Homeಮುಖಪುಟನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ಯುಪಿಯಲ್ಲಿ 7 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನಕಲಿ ರಾಯಭಾರ ಕಚೇರಿ ಪತ್ತೆಯಾಗಿದೆ!

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ.

ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು ಗುರುತಿಸದ ದೇಶಗಳ ಹೆಸರಿನಲ್ಲಿ ನಕಲಿ ಧ್ವಜ ನೆಟ್ಟಿದ್ದ. ಈ ರೀತಿ ಸುಮಾರು 7 ವರ್ಷಗಳಿಂದ ಜನರು, ಕಂಪನಿಗಳು ಮತ್ತು ಅಧಿಕಾರಿಗಳನ್ನು ಯಾಮಾರಿಸಿದ್ದ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಪಶ್ಚಿಮ ಆರ್ಕ್ಟಿಕಾ, ಸಬೋರ್ಗಾ, ಪೌಲ್ವಿಯಾ ಮತ್ತು ಲೊಡೋನಿಯಾದ ದೇಶಗಳ ಹೆಸರಿನಲ್ಲಿ ಹರ್ಷವರ್ಧನ್ ಜೈನ್ ರಾಯಭಾರ ಕಚೇರಿ ನಡೆಸುತ್ತಿದ್ದ.

ಪಶ್ಚಿಮ ಆರ್ಕ್ಟಿಕಾ ಒಂದು ಮೈಕ್ರೋನೇಷನ್ ಆಗಿದ್ದು, ಯಾವುದೇ ದೇಶಗಳ ಸರ್ಕಾರ ಇದನ್ನು ಸಾರ್ವಭೌಮ ರಾಷ್ಟ್ರವೆಂದು ಅಧಿಕೃತವಾಗಿ ಗುರುತಿಸಿಲ್ಲ. ಹಾಗಾಗಿ, ಇದೊಂದು ಸ್ವಯಂಘೋಷಿತ ದೇಶವಾಗಿದೆ. ಇದು ಅಂಟಾರ್ಕ್ಟಿಕಾದಲ್ಲಿ ಭೂಮಿಯನ್ನು ಹೊಂದಿದೆ ಮತ್ತು ಹವಾಮಾನ ಕ್ರಮಕ್ಕಾಗಿ ಪ್ರತಿಪಾದಿಸುವ ಲಾಭರಹಿತ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇದನ್ನು ಮಾಜಿ ಯುಎಸ್ ನೌಕಾಪಡೆಯ ಅಧಿಕಾರಿಯೊಬ್ಬರು ಸ್ಥಾಪಿಸಿದ್ದು, ಅಂತಾರಾಷ್ಟ್ರೀಯ ಮನ್ನಣೆ ಹೊಂದಿಲ್ಲ.

ಸಬೋರ್ಗಾ ಒಂದು ಮಾನ್ಯತೆ ಪಡೆದ ದೇಶ ಅಥವಾ ಮೈಕ್ರೋನೇಷನ್ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವರದಿಗಳ ಪ್ರಕಾರ, ಇದು ಹರ್ಷವರ್ಧನ್ ಜೈನ್ ಸೃಷ್ಟಿಸಿದ ನಕಲಿ ದೇಶದ ಹೆಸರಾಗಿದೆ. ಪೌಲ್ವಿಯಾ ಕೂಡ ಸಬೋರ್ಗಾದಂತೆ ಮಾನ್ಯತೆ ಪಡೆದ ದೇಶ ಅಥವಾ ಪ್ರಸಿದ್ದಿ ಹೊಂದಿರುವ ಮೈಕ್ರೋನೇಷನ್ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇದೂ ಕೂಡ ಹರ್ಷವರ್ಧನ್‌ನ ನಕಲಿ ಸೃಷ್ಟಿಯಾಗಿದೆ.

ಇನ್ನು ಲೊಡೋನಿಯಾ ದಕ್ಷಿಣ ಸ್ವೀಡನ್‌ನಲ್ಲಿರುವ ಒಂದು ಮೈಕ್ರೋನೇಷನ್ ಎಂದು ಕೆಲ ಮಾಹಿತಿ ಮೂಲಗಳು ಹೇಳುತ್ತವೆ. ಆದರೆ ಇದು ಅಧಿಕೃತವಾಗಿ ಗುರುತಿಸಲ್ಪಟ್ಟ ಸಾರ್ವಭೌಮ ರಾಷ್ಟ್ರವಲ್ಲ. ಹಾಗಾಗಿ, ಇದು ಕೂಡ ಹರ್ಷವರ್ಧನ್‌ ಸೃಷ್ಟಿಸಿದ ನಕಲಿ ದೇಶವಾಗಿದೆ.

ಹರ್ಷವರ್ಧನ್ ಜೈನ್ ಯಾರು?

ಹರ್ಷವರ್ಧನ್ ಜೈನ್ ಲಂಡನ್ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ ಮತ್ತು ಗಾಝಿಯಾಬಾದ್‌ನ ಐಟಿಎಸ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಎಂಬಿಎ ಪದವೀಧರ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಗಾಝಿಯಾಬಾದ್‌ನ ಉದ್ಯಮಿಯೊಬ್ಬರ ಮಗನಾದ ಈತನ ಕುಟುಂಬವು ರಾಜಸ್ಥಾನದಲ್ಲಿ ಅಮೃತಶಿಲೆಯ ಗಣಿ ಹೊಂದಿತ್ತು. ತಂದೆಯ ನಿಧನದ ನಂತರ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಆಗ ಹರ್ಷವರ್ಧನ್ ಜೈನ್ ವಿವಾದಾತ್ಮಕ ದೇವಮಾನವ ಚಂದ್ರಸ್ವಾಮಿಯನ್ನು ಭೇಟಿಯಾಗಿದ್ದ. ಬಳಿಕ ಆತನ ಸಹಾಯದಿಂದ ಲಂಡನ್‌ಗೆ ತೆರಳಿ ಹಲವು ಕಂಪನಿಗಳನ್ನು ತೆರೆದಿದ್ದ.

ತನಿಖಾ ಸಂಸ್ಥೆಗಳ ಪ್ರಕಾರ, ಈ ಕಂಪನಿಗಳನ್ನು ಲೆಕ್ಕವಿಲ್ಲದ ಹಣವನ್ನು ಮರೆಮಾಚಲು ಬಳಸಲಾಗುತ್ತಿತ್ತು ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹರ್ಷವರ್ಧನ್ ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಜೊತೆಗೂ ಸಂಪರ್ಕ ಹೊಂದಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿ ಹೇಳಿದೆ.

ಚಂದ್ರಸ್ವಾಮಿಯ ಮರಣದ ನಂತರ ಗಾಝಿಯಾಬಾದ್‌ಗೆ ಮರಳಿದ ಜೈನ್, ಜನರನ್ನು ವಂಚಿಸಲು ನಕಲಿ ರಾಯಭಾರ ಕಚೇರಿಯನ್ನು ತೆರೆದಿದ್ದ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಪ್ರಮುಖ ರಾಜಕೀಯ ವ್ಯಕ್ತಿಗಳೊಂದಿಗೆ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಜನರನ್ನು ಯಾಮಾರಿಸುತ್ತಿದ್ದ.

ಜೈನ್ ವಿರುದ್ದ ಪ್ರಕರಣ ದಾಖಲಾಗಿದ್ದು ಇದೇ ಮೊದಲಲ್ಲ. 2011ರಲ್ಲಿ, ಅಕ್ರಮ ಸ್ಯಾಟಲೈಟ್ ಫೋನ್‌ ಪತ್ತೆಯಾದ ಬಳಿಕ ಗಾಝಿಯಾಬಾದ್‌ನ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.

ಜೈನ್ ನಕಲಿ ರಾಯಭಾರ ಕಚೇರಿಯನ್ನು ಏಕೆ ನಡೆಸುತ್ತಿದ್ದ?

ಜೈನ್ ನಕಲಿ ರಾಯಭಾರ ಕಚೇರಿ ತೆರೆದು ಉದ್ಯೋಗ ವಂಚನೆ ಮತ್ತು ಹವಾಲಾ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಕಲಿ ರಾಯಭಾರ ಕಚೇರಿಯ ಮೂಲಕ ಜೈನ್‌ ನಡೆಸುತ್ತಿದ್ದ ಪ್ರಮುಖ ಚಟುವಟಿಕೆಗಳಲ್ಲಿ ಕಂಪನಿಗಳು ಮತ್ತು ವ್ಯಕ್ತಿಗಳಿಗೆ ವಿದೇಶದಲ್ಲಿ ಕೆಲಸ ಮಾಡಲು ದಲ್ಲಾಳಿ ಒಪ್ಪಂದಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆ ನಡೆಸುವುದು ಸೇರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ಮತ್ತು ಕಂಪನಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಜೈನ್ ಅವರನ್ನು ವಂಚಿಸುತ್ತಿದ್ದ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಜನರ ವಿಶ್ವಾಸ ಗಳಿಸಲು ಮತ್ತು ಮೋಸದ ಉದ್ಯೋಗಗಳು ಅಥವಾ ವ್ಯಾಪಾರ ಅವಕಾಶಗಳ ಮೂಲಕ ವಂಚಿಸಲು ಆತ ತನ್ನ ನಕಲಿ ರಾಜತಾಂತ್ರಿಕ ವ್ಯಕ್ತಿತ್ವವನ್ನು ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಎಟಿಎಸ್ ದಾಳಿಯಲ್ಲಿ ಪತ್ತೆಯಾಗಿದ್ದು ಏನು?

ಹರ್ಷವರ್ಧನ್ ಜೈನ್ ಬಳಿ ನಕಲಿ ದಾಖಲೆಗಳು, ವಿದೇಶಿ ಕರೆನ್ಸಿ ಮತ್ತು ಹಲವಾರು ಇತರ ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಆತ ಹವಾಲಾ ದಂಧೆಗೆ ಬಳಸುತ್ತಿದ್ದ ಎಂದು ಶಂಕಿಸಲಾಗಿದೆ. ಎಸ್‌ಟಿಎಫ್‌ ನೋಯ್ಡಾ ಘಟಕವು ರೂ. 44 ಲಕ್ಷಕ್ಕೂ ಹೆಚ್ಚು ಹಣ ಮತ್ತು ಹಲವಾರು ದೇಶಗಳ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದೆ. ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ನಾಲ್ಕು ವಾಹನಗಳು, 18 ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳು ಮತ್ತು ಮೈಕ್ರೋನೇಷನ್‌ಗಳ 12 ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಭಾರತದ ವಿದೇಶಾಂಗ ಸಚಿವಾಲಯದ ಸೀಲ್ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ಸೀಲುಗಳು, ಎರಡು ನಕಲಿ ಪ್ರೆಸ್ ಕಾರ್ಡ್‌ಗಳು ಮತ್ತು ವಿವಿಧ ಕಂಪನಿಗಳ ದಾಖಲೆಗಳು ಕೂಡ ಎಸ್‌ಟಿಎಫ್‌ ದಾಳಿ ವೇಳೆ ಪತ್ತೆಯಾಗಿದೆ.

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...