Homeಮುಖಪುಟನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ಯುಪಿಯಲ್ಲಿ 7 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನಕಲಿ ರಾಯಭಾರ ಕಚೇರಿ ಪತ್ತೆಯಾಗಿದೆ!

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ.

ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು ಗುರುತಿಸದ ದೇಶಗಳ ಹೆಸರಿನಲ್ಲಿ ನಕಲಿ ಧ್ವಜ ನೆಟ್ಟಿದ್ದ. ಈ ರೀತಿ ಸುಮಾರು 7 ವರ್ಷಗಳಿಂದ ಜನರು, ಕಂಪನಿಗಳು ಮತ್ತು ಅಧಿಕಾರಿಗಳನ್ನು ಯಾಮಾರಿಸಿದ್ದ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಪಶ್ಚಿಮ ಆರ್ಕ್ಟಿಕಾ, ಸಬೋರ್ಗಾ, ಪೌಲ್ವಿಯಾ ಮತ್ತು ಲೊಡೋನಿಯಾದ ದೇಶಗಳ ಹೆಸರಿನಲ್ಲಿ ಹರ್ಷವರ್ಧನ್ ಜೈನ್ ರಾಯಭಾರ ಕಚೇರಿ ನಡೆಸುತ್ತಿದ್ದ.

ಪಶ್ಚಿಮ ಆರ್ಕ್ಟಿಕಾ ಒಂದು ಮೈಕ್ರೋನೇಷನ್ ಆಗಿದ್ದು, ಯಾವುದೇ ದೇಶಗಳ ಸರ್ಕಾರ ಇದನ್ನು ಸಾರ್ವಭೌಮ ರಾಷ್ಟ್ರವೆಂದು ಅಧಿಕೃತವಾಗಿ ಗುರುತಿಸಿಲ್ಲ. ಹಾಗಾಗಿ, ಇದೊಂದು ಸ್ವಯಂಘೋಷಿತ ದೇಶವಾಗಿದೆ. ಇದು ಅಂಟಾರ್ಕ್ಟಿಕಾದಲ್ಲಿ ಭೂಮಿಯನ್ನು ಹೊಂದಿದೆ ಮತ್ತು ಹವಾಮಾನ ಕ್ರಮಕ್ಕಾಗಿ ಪ್ರತಿಪಾದಿಸುವ ಲಾಭರಹಿತ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇದನ್ನು ಮಾಜಿ ಯುಎಸ್ ನೌಕಾಪಡೆಯ ಅಧಿಕಾರಿಯೊಬ್ಬರು ಸ್ಥಾಪಿಸಿದ್ದು, ಅಂತಾರಾಷ್ಟ್ರೀಯ ಮನ್ನಣೆ ಹೊಂದಿಲ್ಲ.

ಸಬೋರ್ಗಾ ಒಂದು ಮಾನ್ಯತೆ ಪಡೆದ ದೇಶ ಅಥವಾ ಮೈಕ್ರೋನೇಷನ್ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವರದಿಗಳ ಪ್ರಕಾರ, ಇದು ಹರ್ಷವರ್ಧನ್ ಜೈನ್ ಸೃಷ್ಟಿಸಿದ ನಕಲಿ ದೇಶದ ಹೆಸರಾಗಿದೆ. ಪೌಲ್ವಿಯಾ ಕೂಡ ಸಬೋರ್ಗಾದಂತೆ ಮಾನ್ಯತೆ ಪಡೆದ ದೇಶ ಅಥವಾ ಪ್ರಸಿದ್ದಿ ಹೊಂದಿರುವ ಮೈಕ್ರೋನೇಷನ್ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇದೂ ಕೂಡ ಹರ್ಷವರ್ಧನ್‌ನ ನಕಲಿ ಸೃಷ್ಟಿಯಾಗಿದೆ.

ಇನ್ನು ಲೊಡೋನಿಯಾ ದಕ್ಷಿಣ ಸ್ವೀಡನ್‌ನಲ್ಲಿರುವ ಒಂದು ಮೈಕ್ರೋನೇಷನ್ ಎಂದು ಕೆಲ ಮಾಹಿತಿ ಮೂಲಗಳು ಹೇಳುತ್ತವೆ. ಆದರೆ ಇದು ಅಧಿಕೃತವಾಗಿ ಗುರುತಿಸಲ್ಪಟ್ಟ ಸಾರ್ವಭೌಮ ರಾಷ್ಟ್ರವಲ್ಲ. ಹಾಗಾಗಿ, ಇದು ಕೂಡ ಹರ್ಷವರ್ಧನ್‌ ಸೃಷ್ಟಿಸಿದ ನಕಲಿ ದೇಶವಾಗಿದೆ.

ಹರ್ಷವರ್ಧನ್ ಜೈನ್ ಯಾರು?

ಹರ್ಷವರ್ಧನ್ ಜೈನ್ ಲಂಡನ್ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ ಮತ್ತು ಗಾಝಿಯಾಬಾದ್‌ನ ಐಟಿಎಸ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಎಂಬಿಎ ಪದವೀಧರ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಗಾಝಿಯಾಬಾದ್‌ನ ಉದ್ಯಮಿಯೊಬ್ಬರ ಮಗನಾದ ಈತನ ಕುಟುಂಬವು ರಾಜಸ್ಥಾನದಲ್ಲಿ ಅಮೃತಶಿಲೆಯ ಗಣಿ ಹೊಂದಿತ್ತು. ತಂದೆಯ ನಿಧನದ ನಂತರ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಆಗ ಹರ್ಷವರ್ಧನ್ ಜೈನ್ ವಿವಾದಾತ್ಮಕ ದೇವಮಾನವ ಚಂದ್ರಸ್ವಾಮಿಯನ್ನು ಭೇಟಿಯಾಗಿದ್ದ. ಬಳಿಕ ಆತನ ಸಹಾಯದಿಂದ ಲಂಡನ್‌ಗೆ ತೆರಳಿ ಹಲವು ಕಂಪನಿಗಳನ್ನು ತೆರೆದಿದ್ದ.

ತನಿಖಾ ಸಂಸ್ಥೆಗಳ ಪ್ರಕಾರ, ಈ ಕಂಪನಿಗಳನ್ನು ಲೆಕ್ಕವಿಲ್ಲದ ಹಣವನ್ನು ಮರೆಮಾಚಲು ಬಳಸಲಾಗುತ್ತಿತ್ತು ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹರ್ಷವರ್ಧನ್ ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಜೊತೆಗೂ ಸಂಪರ್ಕ ಹೊಂದಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿ ಹೇಳಿದೆ.

ಚಂದ್ರಸ್ವಾಮಿಯ ಮರಣದ ನಂತರ ಗಾಝಿಯಾಬಾದ್‌ಗೆ ಮರಳಿದ ಜೈನ್, ಜನರನ್ನು ವಂಚಿಸಲು ನಕಲಿ ರಾಯಭಾರ ಕಚೇರಿಯನ್ನು ತೆರೆದಿದ್ದ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಪ್ರಮುಖ ರಾಜಕೀಯ ವ್ಯಕ್ತಿಗಳೊಂದಿಗೆ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಜನರನ್ನು ಯಾಮಾರಿಸುತ್ತಿದ್ದ.

ಜೈನ್ ವಿರುದ್ದ ಪ್ರಕರಣ ದಾಖಲಾಗಿದ್ದು ಇದೇ ಮೊದಲಲ್ಲ. 2011ರಲ್ಲಿ, ಅಕ್ರಮ ಸ್ಯಾಟಲೈಟ್ ಫೋನ್‌ ಪತ್ತೆಯಾದ ಬಳಿಕ ಗಾಝಿಯಾಬಾದ್‌ನ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.

ಜೈನ್ ನಕಲಿ ರಾಯಭಾರ ಕಚೇರಿಯನ್ನು ಏಕೆ ನಡೆಸುತ್ತಿದ್ದ?

ಜೈನ್ ನಕಲಿ ರಾಯಭಾರ ಕಚೇರಿ ತೆರೆದು ಉದ್ಯೋಗ ವಂಚನೆ ಮತ್ತು ಹವಾಲಾ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಕಲಿ ರಾಯಭಾರ ಕಚೇರಿಯ ಮೂಲಕ ಜೈನ್‌ ನಡೆಸುತ್ತಿದ್ದ ಪ್ರಮುಖ ಚಟುವಟಿಕೆಗಳಲ್ಲಿ ಕಂಪನಿಗಳು ಮತ್ತು ವ್ಯಕ್ತಿಗಳಿಗೆ ವಿದೇಶದಲ್ಲಿ ಕೆಲಸ ಮಾಡಲು ದಲ್ಲಾಳಿ ಒಪ್ಪಂದಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆ ನಡೆಸುವುದು ಸೇರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ಮತ್ತು ಕಂಪನಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಜೈನ್ ಅವರನ್ನು ವಂಚಿಸುತ್ತಿದ್ದ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಜನರ ವಿಶ್ವಾಸ ಗಳಿಸಲು ಮತ್ತು ಮೋಸದ ಉದ್ಯೋಗಗಳು ಅಥವಾ ವ್ಯಾಪಾರ ಅವಕಾಶಗಳ ಮೂಲಕ ವಂಚಿಸಲು ಆತ ತನ್ನ ನಕಲಿ ರಾಜತಾಂತ್ರಿಕ ವ್ಯಕ್ತಿತ್ವವನ್ನು ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಎಟಿಎಸ್ ದಾಳಿಯಲ್ಲಿ ಪತ್ತೆಯಾಗಿದ್ದು ಏನು?

ಹರ್ಷವರ್ಧನ್ ಜೈನ್ ಬಳಿ ನಕಲಿ ದಾಖಲೆಗಳು, ವಿದೇಶಿ ಕರೆನ್ಸಿ ಮತ್ತು ಹಲವಾರು ಇತರ ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಆತ ಹವಾಲಾ ದಂಧೆಗೆ ಬಳಸುತ್ತಿದ್ದ ಎಂದು ಶಂಕಿಸಲಾಗಿದೆ. ಎಸ್‌ಟಿಎಫ್‌ ನೋಯ್ಡಾ ಘಟಕವು ರೂ. 44 ಲಕ್ಷಕ್ಕೂ ಹೆಚ್ಚು ಹಣ ಮತ್ತು ಹಲವಾರು ದೇಶಗಳ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದೆ. ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ನಾಲ್ಕು ವಾಹನಗಳು, 18 ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳು ಮತ್ತು ಮೈಕ್ರೋನೇಷನ್‌ಗಳ 12 ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಭಾರತದ ವಿದೇಶಾಂಗ ಸಚಿವಾಲಯದ ಸೀಲ್ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ಸೀಲುಗಳು, ಎರಡು ನಕಲಿ ಪ್ರೆಸ್ ಕಾರ್ಡ್‌ಗಳು ಮತ್ತು ವಿವಿಧ ಕಂಪನಿಗಳ ದಾಖಲೆಗಳು ಕೂಡ ಎಸ್‌ಟಿಎಫ್‌ ದಾಳಿ ವೇಳೆ ಪತ್ತೆಯಾಗಿದೆ.

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...