Homeಮುಖಪುಟನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ಯುಪಿಯಲ್ಲಿ 7 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನಕಲಿ ರಾಯಭಾರ ಕಚೇರಿ ಪತ್ತೆಯಾಗಿದೆ!

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ.

ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು ಗುರುತಿಸದ ದೇಶಗಳ ಹೆಸರಿನಲ್ಲಿ ನಕಲಿ ಧ್ವಜ ನೆಟ್ಟಿದ್ದ. ಈ ರೀತಿ ಸುಮಾರು 7 ವರ್ಷಗಳಿಂದ ಜನರು, ಕಂಪನಿಗಳು ಮತ್ತು ಅಧಿಕಾರಿಗಳನ್ನು ಯಾಮಾರಿಸಿದ್ದ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಪಶ್ಚಿಮ ಆರ್ಕ್ಟಿಕಾ, ಸಬೋರ್ಗಾ, ಪೌಲ್ವಿಯಾ ಮತ್ತು ಲೊಡೋನಿಯಾದ ದೇಶಗಳ ಹೆಸರಿನಲ್ಲಿ ಹರ್ಷವರ್ಧನ್ ಜೈನ್ ರಾಯಭಾರ ಕಚೇರಿ ನಡೆಸುತ್ತಿದ್ದ.

ಪಶ್ಚಿಮ ಆರ್ಕ್ಟಿಕಾ ಒಂದು ಮೈಕ್ರೋನೇಷನ್ ಆಗಿದ್ದು, ಯಾವುದೇ ದೇಶಗಳ ಸರ್ಕಾರ ಇದನ್ನು ಸಾರ್ವಭೌಮ ರಾಷ್ಟ್ರವೆಂದು ಅಧಿಕೃತವಾಗಿ ಗುರುತಿಸಿಲ್ಲ. ಹಾಗಾಗಿ, ಇದೊಂದು ಸ್ವಯಂಘೋಷಿತ ದೇಶವಾಗಿದೆ. ಇದು ಅಂಟಾರ್ಕ್ಟಿಕಾದಲ್ಲಿ ಭೂಮಿಯನ್ನು ಹೊಂದಿದೆ ಮತ್ತು ಹವಾಮಾನ ಕ್ರಮಕ್ಕಾಗಿ ಪ್ರತಿಪಾದಿಸುವ ಲಾಭರಹಿತ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇದನ್ನು ಮಾಜಿ ಯುಎಸ್ ನೌಕಾಪಡೆಯ ಅಧಿಕಾರಿಯೊಬ್ಬರು ಸ್ಥಾಪಿಸಿದ್ದು, ಅಂತಾರಾಷ್ಟ್ರೀಯ ಮನ್ನಣೆ ಹೊಂದಿಲ್ಲ.

ಸಬೋರ್ಗಾ ಒಂದು ಮಾನ್ಯತೆ ಪಡೆದ ದೇಶ ಅಥವಾ ಮೈಕ್ರೋನೇಷನ್ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವರದಿಗಳ ಪ್ರಕಾರ, ಇದು ಹರ್ಷವರ್ಧನ್ ಜೈನ್ ಸೃಷ್ಟಿಸಿದ ನಕಲಿ ದೇಶದ ಹೆಸರಾಗಿದೆ. ಪೌಲ್ವಿಯಾ ಕೂಡ ಸಬೋರ್ಗಾದಂತೆ ಮಾನ್ಯತೆ ಪಡೆದ ದೇಶ ಅಥವಾ ಪ್ರಸಿದ್ದಿ ಹೊಂದಿರುವ ಮೈಕ್ರೋನೇಷನ್ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇದೂ ಕೂಡ ಹರ್ಷವರ್ಧನ್‌ನ ನಕಲಿ ಸೃಷ್ಟಿಯಾಗಿದೆ.

ಇನ್ನು ಲೊಡೋನಿಯಾ ದಕ್ಷಿಣ ಸ್ವೀಡನ್‌ನಲ್ಲಿರುವ ಒಂದು ಮೈಕ್ರೋನೇಷನ್ ಎಂದು ಕೆಲ ಮಾಹಿತಿ ಮೂಲಗಳು ಹೇಳುತ್ತವೆ. ಆದರೆ ಇದು ಅಧಿಕೃತವಾಗಿ ಗುರುತಿಸಲ್ಪಟ್ಟ ಸಾರ್ವಭೌಮ ರಾಷ್ಟ್ರವಲ್ಲ. ಹಾಗಾಗಿ, ಇದು ಕೂಡ ಹರ್ಷವರ್ಧನ್‌ ಸೃಷ್ಟಿಸಿದ ನಕಲಿ ದೇಶವಾಗಿದೆ.

ಹರ್ಷವರ್ಧನ್ ಜೈನ್ ಯಾರು?

ಹರ್ಷವರ್ಧನ್ ಜೈನ್ ಲಂಡನ್ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ ಮತ್ತು ಗಾಝಿಯಾಬಾದ್‌ನ ಐಟಿಎಸ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಎಂಬಿಎ ಪದವೀಧರ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಗಾಝಿಯಾಬಾದ್‌ನ ಉದ್ಯಮಿಯೊಬ್ಬರ ಮಗನಾದ ಈತನ ಕುಟುಂಬವು ರಾಜಸ್ಥಾನದಲ್ಲಿ ಅಮೃತಶಿಲೆಯ ಗಣಿ ಹೊಂದಿತ್ತು. ತಂದೆಯ ನಿಧನದ ನಂತರ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಆಗ ಹರ್ಷವರ್ಧನ್ ಜೈನ್ ವಿವಾದಾತ್ಮಕ ದೇವಮಾನವ ಚಂದ್ರಸ್ವಾಮಿಯನ್ನು ಭೇಟಿಯಾಗಿದ್ದ. ಬಳಿಕ ಆತನ ಸಹಾಯದಿಂದ ಲಂಡನ್‌ಗೆ ತೆರಳಿ ಹಲವು ಕಂಪನಿಗಳನ್ನು ತೆರೆದಿದ್ದ.

ತನಿಖಾ ಸಂಸ್ಥೆಗಳ ಪ್ರಕಾರ, ಈ ಕಂಪನಿಗಳನ್ನು ಲೆಕ್ಕವಿಲ್ಲದ ಹಣವನ್ನು ಮರೆಮಾಚಲು ಬಳಸಲಾಗುತ್ತಿತ್ತು ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹರ್ಷವರ್ಧನ್ ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಜೊತೆಗೂ ಸಂಪರ್ಕ ಹೊಂದಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿ ಹೇಳಿದೆ.

ಚಂದ್ರಸ್ವಾಮಿಯ ಮರಣದ ನಂತರ ಗಾಝಿಯಾಬಾದ್‌ಗೆ ಮರಳಿದ ಜೈನ್, ಜನರನ್ನು ವಂಚಿಸಲು ನಕಲಿ ರಾಯಭಾರ ಕಚೇರಿಯನ್ನು ತೆರೆದಿದ್ದ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಪ್ರಮುಖ ರಾಜಕೀಯ ವ್ಯಕ್ತಿಗಳೊಂದಿಗೆ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಜನರನ್ನು ಯಾಮಾರಿಸುತ್ತಿದ್ದ.

ಜೈನ್ ವಿರುದ್ದ ಪ್ರಕರಣ ದಾಖಲಾಗಿದ್ದು ಇದೇ ಮೊದಲಲ್ಲ. 2011ರಲ್ಲಿ, ಅಕ್ರಮ ಸ್ಯಾಟಲೈಟ್ ಫೋನ್‌ ಪತ್ತೆಯಾದ ಬಳಿಕ ಗಾಝಿಯಾಬಾದ್‌ನ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.

ಜೈನ್ ನಕಲಿ ರಾಯಭಾರ ಕಚೇರಿಯನ್ನು ಏಕೆ ನಡೆಸುತ್ತಿದ್ದ?

ಜೈನ್ ನಕಲಿ ರಾಯಭಾರ ಕಚೇರಿ ತೆರೆದು ಉದ್ಯೋಗ ವಂಚನೆ ಮತ್ತು ಹವಾಲಾ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಕಲಿ ರಾಯಭಾರ ಕಚೇರಿಯ ಮೂಲಕ ಜೈನ್‌ ನಡೆಸುತ್ತಿದ್ದ ಪ್ರಮುಖ ಚಟುವಟಿಕೆಗಳಲ್ಲಿ ಕಂಪನಿಗಳು ಮತ್ತು ವ್ಯಕ್ತಿಗಳಿಗೆ ವಿದೇಶದಲ್ಲಿ ಕೆಲಸ ಮಾಡಲು ದಲ್ಲಾಳಿ ಒಪ್ಪಂದಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆ ನಡೆಸುವುದು ಸೇರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ಮತ್ತು ಕಂಪನಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಜೈನ್ ಅವರನ್ನು ವಂಚಿಸುತ್ತಿದ್ದ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಜನರ ವಿಶ್ವಾಸ ಗಳಿಸಲು ಮತ್ತು ಮೋಸದ ಉದ್ಯೋಗಗಳು ಅಥವಾ ವ್ಯಾಪಾರ ಅವಕಾಶಗಳ ಮೂಲಕ ವಂಚಿಸಲು ಆತ ತನ್ನ ನಕಲಿ ರಾಜತಾಂತ್ರಿಕ ವ್ಯಕ್ತಿತ್ವವನ್ನು ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಎಟಿಎಸ್ ದಾಳಿಯಲ್ಲಿ ಪತ್ತೆಯಾಗಿದ್ದು ಏನು?

ಹರ್ಷವರ್ಧನ್ ಜೈನ್ ಬಳಿ ನಕಲಿ ದಾಖಲೆಗಳು, ವಿದೇಶಿ ಕರೆನ್ಸಿ ಮತ್ತು ಹಲವಾರು ಇತರ ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಆತ ಹವಾಲಾ ದಂಧೆಗೆ ಬಳಸುತ್ತಿದ್ದ ಎಂದು ಶಂಕಿಸಲಾಗಿದೆ. ಎಸ್‌ಟಿಎಫ್‌ ನೋಯ್ಡಾ ಘಟಕವು ರೂ. 44 ಲಕ್ಷಕ್ಕೂ ಹೆಚ್ಚು ಹಣ ಮತ್ತು ಹಲವಾರು ದೇಶಗಳ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದೆ. ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ನಾಲ್ಕು ವಾಹನಗಳು, 18 ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳು ಮತ್ತು ಮೈಕ್ರೋನೇಷನ್‌ಗಳ 12 ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಭಾರತದ ವಿದೇಶಾಂಗ ಸಚಿವಾಲಯದ ಸೀಲ್ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ಸೀಲುಗಳು, ಎರಡು ನಕಲಿ ಪ್ರೆಸ್ ಕಾರ್ಡ್‌ಗಳು ಮತ್ತು ವಿವಿಧ ಕಂಪನಿಗಳ ದಾಖಲೆಗಳು ಕೂಡ ಎಸ್‌ಟಿಎಫ್‌ ದಾಳಿ ವೇಳೆ ಪತ್ತೆಯಾಗಿದೆ.

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...