Homeಮುಖಪುಟದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು.

- Advertisement -
- Advertisement -

ಎಪ್ಪತ್ತೊಂದು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಕಳೆದ ವರ್ಷದಿಂದ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಇವರ ಹೆಸರು ದರ್ಶನ್‌ ಪಾಲ್. ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಪಂಜಾಬ್‌ನ ಅಧ್ಯಕ್ಷರಾದ ಇವರು 2020ರ ಜೂನ್‌ ತಿಂಗಳಿಂದ ಕೃಷಿ ಕಾಯ್ದೆಗ ವಿರುದ್ಧ ರೈತರನ್ನು ಸಂಘಟಿಸುತ್ತಿದ್ದಾರೆ.

ಮೂಲತಃ ಪಟಿಯಾಲದವರಾದ ದರ್ಶನ್ ಪಾಲ್‌, ವೈದ್ಯರಾಗಿ ಸೇವೆ ಸಲ್ಲಿಸುತ್ತಲೇ ಹಲವು ರೈತ-ಕಾರ್ಮಿಕ ಸಮಸ್ಯೆಗಳ ಕುರಿತಾಗಿ ಹೋರಾಡಿದವರು. ರೈತರ ಸಾಲ ಮನ್ನಾಕ್ಕಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು.

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ದರ್ಶನ್ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು. ಹಾಗೆಯೇ ಭಾರತೀಯ ಕಿಸಾನ್‌ ಯೂನಿಯನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. 2016ರಲ್ಲಿ ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಸೇರಿದ ಪಾಲ್‌ ಕಳೆದ 2019 ರಲ್ಲಿ ಯೂನಿಯನ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮಿತಿ ಸದಸ್ಯರೂ ಆಗಿರುವ ಪಾಲ್‌, ರೈತರ ಹೋರಾಟವನ್ನು ಪಂಜಾಬಿಗಷ್ಟೇ ಸೀಮಿತವಾಗಿಸದೆ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಸಂಘಟಿಸಿದ್ದಾರೆ.

ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ 3 ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿ ಹೋರಾಟಕ್ಕಿಳಿದರು. ಮುಖ್ಯವಾಗಿ ಪಂಜಾಬ್ ರಾಜ್ಯದಲ್ಲಿನ 31 ರೈತ-ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ, ಸಮನ್ವಯಕಾರರಾಗಿ ಹೋರಾಟ ಮುನ್ನಡೆಸಿದರು.

2020 ರ ನವೆಂಬರ್ 25-26 ರಂದು ರೈತರು ಪಂಜಾಬ್ ಮತ್ತು ಹರಿಯಾಣದಿಂದ ದೆಹಲಿಗೆ ರ್ಯಾಲಿ ಹೊರಟರು. ಕೇಂದ್ರ ಸರ್ಕಾರ ತನ್ನ ಪೊಲೀಸ್ ಬಲ ಬಳಸಿ ಅದನ್ನು ತಡೆಯಲು ಯತ್ನಿಸಿತು. ರೈತರ ಅಹಿಂಸಾತ್ಮಕ ಹೋರಾಟದೆದುರು ಅದು ಸೋತಿತು. ನಂತರ ದೆಹಲಿಯ ನಾಲ್ಕೈದು ಗಡಿಗಳಲ್ಲಿ ಲಕ್ಷಾಂತರ ರೈತರು ಬೀಡು ಬಿಟ್ಟು ಐತಿಹಾಸಿಕ ರೈತ ಹೋರಾಟ ಕಟ್ಟಿದರು.

ಈ ಹೋರಾಟವನ್ನು ಮುನ್ನೆಡೆಸುವ ಸಲುವಾಗಿ ಅಲ್ಲಿ ಸೇರಿದ್ದ ಪ್ರಮುಖ 37 ಸಂಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ಎಂಬ ವಿಶಾಲ ಒಕ್ಕೂಟವನ್ನು ಸ್ಥಾಪಿಸಿದರು. ದರ್ಶನ್ ಪಾಲ್‌ರವರನ್ನು ಅದರ ಸಂಚಾಲಕರನ್ನಾಗಿ ನೇಮಿಸಲಾಯಿತು. ಅಲ್ಲಿಂದ ಮುಂದೆ ಕೃಷಿ ಕಾಯ್ದೆಗಳ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ  ನಡುವೆ ನಡೆದ 11 ಸುತ್ತಿನ ಮಾತುಕತೆಗಳಲ್ಲಿ ದರ್ಶನ್ ಪಾಲ್ ಮುಂಚೋಣಿ ಪಾತ್ರ ವಹಿಸಿದರು. ದೆಹಲಿಯ ಗಡಿಗಳಲ್ಲಿ ಅಸಂಖ್ಯ ರೈತರದೊಂದಿಗೆ ಕೃಷಿ ಕೂಲಿ ಕಾರ್ಮಿಕರನ್ನು ಸೇರಿಸುವುದರಲ್ಲಿ ದರ್ಶನ್ ಪಾಲ್ ಪಾತ್ರವಿದೆ.

2021ರ ಮಾರ್ಚ್ 21 ರಂದು ರಾಜ್ಯದ ಶಿವಮೊಗ್ಗದಲ್ಲಿ ನಡೆದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಡಾ.ದರ್ಶನ್ ಪಾಲ್ ಭಾಗವಹಿಸಿದ್ದರು. ಶಾಂತ ಸ್ವಭಾವದ, ಮೃದು ದನಿಯ ಆದರೆ ದಿಟ್ಟತೆಯ ವ್ಯಕ್ತಿತ್ವ ಅವರದು. ಜನವರಿ 26ರ ಗಣರಾಜ್ಯೋತ್ಸವದ ಗದ್ದಲ, ಗಡಿಗಳಲ್ಲಿ ಪೊಲೀಸ್ ದೌರ್ಜನ್ಯ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಅವರು ಬಹಳ ತಾಳ್ಮೆಯಿಂದ, ಪ್ರಜಾತಾಂತ್ರಿಕ ರೀತಿಯಲ್ಲಿ ನಿಭಾಯಿಸಿದ್ದಾರೆ.

ಈಗ ಒಕ್ಕೂಟ ಸರ್ಕಾರ ರೈತರ ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ಕ್ಷಮೆ ಕೇಳಿದ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ರೈತರು ದರ್ಶನ್ ಪಾಲ್ ನೇತೃತ್ವದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ:  ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...