Homeಮುಖಪುಟನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ಯುಪಿಯಲ್ಲಿ 7 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನಕಲಿ ರಾಯಭಾರ ಕಚೇರಿ ಪತ್ತೆಯಾಗಿದೆ!

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ.

ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು ಗುರುತಿಸದ ದೇಶಗಳ ಹೆಸರಿನಲ್ಲಿ ನಕಲಿ ಧ್ವಜ ನೆಟ್ಟಿದ್ದ. ಈ ರೀತಿ ಸುಮಾರು 7 ವರ್ಷಗಳಿಂದ ಜನರು, ಕಂಪನಿಗಳು ಮತ್ತು ಅಧಿಕಾರಿಗಳನ್ನು ಯಾಮಾರಿಸಿದ್ದ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಪಶ್ಚಿಮ ಆರ್ಕ್ಟಿಕಾ, ಸಬೋರ್ಗಾ, ಪೌಲ್ವಿಯಾ ಮತ್ತು ಲೊಡೋನಿಯಾದ ದೇಶಗಳ ಹೆಸರಿನಲ್ಲಿ ಹರ್ಷವರ್ಧನ್ ಜೈನ್ ರಾಯಭಾರ ಕಚೇರಿ ನಡೆಸುತ್ತಿದ್ದ.

ಪಶ್ಚಿಮ ಆರ್ಕ್ಟಿಕಾ ಒಂದು ಮೈಕ್ರೋನೇಷನ್ ಆಗಿದ್ದು, ಯಾವುದೇ ದೇಶಗಳ ಸರ್ಕಾರ ಇದನ್ನು ಸಾರ್ವಭೌಮ ರಾಷ್ಟ್ರವೆಂದು ಅಧಿಕೃತವಾಗಿ ಗುರುತಿಸಿಲ್ಲ. ಹಾಗಾಗಿ, ಇದೊಂದು ಸ್ವಯಂಘೋಷಿತ ದೇಶವಾಗಿದೆ. ಇದು ಅಂಟಾರ್ಕ್ಟಿಕಾದಲ್ಲಿ ಭೂಮಿಯನ್ನು ಹೊಂದಿದೆ ಮತ್ತು ಹವಾಮಾನ ಕ್ರಮಕ್ಕಾಗಿ ಪ್ರತಿಪಾದಿಸುವ ಲಾಭರಹಿತ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇದನ್ನು ಮಾಜಿ ಯುಎಸ್ ನೌಕಾಪಡೆಯ ಅಧಿಕಾರಿಯೊಬ್ಬರು ಸ್ಥಾಪಿಸಿದ್ದು, ಅಂತಾರಾಷ್ಟ್ರೀಯ ಮನ್ನಣೆ ಹೊಂದಿಲ್ಲ.

ಸಬೋರ್ಗಾ ಒಂದು ಮಾನ್ಯತೆ ಪಡೆದ ದೇಶ ಅಥವಾ ಮೈಕ್ರೋನೇಷನ್ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ವರದಿಗಳ ಪ್ರಕಾರ, ಇದು ಹರ್ಷವರ್ಧನ್ ಜೈನ್ ಸೃಷ್ಟಿಸಿದ ನಕಲಿ ದೇಶದ ಹೆಸರಾಗಿದೆ. ಪೌಲ್ವಿಯಾ ಕೂಡ ಸಬೋರ್ಗಾದಂತೆ ಮಾನ್ಯತೆ ಪಡೆದ ದೇಶ ಅಥವಾ ಪ್ರಸಿದ್ದಿ ಹೊಂದಿರುವ ಮೈಕ್ರೋನೇಷನ್ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇದೂ ಕೂಡ ಹರ್ಷವರ್ಧನ್‌ನ ನಕಲಿ ಸೃಷ್ಟಿಯಾಗಿದೆ.

ಇನ್ನು ಲೊಡೋನಿಯಾ ದಕ್ಷಿಣ ಸ್ವೀಡನ್‌ನಲ್ಲಿರುವ ಒಂದು ಮೈಕ್ರೋನೇಷನ್ ಎಂದು ಕೆಲ ಮಾಹಿತಿ ಮೂಲಗಳು ಹೇಳುತ್ತವೆ. ಆದರೆ ಇದು ಅಧಿಕೃತವಾಗಿ ಗುರುತಿಸಲ್ಪಟ್ಟ ಸಾರ್ವಭೌಮ ರಾಷ್ಟ್ರವಲ್ಲ. ಹಾಗಾಗಿ, ಇದು ಕೂಡ ಹರ್ಷವರ್ಧನ್‌ ಸೃಷ್ಟಿಸಿದ ನಕಲಿ ದೇಶವಾಗಿದೆ.

ಹರ್ಷವರ್ಧನ್ ಜೈನ್ ಯಾರು?

ಹರ್ಷವರ್ಧನ್ ಜೈನ್ ಲಂಡನ್ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ ಮತ್ತು ಗಾಝಿಯಾಬಾದ್‌ನ ಐಟಿಎಸ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಎಂಬಿಎ ಪದವೀಧರ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಗಾಝಿಯಾಬಾದ್‌ನ ಉದ್ಯಮಿಯೊಬ್ಬರ ಮಗನಾದ ಈತನ ಕುಟುಂಬವು ರಾಜಸ್ಥಾನದಲ್ಲಿ ಅಮೃತಶಿಲೆಯ ಗಣಿ ಹೊಂದಿತ್ತು. ತಂದೆಯ ನಿಧನದ ನಂತರ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಆಗ ಹರ್ಷವರ್ಧನ್ ಜೈನ್ ವಿವಾದಾತ್ಮಕ ದೇವಮಾನವ ಚಂದ್ರಸ್ವಾಮಿಯನ್ನು ಭೇಟಿಯಾಗಿದ್ದ. ಬಳಿಕ ಆತನ ಸಹಾಯದಿಂದ ಲಂಡನ್‌ಗೆ ತೆರಳಿ ಹಲವು ಕಂಪನಿಗಳನ್ನು ತೆರೆದಿದ್ದ.

ತನಿಖಾ ಸಂಸ್ಥೆಗಳ ಪ್ರಕಾರ, ಈ ಕಂಪನಿಗಳನ್ನು ಲೆಕ್ಕವಿಲ್ಲದ ಹಣವನ್ನು ಮರೆಮಾಚಲು ಬಳಸಲಾಗುತ್ತಿತ್ತು ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹರ್ಷವರ್ಧನ್ ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಜೊತೆಗೂ ಸಂಪರ್ಕ ಹೊಂದಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿ ಹೇಳಿದೆ.

ಚಂದ್ರಸ್ವಾಮಿಯ ಮರಣದ ನಂತರ ಗಾಝಿಯಾಬಾದ್‌ಗೆ ಮರಳಿದ ಜೈನ್, ಜನರನ್ನು ವಂಚಿಸಲು ನಕಲಿ ರಾಯಭಾರ ಕಚೇರಿಯನ್ನು ತೆರೆದಿದ್ದ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಪ್ರಮುಖ ರಾಜಕೀಯ ವ್ಯಕ್ತಿಗಳೊಂದಿಗೆ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಜನರನ್ನು ಯಾಮಾರಿಸುತ್ತಿದ್ದ.

ಜೈನ್ ವಿರುದ್ದ ಪ್ರಕರಣ ದಾಖಲಾಗಿದ್ದು ಇದೇ ಮೊದಲಲ್ಲ. 2011ರಲ್ಲಿ, ಅಕ್ರಮ ಸ್ಯಾಟಲೈಟ್ ಫೋನ್‌ ಪತ್ತೆಯಾದ ಬಳಿಕ ಗಾಝಿಯಾಬಾದ್‌ನ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಭ್ ಯಶ್ ತಿಳಿಸಿದ್ದಾರೆ.

ಜೈನ್ ನಕಲಿ ರಾಯಭಾರ ಕಚೇರಿಯನ್ನು ಏಕೆ ನಡೆಸುತ್ತಿದ್ದ?

ಜೈನ್ ನಕಲಿ ರಾಯಭಾರ ಕಚೇರಿ ತೆರೆದು ಉದ್ಯೋಗ ವಂಚನೆ ಮತ್ತು ಹವಾಲಾ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಕಲಿ ರಾಯಭಾರ ಕಚೇರಿಯ ಮೂಲಕ ಜೈನ್‌ ನಡೆಸುತ್ತಿದ್ದ ಪ್ರಮುಖ ಚಟುವಟಿಕೆಗಳಲ್ಲಿ ಕಂಪನಿಗಳು ಮತ್ತು ವ್ಯಕ್ತಿಗಳಿಗೆ ವಿದೇಶದಲ್ಲಿ ಕೆಲಸ ಮಾಡಲು ದಲ್ಲಾಳಿ ಒಪ್ಪಂದಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆ ನಡೆಸುವುದು ಸೇರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ಮತ್ತು ಕಂಪನಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಜೈನ್ ಅವರನ್ನು ವಂಚಿಸುತ್ತಿದ್ದ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಜನರ ವಿಶ್ವಾಸ ಗಳಿಸಲು ಮತ್ತು ಮೋಸದ ಉದ್ಯೋಗಗಳು ಅಥವಾ ವ್ಯಾಪಾರ ಅವಕಾಶಗಳ ಮೂಲಕ ವಂಚಿಸಲು ಆತ ತನ್ನ ನಕಲಿ ರಾಜತಾಂತ್ರಿಕ ವ್ಯಕ್ತಿತ್ವವನ್ನು ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಎಟಿಎಸ್ ದಾಳಿಯಲ್ಲಿ ಪತ್ತೆಯಾಗಿದ್ದು ಏನು?

ಹರ್ಷವರ್ಧನ್ ಜೈನ್ ಬಳಿ ನಕಲಿ ದಾಖಲೆಗಳು, ವಿದೇಶಿ ಕರೆನ್ಸಿ ಮತ್ತು ಹಲವಾರು ಇತರ ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಆತ ಹವಾಲಾ ದಂಧೆಗೆ ಬಳಸುತ್ತಿದ್ದ ಎಂದು ಶಂಕಿಸಲಾಗಿದೆ. ಎಸ್‌ಟಿಎಫ್‌ ನೋಯ್ಡಾ ಘಟಕವು ರೂ. 44 ಲಕ್ಷಕ್ಕೂ ಹೆಚ್ಚು ಹಣ ಮತ್ತು ಹಲವಾರು ದೇಶಗಳ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದೆ. ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ನಾಲ್ಕು ವಾಹನಗಳು, 18 ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳು ಮತ್ತು ಮೈಕ್ರೋನೇಷನ್‌ಗಳ 12 ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಭಾರತದ ವಿದೇಶಾಂಗ ಸಚಿವಾಲಯದ ಸೀಲ್ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ಸೀಲುಗಳು, ಎರಡು ನಕಲಿ ಪ್ರೆಸ್ ಕಾರ್ಡ್‌ಗಳು ಮತ್ತು ವಿವಿಧ ಕಂಪನಿಗಳ ದಾಖಲೆಗಳು ಕೂಡ ಎಸ್‌ಟಿಎಫ್‌ ದಾಳಿ ವೇಳೆ ಪತ್ತೆಯಾಗಿದೆ.

ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...