Homeಚಳವಳಿಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ನಾವು ಅನುದಾನಕ್ಕೆ ಒಳಪಡುತ್ತೇವೆ, ಸರ್ಕಾರಿ ಸಂಬಳ ಪಡೆಯುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿರುವವರ ಪರಿಸ್ಥಿತಿ ಇಕ್ಕಟ್ಟಿಗೆ ಸಿಲುಕಿದೆ.

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವ ಧನ ನೀಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ ಕಾಲೇಜುಗಳ ಅನುದಾನಕ್ಕಾಗಿ ಕಾಯುತ್ತಿರುವ ಖಾಸಗಿ ಪದವಿ ಕಾಲೇಜುಗಳಲ್ಲಿ ದುಡಿಯುತ್ತಿರುವ ನೂರಾರು ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಸ್ಥೆಯಿಂದಲೂ ಸಂಬಳ ದೊರೆಯುತ್ತಿಲ್ಲ. ಸರ್ಕಾರದ ಸಹಾಯವು ಸಿಗುತ್ತಿಲ್ಲ. ಅತಿಥಿಯೂ ಅಲ್ಲದ, ಅರೆಕಾಲಿಕರೂ ಅಲ್ಲದ ಈ ಉಪನ್ಯಾಸಕರು ಜೀವನ ಸಾಗಿಸುವುದು ದುಸ್ತರವಾಗಿದೆ.

ರಾಜ್ಯದಲ್ಲಿ ಒಂದು ನೂರಕ್ಕೂ ಹೆಚ್ಚು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಗ್ರ್ಯಾಂಟ್ ಗೆ ಅರ್ಜಿ ಸಲ್ಲಿಸಿದ್ದು ಸರ್ಕಾರದ ಅನುದಾನಕ್ಕಾಗಿ ಕಾಯುತ್ತಿವೆ. ಈ ಪೈಕಿ 85 ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರ ನಮಗೆ ಗ್ರ್ಯಾಂಟ್ ನೀಡಬೇಕೆಂದು ಹಲವು ವರ್ಷಗಳಿಂದ ಒತ್ತಡ ಹೇರುತ್ತಲೇ ಬರುತ್ತಿವೆ. ಆದರೆ ಸರ್ಕಾರ ಮಾತ್ರ ಗ್ರ್ಯಾಂಟ್ ನೀಡಲು ಹಿಂದೇಟು ಹಾಕುತ್ತಿದೆ. ಆದ್ದರಿಂದ ರಾಜ್ಯದ 85 ಪದವಿ ಕಾಲೇಜುಗಳ 680 ಉಪನ್ಯಾಸಕರ ಬದುಕು ಅತಂತ್ರವಾಗಿದೆ.

ಪ್ರತಿಯೊಂದು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ 8 ಮಂದಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ ಒಟ್ಟಾರೆ ರಾಜ್ಯದಲ್ಲಿ 680ಕ್ಕೂ ಹೆಚ್ಚು ಮಂದಿ ಉಪನ್ಯಾಸಕರು ಕಳೆದ 20-25 ವರ್ಷಗಳಿಂದಲೂ ಕಡಿಮೆ ವೇತನ ಪಡೆದುಕೊಂಡು ದುಡಿಯುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಸರ್ಕಾರ ನಿಗದಿಪಡಿಸಿದ ವಯಸ್ಸು ಮೀರಿದೆ. ಖಾಸಗಿ ಪದವಿ ಕಾಲೇಜು ಸರ್ಕಾರದ ಅನುದಾನಕ್ಕೆ ಒಳಪಡುತ್ತದೆ. ನಾವು ಸರ್ಕಾರದಿಂದ ವೇತನ ಪಡೆಯುತ್ತೇವೆ ಕುಟುಂಬಕ್ಕೆ ಭದ್ರತೆ ದೊರೆಯುತ್ತದೆ, ನಾವು ಅನುದಾನಕ್ಕೆ ಒಳಪಡುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಆದರೆ ಅತ್ತ ಹಣವೂ ಹಿಂಪಡೆಯಲು ಆಗುತ್ತಿಲ್ಲ. ಇತ್ತ ಸರ್ಕಾರದ ಅನುದಾನಕ್ಕೆ ಒಳಪಟ್ಟು ವೇತನವನ್ನೂ ಪಡೆಯಲು ಆಗುತ್ತಿಲ್ಲ ಎಂಬ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕೋವಿಡ್ ಅವಧಿಯ ಗೌರವಧನ ಬಿಡುಗಡೆಗೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಐದು ತಿಂಗಳ ಗೌರವಧನ ಸಿಗುವ ಸಣ್ಣ ಭರವಸೆ ಸಿಕ್ಕಿದೆ. ಅತಿಥಿ ಉಪನ್ಯಾಸಕರು ಸಂಘಟನೆಗೊಂಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸುವ ಶಕ್ತಿ ಹೊಂದಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನ ನಡೆಯುವುದಿಲ್ಲ ಎಂಬ ಅನಿವಾರ್ಯತೆ ಸೃಷ್ಟಿ ಆಗುತ್ತದೆ. ಆದರೆ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿರುವ ಆಡಳಿತ ಮಂಡಳಿಗಳ ನಡೆಸುತ್ತಿರುವ ಕಾಲೇಜುಗಳಲ್ಲಿ ದುಡಿಯುತ್ತಿರುವ ಉಪನ್ಯಾಸಕರು ಇಂತಹ ಯಾವುದೇ ಒಗ್ಗಟ್ಟು ಪ್ರದರ್ಶಿಸುವ ಅವಕಾಶ ಇಲ್ಲ. ಪ್ರತಿಭಟನೆ ನಡೆಸಿದರೆ ಎಲ್ಲಿ ಇರುವ ಕೆಲಸವೂ ಹೋಗುತ್ತದೆ. ಕೊಟ್ಟ ಹಣವೂ ಬರುವುದಿಲ್ಲ ಎಂಬ ತ್ರಿಶಂಕು ಸ್ಥಿತಿ ಅವರನ್ನು ಕಾಡತೊಡಗಿದೆ.

ಅನುದಾನದ ನಿರೀಕ್ಷೆಯಲ್ಲಿರುವ ಉಪನ್ಯಾಸಕರು ಯಾರ ಜೊತೆಯೂ ಬಾಯಿ ಬಿಡುವಂತಿಲ್ಲ. ಮ್ಯಾನೇಜ್‌ಮೆಂಟ್ ಅವರನ್ನು ಕೇಳಿದರೆ ನಿಮ್ಮ ಸೇವೆ ಅಗತ್ಯವಿಲ್ಲ. ಬೇರೆಯವರು ಬಂದು ಕೆಲಸ ಮಾಡುತ್ತಾರೆ’ ಎಂದು ಹೇಳುತ್ತಿರುವುದರಿಂದ ಸಂಕಟವನ್ನು ನುಂಗಿಕೊಂಡೇ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಪರಿಸ್ಥಿತಿ ಇದೆ. ನಮಗೆ ಸರ್ಕಾರವೂ ಹಣ ಕೊಡುವುದಿಲ್ಲ. ಆಡಳಿತ ಮಂಡಳಿಯೂ ಹಣ ನೀಡುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಹೇಗೆ? ಬಸ್ ಚಾರ್ಜ್ ಕೊಡಲೂ ದುಡ್ಡು ಇರುವುದಿಲ್ಲ. ಸಾಲ ಮಾಡಿ ಮತ್ತಷ್ಟು ಮೇಲೆ ಎಳೆದುಕೊಳ್ಳುವಂತೆ ಆಗಿದೆ. ಮನೆ ಬಾಡಿಗೆ, ಕರೆಂಟ್ ಬಿಲ್, ಮಕ್ಕಳ ಬಟ್ಟೆ, ವಿದ್ಯಾಭ್ಯಾಸ ಯಾವುದನ್ನೂ ಸರಿಯಾಗಿ ನಿಭಾಯಿಸಲು ಆಗುತ್ತಿಲ್ಲ ಎಂದು ಉಪನ್ಯಾಸಕ ಮಲ್ಲಯ್ಯ ನೋವು ತೋಡಿಕೊಂಡರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕ ಸುರೇಶ್, ನಾನು ಕಳೆದ 25 ವರ್ಷಗಳಿಂದ ಖಾಸಗಿ ಪದವಿ ಕಾಲೇಜೊಂದರಲ್ಲಿ ಪಾಠ ಮಾಡಿಕೊಂಡು ಬಂದಿದ್ದೇನೆ. ಕೆಲಸ ಪರ್ಮಿನೆಂಟ್ ಆಗುತ್ತದೆ ಎಂಬ ಕಾರಣಕ್ಕೆ 5 ಲಕ್ಷ ರೂಪಾಯಿ ಆಡಳಿತ ಮಂಡಳಿಗೆ ಕೊಟ್ಟಿದ್ದೇನೆ. ನನಗೆ 5 ಸಾವಿರ ಗೌರವಧನ ನೀಡುತ್ತಿದ್ದರು. ಕೊರೊನಾ ಬಂದ ಮೇಲೆ ನಾವು ಅಕ್ಷರಶಃ ಬೀದಿಗೆ ಬಿದ್ದಿದ್ದೇವೆ. ಬಿಟ್ಟಿ ದುಡಿಯೋಕೆ ಯಾಕ್ ಹೋಗ್ತೀಯ ಅಂತ ಹೆಂಡತಿ ಜೊತೆ ನಿತ್ಯವೂ ಜಗಳ. ಬದುಕು ಕಟ್ಟಿಕೊಳ್ಳಲು ಕಷ್ಟವಾಗಿದೆ. ಮಕ್ಕಳನ್ನು ಓದಿಸಲಾಗುತ್ತಿಲ್ಲ. ನನ್ನ ವಯಸ್ಸು ಮೀರಿ ಹೋಯಿತು. ನಾನು ಇನ್ನೆಲ್ಲಿಗೂ ಹೋಗಿ ಪಾಠ ಮಾಡಲು ಅವಕಾಶವಿಲ್ಲ. ನಾನು ಇರುವಲ್ಲೇ ಇರಬೇಕಾಗಿದೆ. ನಾನಿರುವ ಸಂಸ್ಥೆಯಲ್ಲು ಕಳೆದ ಏಳೆಂಟು ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಕಂಬನಿ ಮಿಡಿದರು.

ಸರ್ಕಾರದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ಭ್ರಮನಿರಸನಗೊಳ್ಳುವಂತೆ ಮಾಡಿದೆ. ಸಮಾಜದಲ್ಲಿ ಗುರುಗಳಿಗೆ ಗೌರವ ಸ್ಥಾನ ಇದೆಯಾದರೂ ಘನತೆಯ ಬದುಕು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಂದ ಸಾವಿರಾರು ರೂಪಾಯಿ ಡೊನೇಷನ್ ಪಡೆಯುವ ಈ ಕಾಲೇಜುಗಳು ಉಪನ್ಯಾಸಕರಿಗೆ ವೇತನ ನೀಡಲು, ಕಾಲೇಜು ನಿರ್ವಹಣೆ ಮಾಡಲು ಪರದಾಡುತ್ತಿವೆ. ಬಹುತೇಕ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಸರ್ಕಾರದ ಅನುದಾನ ಬೇಡ ಎನ್ನುತ್ತಿವೆ. ಅಂತಹ ಕಾಲೇಜುಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರಿಗೆ ವೇತನ ನೀಡಲಾಗುತ್ತಿದೆ. ನಾವು ಮಾತ್ರ ಯಾರಿಗೂ ಬೇಡವಾದ ಕೂಸುಗಳಾಗಿದ್ದೇವೆ ಎಂಬುದು ಅನುದಾನ ನಿರೀಕ್ಷೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಅಳಲು.

ಸರ್ಕಾರ ಕೂಡಲೇ ಈ ಉಪನ್ಯಾಸಕರ ನೆರವಿಗೂ ಬರಬೇಕು. ನಮಗೆ ಅತಿಥಿ ಉಪನ್ಯಾಸಕರಿಗೆ ನೀಡುವಂತೆ ಗೌರವ ಧನವನ್ನು ನೀಡಬೇಕೆಂದು ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. it is drastic problem of our society as well as govt nobady will take care of it u raise this quation its appriciable .how many’s life went off by thease principle policy of many govt …ok take dicision to not vote anybody up to life long

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...