Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...