Homeಮುಖಪುಟ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾದ ನಂತರ ಚಂದ್ರುರವರು ಕೇವಲ 6 ವರ್ಷಗಳಲ್ಲಿ ವಿಲೇವಾರಿ ಮಾಡಿರುವ ಪ್ರಕರಣದ ಸಂಖ್ಯೆ ಬರೋಬ್ಬರಿ 96 ಸಾವಿರ!

- Advertisement -
- Advertisement -

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರದ ಬಗ್ಗೆ ಇದೀಗ ಎಲ್ಲಾ ಕಡೆಯಲ್ಲಿ ಚರ್ಚೆಯಾಗುತ್ತಿದೆ. ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ತಾನು ವಕೀಲನಾಗಿದ್ದಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಇದು.

ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಧ್ಯದಕ್ಕೆ ‘ಜೈಭೀಮ್‌’ ಬಗ್ಗೆಗಿನ ಚರ್ಚೆ ಮುಗಿಯುವಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಚಿತ್ರದ ಪ್ರಧಾನ ಪಾತ್ರವೆಂದು ನಾವು ಒಪ್ಪಿಕೊಳ್ಳಬಹುದಾದರೆ ವಕೀಲ ಚಂದ್ರು ಅವರ ಪಾತ್ರ. ಇದನ್ನು ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಚಿತ್ರದ ವಕೀಲ ‘ಚಂದ್ರು’ ಯಾರು?

ಜೈಭೀಮ್ ಚಿತ್ರದ ವಕೀಲ ಚಂದ್ರು, ಮದ್ರಾಸ್‌ನ ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅವರಾಗಿದ್ದಾರೆ. ಈ ಚಿತ್ರ ಜಸ್ಟೀಸ್ ಕೆ. ಚಂದ್ರು ಅವರ ಬಯೋಪಿಕ್ ಅಲ್ಲದಿದ್ದರೂ, 1995 ರಲ್ಲಿ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಇರುಳ ಬುಡಕಟ್ಟು ಜನಾಂಗದವರ ಮೇಲೆ ನಡೆದ ಕಸ್ಟೋಡಿಯಲ್ ಟಾರ್ಚರ್‌ ಮತ್ತು ಅವರ ಪರವಾಗಿ ಮಾನವ ಹಕ್ಕುಗಳ ವಕೀಲ ಚಂದ್ರು ಅವರು ನಡೆಸಿದ ಕಾನೂನು ಹೋರಾಟದ ನೈಜ ಜೀವನದ ನಿದರ್ಶನಗಳಾಗಿವೆ.

ಮಾರ್ಚ್ 1951 ರಲ್ಲಿ ಶ್ರೀರಂಗಂನಲ್ಲಿ ಜನಿಸಿದ ನ್ಯಾಯಮೂರ್ತಿ ಚಂದ್ರು 16 ನೇ ವಯಸ್ಸಿನಿಂದಲೂ ಹೋರಾಟ ರಂಗದಲ್ಲಿದ್ದಾರೆ. ತಮಿಳುನಾಡಿನಲ್ಲಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆಯಾದ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಟ್ಟಿ ಬೆಳೆಸಿದವರಲ್ಲಿ ಅವರು ಒಬ್ಬರು. ಹಲವಾರು ಹೋರಾಟಗಳಿಗೆ ನೇತೃತ್ವ ನೀಡಿದವರು. ವಕೀಲರಾಗಿ ಮಾನವ ಹಕ್ಕುಗಳಿಗಾಗಿ ನಿರಂತರ ಹೋರಾಡಿದವರಾಗಿದ್ದು, ನಂತರ ನ್ಯಾಯಾಧೀಶರಾಗಿಯೂ ತಮ್ಮ ಅನನ್ಯ ಸೇವೆಯನ್ನು ಸಲ್ಲಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾದ ನಂತರ ಅವರು ವಿಲೇವಾರಿ ಮಾಡಿರುವ ಪ್ರಕರಣದ ಸಂಖ್ಯೆ ಬರೋಬ್ಬರಿ 96 ಸಾವಿರ!. ಇದನ್ನು ಅವರು ತಮ್ಮ ಸೇವೆಯ ಕೇವಲ 6 ವರ್ಷಗಳಲ್ಲಿ ಮಾಡಿದ್ದರು. ಸಾಮಾನ್ಯವಾಗಿ ನ್ಯಾಯಮೂರ್ತಿಗಳು ಇದರ 50% ದಷ್ಟೂ ಮುಟ್ಟುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಕೇವಲ ದೊಡ್ಡ ಸಂಖ್ಯೆ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ಹಲವು ಮಹತ್ವದ ತೀರ್ಪುಗಳನ್ನು ತನ್ನ ಕಾಲಾವಧಿಯಲ್ಲಿ ನೀಡಿದ್ದರು. “ಮಹಿಳೆಯರು ದೇವಸ್ಥಾನಗಳಲ್ಲಿ ಅರ್ಚಕರಾಗಬಹುದು. ಜಾತಿ ಭೇದವಿಲ್ಲದೆ, ಎಲ್ಲರಿಗೂ ಸಾಮಾನ್ಯವಾದ ಸ್ಮಶಾನ ಇರಬೇಕು. ನಾಟಕಗಳನ್ನು ಪ್ರದರ್ಶಿಸಲು, ಪೊಲೀಸ್ ಅನುಮತಿ ಅಗತ್ಯವಿಲ್ಲ. ಮಧ್ಯಾಹ್ನದ ಬಿಸಿಯೂಟದ ಕೆಲಸಗಳಲ್ಲಿ ಸಮುದಾಯ ಆಧಾರಿತ ಮೀಸಲಾತಿ ನೀಡಬೇಕು” ಎಂಬಂತಹ ಹಲವು ತೀರ್ಪುಗಳನ್ನು ಅವರು ನೀಡಿದ್ದರು.

ವಕೀಲರಾಗಿದ್ದಾಗ ಚಂದ್ರು ಅವರು ಮಹಿಳೆಯರ ಪರವಾಗಿ, ವಿಶೇಷವಾಗಿ ಸಣ್ಣ ಪಟ್ಟಣಗಳು, ಕಡಿಮೆ ಆರ್ಥಿಕ ಹಿನ್ನೆಲೆ ಮತ್ತು ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಒಂದು ರೂಪಾಯಿ ಶುಲ್ಕವಿಲ್ಲದೆ ಅನೇಕ ಪ್ರಕರಣಗಳನ್ನು ಕೈಗಿತ್ತಿಕೊಂಡು ಹೋರಾಟ ನಡೆಸಿದ್ದರು.

ಸರಳತೆಗೆ ಹೆಸರುವಾಸಿಯಾಗಿದ್ದ ಅವರು ಸಾಮಾನ್ಯವಾಗಿ ನ್ಯಾಯಾಧೀಶರಿಗೆ ಸಿಗುತ್ತಿದ್ದ ಸೌಕರ್ಯಗಳಿಂದ ದೂರವಿರುತ್ತಿದ್ದರು ಹಾಗೂ ಆಡಂಬರ ಮತ್ತು ವೈಭವವನ್ನು ಇಷ್ಟಪಡುತ್ತಿರಲಿಲ್ಲ. ನ್ಯಾಯಮೂರ್ತಿಯಾಗಿದ್ದಾಗ ತನ್ನ ಆಗಮನವನ್ನು ಘೋಷಿಸಲು ಕೆಂಪು ಟೋಪಿಯ, ಬೆಳ್ಳಿಯ ಗದೆಯನ್ನು ಹೊಂದಿರುವ “ದಾವಳಿ” ಇರಬೇಕಿಲ್ಲ, ಇದು ಅಧಿಕಾರಶಾಹಿಯ ಸಂಕೇತ ಎಂಬುವುದು ಅವರ ನಿಲುವಾಗಿತ್ತು. ಜೊತೆಗೆ ತನ್ನ ಪಕ್ಕದಲ್ಲಿ ಬಂದೂಕು ಹಿಡಿದ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ)ಯನ್ನು ಇರಿಸುತ್ತಿರಲಿಲ್ಲ. ಅವರ ಮನೆಯಲ್ಲಿ ಅಧಿಕೃತ ಸೇವಕರು ಇರಲಿಲ್ಲ. ನ್ಯಾಯಾಲಯದಲ್ಲಿ ವಕೀಲರು ಅವರನ್ನು “ಮೈ ಲಾರ್ಡ್” ಎಂದು ಕರೆಯುವುದನ್ನು ಅವರು ಒಪ್ಪಿಕೊಳ್ಳುತ್ತಿರಲಿಲ್ಲ.

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ತನ್ನ ನಿವೃತ್ತಿಯ ದಿನ ಅವರು ತಮ್ಮ ಸರ್ಕಾರಿ ಕಾರನ್ನು ಸರ್ಕಾರಕ್ಕೆ ಒಪ್ಪಿಸಿದ್ದರು ಮತ್ತು ಅಂದು ಮನೆಗೆ ರೈಲಿನ ಮೂಲಕ ಹಿಂದಿರುಗಿದ್ದರು ಎಂದು ವರದಿಗಳು ಹೇಳುತ್ತವೆ. ಅವರು ನಿವೃತ್ತಿಯ ಭರ್ಜರಿ ವಿದಾಯವನ್ನು ಒಪ್ಪಿಕೊಂಡಿರಲಿಲ್ಲ. ಸೇವೆಗೆ ಸೇರುವಾಗ ಮತ್ತು ಸೇವೆಯಿಂದ ನಿವೃತ್ತಿಯಾದಾಗ ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದರು.

ಅವರ ಕಚೇರಿಯ ಕೊಠಡಿಯ ಪ್ರವೇಶದ್ವಾರದಲ್ಲಿ ಇದ್ದ ಸೂಚನಾಫಲಕದಲ್ಲಿ

“ಇಲ್ಲಿ ಯಾರೂ ದೇವರಲ್ಲ – ಆದ್ದರಿಂದ ಹೂವುಗಳು ಬೇಕಿಲ್ಲ
ಇಲ್ಲಿ ಯಾರೂ ಹಸಿದಿಲ್ಲ – ಆದ್ದರಿಂದ ಹಣ್ಣುಗಳ ಅಗತ್ಯವಿಲ್ಲ
ಇಲ್ಲಿ ಯಾರೂ ಚಳಿಯಿಂದ ನಡುಗುತ್ತಿಲ್ಲ- ಆದ್ದರಿಂದ ಶಾಲುಗಳ ಅಗತ್ಯವಿಲ್ಲ
ನಮಗೆ ಶುಭ ಹಾರೈಕೆಗಳು ಮಾತ್ರ ಬೇಕಾಗಿದೆ” ಎಂದು ಬರೆಸಿದ್ದರು.

ಜೈ ಭೀಮ್‌ ಚಿತ್ರಕ್ಕೂ ಮುಂಚೆ ಅವರ ಬಗ್ಗೆ ಸಾಕ್ಷ್ಯಚಿತ್ರ ಮಾಡುವುದಾಗಿ ಹೇಳಿದಾಗ ಈ ಬಗ್ಗೆ ಅವರು ನಿರಾಕರಿಸಿದ್ದರು. ತನ್ನನ್ನು ಶ್ಲಾಘಿಸಲು ಮಾಡುವ ಸಾಕ್ಷ್ಯಚಿತ್ರದ ಬಗ್ಗೆ ಅವರಿಗೆ ಒಪ್ಪಿಗೆಯಿರಲಿಲ್ಲ. ಸಾಕ್ಷಿಚಿತ್ರ ನಿರ್ಮಿಸಿ ನನ್ನನ್ನು ಹೊಗಳುವುದರ ಬದಲು ಇರುಳ ಬುಡಕಟ್ಟು ಜನಾಂಗದಂತಹ ಸಮುದಾಯದ ಬಗ್ಗೆ ಚಲನಚಿತ್ರವನ್ನು ನಿರ್ಮಿಸಿ ಎಂಬುವುದ ಅವರ ಅಭಿಪ್ರಾಯವಾಗಿತ್ತು. ಇದು ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಕಾರಣವಾಗಿ, ಅವರಿಗೆ ಸಹಾಯ ಮಾಡುತ್ತದೆ ಎಂಬುವುದು ಅವರ ನಿಲುವಾಗಿತ್ತು.

“ನ್ಯಾಯಮೂರ್ತಿ ಚಂದ್ರು ಅವರು ಅನೇಕ ವಿಷಯಗಳ ಬಗ್ಗೆ ಹೋರಾಡಿದ್ದರು. ಅವುಗಳಲ್ಲಿ ಒಂದನ್ನಾದರೂ ಚಿತ್ರಿಸಲು ಸಾಧ್ಯವಾಗುವ ಅವಕಾಶವನ್ನು ನಾನು ಪಡೆದುಕೊಂಡಿದ್ದೇನೆ ಎಂದು ನಾನು ಭಾವಿಸುತ್ತೇನೆ. ಚಿತ್ರದಲ್ಲಿ ಜಸ್ಟಿಸ್ ಚಂದ್ರು ಪಾತ್ರವನ್ನು ಮಾಡಲು ಸಾಧ್ಯವಾಗಿದ್ದು ವೈಯಕ್ತಿಕವಾಗಿ ನನಗೆ ದೊಡ್ಡ ಮನ್ನಣೆ.” ಎಂದು ಚಿತ್ರದ ನಿರ್ಮಾಪಕ ಮತ್ತು ನಟ ಸೂರಿಯಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...