Homeಮುಖಪುಟರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

ರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

- Advertisement -
- Advertisement -

ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಪಟ್ಟು ಹಿಡಿದಿದ್ದ ಬಿಜೆಪಿ ಹೈಕಮಾಂಡ್ ವರಿಷ್ಠರು, ಕೇಂದ್ರ ಸಂಪುಟದ ಸಚಿವರು ಹಾಗೂ ಸಂಸದರನ್ನೇ ಕಣಕ್ಕಿಳಿಸಿ ತನ್ನ ಪ್ರತಿಷ್ಠೆ ಪಣಕ್ಕಿಟ್ಟಿತ್ತು. ಇದೀಗ 115 ಸ್ಥಾನಗಳನ್ನು ಗೆಲ್ಲುವ ಮೂಲಕ ‘ಅರಮನೆಗಳ ರಾಜ್ಯ’ದ ಗದ್ದುಗೆ ಏರಲು ಸಿದ್ಧವಾಗಿದೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಕೇಳಿಬರುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಸ್ಥಾನದಲ್ಲಿ ಚುನಾವಣೆ ಎದುರಿಸಿತ್ತು.

ರಾಜಮನೆತನ ಹಿನ್ನೆಲೆಯ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ವಸುಂಧರ ರಾಜೆ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜತೆಗೆ ಇನ್ನೂ ಹಲವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಮಹಂತ್ ಬಾಲಕನಾಥ್, ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಮತ್ತು ವಿಪಕ್ಷ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಅವರು ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಮೂರನೇ ಬಾರಿಗೆ ಸಿಎಂ ಆಗ್ತಾರಾ ವಸುಂಧರಾ?

ಎರಡು ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ಅವರು ಝಲ್ರಾಪಟನ್ ಕ್ಷೇತ್ರದಿಂದ 53,193 ಮತಗಳ ಅಂತರದಿಂದ ಗೆದ್ದು ಒಟ್ಟು 1,38,831 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಮಲಾಲ್ ಅವರಿಗಿಂತ 85,638 ಹೆಚ್ಚಿನ ಮತಗಳನ್ನು ಪಡೆದು ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಯೋಗಿ ಮಹಂತ್ ಬಾಲಕನಾಥ್‌ಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ವಾರ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮಹಂತ್ ಬಾಲಕ್ ನಾಥ್ ರಾಜಸ್ಥಾನದ ಪ್ರಮುಖ ಧಾರ್ಮಿಕ ವ್ಯಕ್ತಿಯಾಗಿದ್ದಾರೆ. ಇದೀಗ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಖಾನ್ ಅವರನ್ನು 6,173 ಮತಗಳ ಅಂತರದಿಂದ ಸೋಲಿಸಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಇವರೂ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಿಯಾ ಕುಮಾರಿ ಮುಂದಿನ ರಾಜಸ್ಥಾನ ಸಿಎಂ?

ರಾಜಸ್ಥಾನದ ರಾಜಸಮಂದ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ದಿಯಾ ಕುಮಾರಿ ಅವರು ಜೈಪುರ ಜಿಲ್ಲೆಯಲ್ಲಿರುವ ವಿದ್ಯಾಧರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು, ಕಾಂಗ್ರೆಸ್‌ನ ಸೀತಾರಾಮ್ ಅಗರ್ವಾಲ್ ಅವರನ್ನು 71,368 ಮತಗಳ ಅಂತರದಿಂದ ಸೋಲಿಸಿ, ಸಿಎಂ ಸ್ಥಾನದ ಪ್ರಬಲ ಸ್ಪರ್ಧಿಯಾಗಿದ್ದಾರೆ.

ಸಿಪಿ ಜೋಶಿ ಹೆಸರು ಮುನ್ನೆಲೆಗೆ!

2014 ಹಾಗೂ 2019ರಲ್ಲಿ ಎರಡು ಬಾರಿ ಚಿತ್ತೋರ್ಗಢ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿರುವ ಸಿಪಿ ಜೋಶಿ, ಪ್ರಸ್ತುತ ಬಿಜೆಪಿಯ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದಾರೆ. ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನ ಸಿಎಂ ಆಗ್ತಾರಾ ಕೇಂದ್ರ ಜಲಶಕ್ತಿ ಸಚಿವ?

ಜೋಧ್ಪುರದಿಂದ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಮುಖ್ಯಮಂತ್ರಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ. 2014 ರಿಂದ ಎರಡು ಅವಧಿಗೆ ಲೋಕಸಭಾ ಸದಸ್ಯರಾಗಿ ಜೋಧ್ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹೈಕಮಾಂಡ್ ವರಿಷ್ಠರ ಸೂಚನೆ ಮೇರೆಗೆ ವಿಧಾನಸಭೆಗೆ ಸ್ಪರ್ಧಿಸಿದ್ದರು. ಇದೀಗ ಇವರನ್ನೇ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಗೆ ನೇಮಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಸೋತ ವಿಪಕ್ಷ ನಾಯಕನಿಗೆ ಸಿಗುತ್ತಾ ಸಿಎಂ ಪಟ್ಟ!

ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಕೂಡ ಚುನಾವಣೆಗೆ ಹೋಗುವ ಮುನ್ನ ಸಂಭಾವ್ಯ ಸಿಎಂ ಅಭ್ಯರ್ಥಿ ಎಂದು ಪರಿಗಣಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಬುಡಾನಿಯಾ ವಿರುದ್ಧ 10,345 ಮತಗಳ ಅಂತರದಿಂದ ಸೋತಿದ್ದಾರೆ. ಸೋತಿದ್ದರೂ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳಿವೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ:
ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನರಾಗಿದ್ದರಿಂದ ಕರಣ್ಪುರ ಕ್ಷೇತ್ರಕ್ಕೆ ಮತದಾನ ದಿನಾಂಕವನ್ನು ಮುಂದೂಡಲಾಗಿದೆ. ಬಹುಮತಕ್ಕೆ 100 ಸ್ಥಾನಗಳು ಬೇಕಿದ್ದು, ಕಳೆದ ಭಾನುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...