Homeಅಂತರಾಷ್ಟ್ರೀಯಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ಕೊರೊನಾ ಸೋಂಕು ಎಂದಿಗೂ ಹೋಗುವುದಿಲ್ಲ, ಇದು ದೀರ್ಘಕಾಲ ಇರಬಹುದೆಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿ ಡಾ. ಮೈಕೆಲ್ ರಯಾನ್ ಈ ವೈರಸ್ ಎಂದಿಗೂ ಹೋಗುವುದಿಲ್ಲ, ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ ಇಲ್ಲಿಯವರೆಗೆ ಕಡಿಮೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾವುದೇ ಲಸಿಕೆ ಇಲ್ಲದೆ ಜನರಿಗೆ ಸಾಕಷ್ಟು ಪ್ರಮಾಣದಲ್ಲಿ ರೋಗ ನಿರೋಧಕ ಹೆಚ್ಚಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಇದರ ಕುರಿತು ನಾವು ಹೆಚ್ಚು ಹೆಚ್ಚು ಚರ್ಚೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಈ ವೈರಸ್ ನಮ್ಮ ನಡುವೆ ಮತ್ತೊಂದು ವೈರಸ್ ಆಗಬಹುದು, ಈ ಹಿಂದಿನ ಎಚ್‌ಐವಿಯಂತಹ ಇತರ ಹೊಸ ಕಾಯಿಲೆಗಳು ಎಂದಿಗೂ ಕಣ್ಮರೆಯಾಗಿಲ್ಲ, ಆದರೆ ಜನರು ರೋಗದೊಂದಿಗೆ ಬದುಕಲು ಅನುಕೂಲವಾಗುವಂತೆ ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.

ಪರಿಣಾಮಕಾರಿಯಾದ ಲಸಿಕೆ ಅಭಿವೃದ್ಧಿಪಡಿಸಲಾಗುವುದು ಎಂಬ ಭರವಸೆ ಉಳಿದಿದೆ, ಆದರೆ ಆಗಲೂ ಸಹ ಅದನ್ನು ತಯಾರಿಸಲು ಹಾಗೂ ಮತ್ತು ರೋಗನಿರೋಧಕ ಶಕ್ತಿಯನ್ನು ಹೊಂದಲು ಅಗತ್ಯವಿರುವ ಜನರಿಗೆ ಅವುಗಳನ್ನು ವಿಶ್ವಾದ್ಯಂತ ವಿತರಿಸಲು ಹೆಚ್ಚಿನ ಪ್ರಮಾಣದ ಕೆಲಸದ ಅಗತ್ಯವಿರುತ್ತದೆ. ಈ ಪ್ರತಿಯೊಂದು ಹಂತವೂ ಸವಾಲುಗಳಿಂದ ಕೂಡಿದೆ ಎಂದು ರಯಾನ್ ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ, ತಾಂತ್ರಿಕ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್ಖೋವ್, ಕೆಲವು ದೇಶಗಳ ಜನರು ನಿರಾಶೆಯ ಸ್ಥಿತಿಯಲ್ಲಿದ್ದಾರೆ ಎಂದು ಗುರುತಿಸಿದ್ದಾಗಿ ಹೇಳಿದ್ದಾರೆ. ಆದರೆ ವೈದ್ಯಕೀಯ ಹಸ್ತಕ್ಷೇಪವಿಲ್ಲದೆ ವೈರಸ್ ಅನ್ನು ನಿಲ್ಲಿಸುವುದು ಸಾಧ್ಯ ಎಂದು ಗಮನಸೆಳೆದರು.

ಈ ವೈರಸ್ ಇನ್ನೂ ನಮ್ಮ ಕೈಯಲ್ಲಿದೆ ಎಂದಿರುವ ಅವರು, ಕೆಲವು ದೇಶಗಳು ವೈರಸ್ ಅನ್ನು ನಿಯಂತ್ರಣಕ್ಕೆ ತಂದಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತ 44 ಲಕ್ಷಕ್ಕಿಂತಲೂ ಕೊರೊನಾ ಪ್ರಕರಣ ವರದಿಯಾಗಿದ್ದು, 2 ಲಕ್ಷದ 98 ಸಾವಿರ ಜನರು ಸಾವಿಗೀಡಾಗಿದ್ದಾರೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


ಮರಯಲೇಬಾರದ ಸುದ್ದಿಗಳು, ಸದ್ದು…ಈ ಸುದ್ದಿಯೇನಾಗಿದೆ ಸಂಚಿಕೆಗೆ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...