Homeಮುಖಪುಟನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ಯುಪಿಯಲ್ಲಿ 7 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನಕಲಿ ರಾಯಭಾರ ಕಚೇರಿ ಪತ್ತೆಯಾಗಿದೆ!

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ.

ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು ಗುರುತಿಸದ ದೇಶಗಳ ಹೆಸರಿನಲ್ಲಿ ನಕಲಿ ಧ್ವಜ ನೆಟ್ಟಿದ್ದ. ಈ ರೀತಿ ಸುಮಾರು 7 ವರ್ಷಗಳಿಂದ ಜನರು, ಕಂಪನಿಗಳು ಮತ್ತು ಅಧಿಕಾರಿಗಳನ್ನು ಯಾಮಾರಿಸಿದ್ದ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಪಶ್ಚಿಮ ಆರ್ಕ್ಟಿಕಾ, ಸಬೋರ್ಗಾ, ಪೌಲ್ವಿಯಾ ಮತ್ತು ಲೊಡೋನಿಯಾದ ದೇಶಗಳ ಹೆಸರಿನಲ್ಲಿ ಹರ್ಷವರ್ಧನ್ ಜೈನ್ ರಾಯಭಾರ ಕಚೇರಿ ನಡೆಸುತ್ತಿದ್ದ.

ಪಶ್ಚಿಮ ಆರ್ಕ್ಟಿಕಾ ಒಂದು ಮೈಕ್ರೋನೇಷನ್ ಆಗಿದ್ದು, ಯಾವುದೇ ದೇಶಗಳ ಸರ್ಕಾರ ಇದನ್ನು ಸಾರ್ವಭೌಮ ರಾಷ್ಟ್ರವೆಂದು ಅಧಿಕೃತವಾಗಿ ಗುರುತಿಸಿಲ್ಲ. ಹಾಗಾಗಿ, ಇದೊಂದು ಸ್ವಯಂಘೋಷಿತ ದೇಶವಾಗಿದೆ. ಇದು ಅಂಟಾರ್ಕ್ಟಿಕಾದಲ್ಲಿ ಭೂಮಿಯನ್ನು ಹೊಂದಿದೆ ಮತ್ತು ಹವಾಮಾನ ಕ್ರಮಕ್ಕಾಗಿ ಪ್ರತಿಪಾದಿಸುವ ಲಾಭರಹಿತ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇದನ್ನು ಮಾಜಿ ಯುಎಸ್ ನೌಕಾಪಡೆಯ ಅಧಿಕಾರಿಯೊಬ್ಬರು ಸ್ಥಾಪಿಸಿದ್ದು, ಅಂತಾರಾಷ್ಟ್ರೀಯ ಮನ್ನಣೆ ಹೊಂದಿಲ್ಲ.

ಸಬೋರ್ಗಾ ಒಂದು ಮಾನ್ಯತೆ ಪಡೆದ ದೇಶ ಅಥವಾ ಮೈಕ್ರೋನೇಷನ್ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವರದಿಗಳ ಪ್ರಕಾರ, ಇದು ಹರ್ಷವರ್ಧನ್ ಜೈನ್ ಸೃಷ್ಟಿಸಿದ ನಕಲಿ ದೇಶದ ಹೆಸರಾಗಿದೆ. ಪೌಲ್ವಿಯಾ ಕೂಡ ಸಬೋರ್ಗಾದಂತೆ ಮಾನ್ಯತೆ ಪಡೆದ ದೇಶ ಅಥವಾ ಪ್ರಸಿದ್ದಿ ಹೊಂದಿರುವ ಮೈಕ್ರೋನೇಷನ್ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇದೂ ಕೂಡ ಹರ್ಷವರ್ಧನ್‌ನ ನಕಲಿ ಸೃಷ್ಟಿಯಾಗಿದೆ.

ಇನ್ನು ಲೊಡೋನಿಯಾ ದಕ್ಷಿಣ ಸ್ವೀಡನ್‌ನಲ್ಲಿರುವ ಒಂದು ಮೈಕ್ರೋನೇಷನ್ ಎಂದು ಕೆಲ ಮಾಹಿತಿ ಮೂಲಗಳು ಹೇಳುತ್ತವೆ. ಆದರೆ ಇದು ಅಧಿಕೃತವಾಗಿ ಗುರುತಿಸಲ್ಪಟ್ಟ ಸಾರ್ವಭೌಮ ರಾಷ್ಟ್ರವಲ್ಲ. ಹಾಗಾಗಿ, ಇದು ಕೂಡ ಹರ್ಷವರ್ಧನ್‌ ಸೃಷ್ಟಿಸಿದ ನಕಲಿ ದೇಶವಾಗಿದೆ.

ಹರ್ಷವರ್ಧನ್ ಜೈನ್ ಯಾರು?

ಹರ್ಷವರ್ಧನ್ ಜೈನ್ ಲಂಡನ್ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ ಮತ್ತು ಗಾಝಿಯಾಬಾದ್‌ನ ಐಟಿಎಸ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಎಂಬಿಎ ಪದವೀಧರ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಗಾಝಿಯಾಬಾದ್‌ನ ಉದ್ಯಮಿಯೊಬ್ಬರ ಮಗನಾದ ಈತನ ಕುಟುಂಬವು ರಾಜಸ್ಥಾನದಲ್ಲಿ ಅಮೃತಶಿಲೆಯ ಗಣಿ ಹೊಂದಿತ್ತು. ತಂದೆಯ ನಿಧನದ ನಂತರ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಆಗ ಹರ್ಷವರ್ಧನ್ ಜೈನ್ ವಿವಾದಾತ್ಮಕ ದೇವಮಾನವ ಚಂದ್ರಸ್ವಾಮಿಯನ್ನು ಭೇಟಿಯಾಗಿದ್ದ. ಬಳಿಕ ಆತನ ಸಹಾಯದಿಂದ ಲಂಡನ್‌ಗೆ ತೆರಳಿ ಹಲವು ಕಂಪನಿಗಳನ್ನು ತೆರೆದಿದ್ದ.

ತನಿಖಾ ಸಂಸ್ಥೆಗಳ ಪ್ರಕಾರ, ಈ ಕಂಪನಿಗಳನ್ನು ಲೆಕ್ಕವಿಲ್ಲದ ಹಣವನ್ನು ಮರೆಮಾಚಲು ಬಳಸಲಾಗುತ್ತಿತ್ತು ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹರ್ಷವರ್ಧನ್ ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಜೊತೆಗೂ ಸಂಪರ್ಕ ಹೊಂದಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿ ಹೇಳಿದೆ.

ಚಂದ್ರಸ್ವಾಮಿಯ ಮರಣದ ನಂತರ ಗಾಝಿಯಾಬಾದ್‌ಗೆ ಮರಳಿದ ಜೈನ್, ಜನರನ್ನು ವಂಚಿಸಲು ನಕಲಿ ರಾಯಭಾರ ಕಚೇರಿಯನ್ನು ತೆರೆದಿದ್ದ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಪ್ರಮುಖ ರಾಜಕೀಯ ವ್ಯಕ್ತಿಗಳೊಂದಿಗೆ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಜನರನ್ನು ಯಾಮಾರಿಸುತ್ತಿದ್ದ.

ಜೈನ್ ವಿರುದ್ದ ಪ್ರಕರಣ ದಾಖಲಾಗಿದ್ದು ಇದೇ ಮೊದಲಲ್ಲ. 2011ರಲ್ಲಿ, ಅಕ್ರಮ ಸ್ಯಾಟಲೈಟ್ ಫೋನ್‌ ಪತ್ತೆಯಾದ ಬಳಿಕ ಗಾಝಿಯಾಬಾದ್‌ನ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.

ಜೈನ್ ನಕಲಿ ರಾಯಭಾರ ಕಚೇರಿಯನ್ನು ಏಕೆ ನಡೆಸುತ್ತಿದ್ದ?

ಜೈನ್ ನಕಲಿ ರಾಯಭಾರ ಕಚೇರಿ ತೆರೆದು ಉದ್ಯೋಗ ವಂಚನೆ ಮತ್ತು ಹವಾಲಾ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಕಲಿ ರಾಯಭಾರ ಕಚೇರಿಯ ಮೂಲಕ ಜೈನ್‌ ನಡೆಸುತ್ತಿದ್ದ ಪ್ರಮುಖ ಚಟುವಟಿಕೆಗಳಲ್ಲಿ ಕಂಪನಿಗಳು ಮತ್ತು ವ್ಯಕ್ತಿಗಳಿಗೆ ವಿದೇಶದಲ್ಲಿ ಕೆಲಸ ಮಾಡಲು ದಲ್ಲಾಳಿ ಒಪ್ಪಂದಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆ ನಡೆಸುವುದು ಸೇರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ಮತ್ತು ಕಂಪನಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಜೈನ್ ಅವರನ್ನು ವಂಚಿಸುತ್ತಿದ್ದ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಜನರ ವಿಶ್ವಾಸ ಗಳಿಸಲು ಮತ್ತು ಮೋಸದ ಉದ್ಯೋಗಗಳು ಅಥವಾ ವ್ಯಾಪಾರ ಅವಕಾಶಗಳ ಮೂಲಕ ವಂಚಿಸಲು ಆತ ತನ್ನ ನಕಲಿ ರಾಜತಾಂತ್ರಿಕ ವ್ಯಕ್ತಿತ್ವವನ್ನು ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಎಟಿಎಸ್ ದಾಳಿಯಲ್ಲಿ ಪತ್ತೆಯಾಗಿದ್ದು ಏನು?

ಹರ್ಷವರ್ಧನ್ ಜೈನ್ ಬಳಿ ನಕಲಿ ದಾಖಲೆಗಳು, ವಿದೇಶಿ ಕರೆನ್ಸಿ ಮತ್ತು ಹಲವಾರು ಇತರ ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಆತ ಹವಾಲಾ ದಂಧೆಗೆ ಬಳಸುತ್ತಿದ್ದ ಎಂದು ಶಂಕಿಸಲಾಗಿದೆ. ಎಸ್‌ಟಿಎಫ್‌ ನೋಯ್ಡಾ ಘಟಕವು ರೂ. 44 ಲಕ್ಷಕ್ಕೂ ಹೆಚ್ಚು ಹಣ ಮತ್ತು ಹಲವಾರು ದೇಶಗಳ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದೆ. ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ನಾಲ್ಕು ವಾಹನಗಳು, 18 ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳು ಮತ್ತು ಮೈಕ್ರೋನೇಷನ್‌ಗಳ 12 ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಭಾರತದ ವಿದೇಶಾಂಗ ಸಚಿವಾಲಯದ ಸೀಲ್ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ಸೀಲುಗಳು, ಎರಡು ನಕಲಿ ಪ್ರೆಸ್ ಕಾರ್ಡ್‌ಗಳು ಮತ್ತು ವಿವಿಧ ಕಂಪನಿಗಳ ದಾಖಲೆಗಳು ಕೂಡ ಎಸ್‌ಟಿಎಫ್‌ ದಾಳಿ ವೇಳೆ ಪತ್ತೆಯಾಗಿದೆ.

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...