಡಿಮೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾವುದೇ ಲಸಿಕೆ ಇಲ್ಲದೆ ಜನರಿಗೆ ಸಾಕಷ್ಟು ಪ್ರಮಾಣದಲ್ಲಿ ರೋಗ ನಿರೋಧಕ ಹೆಚ್ಚಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಇದರ ಕುರಿತು ನಾವು ಹೆಚ್ಚು ಹೆಚ್ಚು ಚರ್ಚೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಈ ವೈರಸ್ ನಮ್ಮ ನಡುವೆ ಮತ್ತೊಂದು ವೈರಸ್ ಆಗಬಹುದು, ಈ ಹಿಂದಿನ ಎಚ್‌ಐವಿಯಂತಹ ಇತರ ಹೊಸ ಕಾಯಿಲೆಗಳು ಎಂದಿಗೂ ಕಣ್ಮರೆಯಾಗಿಲ್ಲ, ಆದರೆ ಜನರು ರೋಗದೊಂದಿಗೆ ಬದುಕಲು ಅನುಕೂಲವಾಗುವಂತೆ ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.

ಪರಿಣಾಮಕಾರಿಯಾದ ಲಸಿಕೆ ಅಭಿವೃದ್ಧಿಪಡಿಸಲಾಗುವುದು ಎಂಬ ಭರವಸೆ ಉಳಿದಿದೆ, ಆದರೆ ಆಗಲೂ ಸಹ ಅದನ್ನು ತಯಾರಿಸಲು ಹಾಗೂ ಮತ್ತು ರೋಗನಿರೋಧಕ ಶಕ್ತಿಯನ್ನು ಹೊಂದಲು ಅಗತ್ಯವಿರುವ ಜನರಿಗೆ ಅವುಗಳನ್ನು ವಿಶ್ವಾದ್ಯಂತ ವಿತರಿಸಲು ಹೆಚ್ಚಿನ ಪ್ರಮಾಣದ ಕೆಲಸದ ಅಗತ್ಯವಿರುತ್ತದೆ. ಈ ಪ್ರತಿಯೊಂದು ಹಂತವೂ ಸವಾಲುಗಳಿಂದ ಕೂಡಿದೆ ಎಂದು ರಯಾನ್ ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ, ತಾಂತ್ರಿಕ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್ಖೋವ್, ಕೆಲವು ದೇಶಗಳ ಜನರು ನಿರಾಶೆಯ ಸ್ಥಿತಿಯಲ್ಲಿದ್ದಾರೆ ಎಂದು ಗುರುತಿಸಿದ್ದಾಗಿ ಹೇಳಿದ್ದಾರೆ. ಆದರೆ ವೈದ್ಯಕೀಯ ಹಸ್ತಕ್ಷೇಪವಿಲ್ಲದೆ ವೈರಸ್ ಅನ್ನು ನಿಲ್ಲಿಸುವುದು ಸಾಧ್ಯ ಎಂದು ಗಮನಸೆಳೆದರು.

ಈ ವೈರಸ್ ಇನ್ನೂ ನಮ್ಮ ಕೈಯಲ್ಲಿದೆ ಎಂದಿರುವ ಅವರು, ಕೆಲವು ದೇಶಗಳು ವೈರಸ್ ಅನ್ನು ನಿಯಂತ್ರಣಕ್ಕೆ ತಂದಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತ 44 ಲಕ್ಷಕ್ಕಿಂತಲೂ ಕೊರೊನಾ ಪ್ರಕರಣ ವರದಿಯಾಗಿದ್ದು, 2 ಲಕ್ಷದ 98 ಸಾವಿರ ಜನರು ಸಾವಿಗೀಡಾಗಿದ್ದಾರೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


ಮರಯಲೇಬಾರದ ಸುದ್ದಿಗಳು, ಸದ್ದು…ಈ ಸುದ್ದಿಯೇನಾಗಿದೆ ಸಂಚಿಕೆಗೆ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....