Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...