Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...

ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಕೆ 

ಬೆಂಗಳೂರು: ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ...