Homeಚಳವಳಿಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ನಾವು ಅನುದಾನಕ್ಕೆ ಒಳಪಡುತ್ತೇವೆ, ಸರ್ಕಾರಿ ಸಂಬಳ ಪಡೆಯುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿರುವವರ ಪರಿಸ್ಥಿತಿ ಇಕ್ಕಟ್ಟಿಗೆ ಸಿಲುಕಿದೆ.

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವ ಧನ ನೀಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ ಕಾಲೇಜುಗಳ ಅನುದಾನಕ್ಕಾಗಿ ಕಾಯುತ್ತಿರುವ ಖಾಸಗಿ ಪದವಿ ಕಾಲೇಜುಗಳಲ್ಲಿ ದುಡಿಯುತ್ತಿರುವ ನೂರಾರು ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಸ್ಥೆಯಿಂದಲೂ ಸಂಬಳ ದೊರೆಯುತ್ತಿಲ್ಲ. ಸರ್ಕಾರದ ಸಹಾಯವು ಸಿಗುತ್ತಿಲ್ಲ. ಅತಿಥಿಯೂ ಅಲ್ಲದ, ಅರೆಕಾಲಿಕರೂ ಅಲ್ಲದ ಈ ಉಪನ್ಯಾಸಕರು ಜೀವನ ಸಾಗಿಸುವುದು ದುಸ್ತರವಾಗಿದೆ.

ರಾಜ್ಯದಲ್ಲಿ ಒಂದು ನೂರಕ್ಕೂ ಹೆಚ್ಚು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಗ್ರ್ಯಾಂಟ್ ಗೆ ಅರ್ಜಿ ಸಲ್ಲಿಸಿದ್ದು ಸರ್ಕಾರದ ಅನುದಾನಕ್ಕಾಗಿ ಕಾಯುತ್ತಿವೆ. ಈ ಪೈಕಿ 85 ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರ ನಮಗೆ ಗ್ರ್ಯಾಂಟ್ ನೀಡಬೇಕೆಂದು ಹಲವು ವರ್ಷಗಳಿಂದ ಒತ್ತಡ ಹೇರುತ್ತಲೇ ಬರುತ್ತಿವೆ. ಆದರೆ ಸರ್ಕಾರ ಮಾತ್ರ ಗ್ರ್ಯಾಂಟ್ ನೀಡಲು ಹಿಂದೇಟು ಹಾಕುತ್ತಿದೆ. ಆದ್ದರಿಂದ ರಾಜ್ಯದ 85 ಪದವಿ ಕಾಲೇಜುಗಳ 680 ಉಪನ್ಯಾಸಕರ ಬದುಕು ಅತಂತ್ರವಾಗಿದೆ.

ಪ್ರತಿಯೊಂದು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ 8 ಮಂದಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ ಒಟ್ಟಾರೆ ರಾಜ್ಯದಲ್ಲಿ 680ಕ್ಕೂ ಹೆಚ್ಚು ಮಂದಿ ಉಪನ್ಯಾಸಕರು ಕಳೆದ 20-25 ವರ್ಷಗಳಿಂದಲೂ ಕಡಿಮೆ ವೇತನ ಪಡೆದುಕೊಂಡು ದುಡಿಯುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಸರ್ಕಾರ ನಿಗದಿಪಡಿಸಿದ ವಯಸ್ಸು ಮೀರಿದೆ. ಖಾಸಗಿ ಪದವಿ ಕಾಲೇಜು ಸರ್ಕಾರದ ಅನುದಾನಕ್ಕೆ ಒಳಪಡುತ್ತದೆ. ನಾವು ಸರ್ಕಾರದಿಂದ ವೇತನ ಪಡೆಯುತ್ತೇವೆ ಕುಟುಂಬಕ್ಕೆ ಭದ್ರತೆ ದೊರೆಯುತ್ತದೆ, ನಾವು ಅನುದಾನಕ್ಕೆ ಒಳಪಡುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಆದರೆ ಅತ್ತ ಹಣವೂ ಹಿಂಪಡೆಯಲು ಆಗುತ್ತಿಲ್ಲ. ಇತ್ತ ಸರ್ಕಾರದ ಅನುದಾನಕ್ಕೆ ಒಳಪಟ್ಟು ವೇತನವನ್ನೂ ಪಡೆಯಲು ಆಗುತ್ತಿಲ್ಲ ಎಂಬ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕೋವಿಡ್ ಅವಧಿಯ ಗೌರವಧನ ಬಿಡುಗಡೆಗೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಐದು ತಿಂಗಳ ಗೌರವಧನ ಸಿಗುವ ಸಣ್ಣ ಭರವಸೆ ಸಿಕ್ಕಿದೆ. ಅತಿಥಿ ಉಪನ್ಯಾಸಕರು ಸಂಘಟನೆಗೊಂಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸುವ ಶಕ್ತಿ ಹೊಂದಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನ ನಡೆಯುವುದಿಲ್ಲ ಎಂಬ ಅನಿವಾರ್ಯತೆ ಸೃಷ್ಟಿ ಆಗುತ್ತದೆ. ಆದರೆ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿರುವ ಆಡಳಿತ ಮಂಡಳಿಗಳ ನಡೆಸುತ್ತಿರುವ ಕಾಲೇಜುಗಳಲ್ಲಿ ದುಡಿಯುತ್ತಿರುವ ಉಪನ್ಯಾಸಕರು ಇಂತಹ ಯಾವುದೇ ಒಗ್ಗಟ್ಟು ಪ್ರದರ್ಶಿಸುವ ಅವಕಾಶ ಇಲ್ಲ. ಪ್ರತಿಭಟನೆ ನಡೆಸಿದರೆ ಎಲ್ಲಿ ಇರುವ ಕೆಲಸವೂ ಹೋಗುತ್ತದೆ. ಕೊಟ್ಟ ಹಣವೂ ಬರುವುದಿಲ್ಲ ಎಂಬ ತ್ರಿಶಂಕು ಸ್ಥಿತಿ ಅವರನ್ನು ಕಾಡತೊಡಗಿದೆ.

ಅನುದಾನದ ನಿರೀಕ್ಷೆಯಲ್ಲಿರುವ ಉಪನ್ಯಾಸಕರು ಯಾರ ಜೊತೆಯೂ ಬಾಯಿ ಬಿಡುವಂತಿಲ್ಲ. ಮ್ಯಾನೇಜ್‌ಮೆಂಟ್ ಅವರನ್ನು ಕೇಳಿದರೆ ನಿಮ್ಮ ಸೇವೆ ಅಗತ್ಯವಿಲ್ಲ. ಬೇರೆಯವರು ಬಂದು ಕೆಲಸ ಮಾಡುತ್ತಾರೆ’ ಎಂದು ಹೇಳುತ್ತಿರುವುದರಿಂದ ಸಂಕಟವನ್ನು ನುಂಗಿಕೊಂಡೇ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಪರಿಸ್ಥಿತಿ ಇದೆ. ನಮಗೆ ಸರ್ಕಾರವೂ ಹಣ ಕೊಡುವುದಿಲ್ಲ. ಆಡಳಿತ ಮಂಡಳಿಯೂ ಹಣ ನೀಡುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಹೇಗೆ? ಬಸ್ ಚಾರ್ಜ್ ಕೊಡಲೂ ದುಡ್ಡು ಇರುವುದಿಲ್ಲ. ಸಾಲ ಮಾಡಿ ಮತ್ತಷ್ಟು ಮೇಲೆ ಎಳೆದುಕೊಳ್ಳುವಂತೆ ಆಗಿದೆ. ಮನೆ ಬಾಡಿಗೆ, ಕರೆಂಟ್ ಬಿಲ್, ಮಕ್ಕಳ ಬಟ್ಟೆ, ವಿದ್ಯಾಭ್ಯಾಸ ಯಾವುದನ್ನೂ ಸರಿಯಾಗಿ ನಿಭಾಯಿಸಲು ಆಗುತ್ತಿಲ್ಲ ಎಂದು ಉಪನ್ಯಾಸಕ ಮಲ್ಲಯ್ಯ ನೋವು ತೋಡಿಕೊಂಡರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕ ಸುರೇಶ್, ನಾನು ಕಳೆದ 25 ವರ್ಷಗಳಿಂದ ಖಾಸಗಿ ಪದವಿ ಕಾಲೇಜೊಂದರಲ್ಲಿ ಪಾಠ ಮಾಡಿಕೊಂಡು ಬಂದಿದ್ದೇನೆ. ಕೆಲಸ ಪರ್ಮಿನೆಂಟ್ ಆಗುತ್ತದೆ ಎಂಬ ಕಾರಣಕ್ಕೆ 5 ಲಕ್ಷ ರೂಪಾಯಿ ಆಡಳಿತ ಮಂಡಳಿಗೆ ಕೊಟ್ಟಿದ್ದೇನೆ. ನನಗೆ 5 ಸಾವಿರ ಗೌರವಧನ ನೀಡುತ್ತಿದ್ದರು. ಕೊರೊನಾ ಬಂದ ಮೇಲೆ ನಾವು ಅಕ್ಷರಶಃ ಬೀದಿಗೆ ಬಿದ್ದಿದ್ದೇವೆ. ಬಿಟ್ಟಿ ದುಡಿಯೋಕೆ ಯಾಕ್ ಹೋಗ್ತೀಯ ಅಂತ ಹೆಂಡತಿ ಜೊತೆ ನಿತ್ಯವೂ ಜಗಳ. ಬದುಕು ಕಟ್ಟಿಕೊಳ್ಳಲು ಕಷ್ಟವಾಗಿದೆ. ಮಕ್ಕಳನ್ನು ಓದಿಸಲಾಗುತ್ತಿಲ್ಲ. ನನ್ನ ವಯಸ್ಸು ಮೀರಿ ಹೋಯಿತು. ನಾನು ಇನ್ನೆಲ್ಲಿಗೂ ಹೋಗಿ ಪಾಠ ಮಾಡಲು ಅವಕಾಶವಿಲ್ಲ. ನಾನು ಇರುವಲ್ಲೇ ಇರಬೇಕಾಗಿದೆ. ನಾನಿರುವ ಸಂಸ್ಥೆಯಲ್ಲು ಕಳೆದ ಏಳೆಂಟು ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಕಂಬನಿ ಮಿಡಿದರು.

ಸರ್ಕಾರದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ಭ್ರಮನಿರಸನಗೊಳ್ಳುವಂತೆ ಮಾಡಿದೆ. ಸಮಾಜದಲ್ಲಿ ಗುರುಗಳಿಗೆ ಗೌರವ ಸ್ಥಾನ ಇದೆಯಾದರೂ ಘನತೆಯ ಬದುಕು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಂದ ಸಾವಿರಾರು ರೂಪಾಯಿ ಡೊನೇಷನ್ ಪಡೆಯುವ ಈ ಕಾಲೇಜುಗಳು ಉಪನ್ಯಾಸಕರಿಗೆ ವೇತನ ನೀಡಲು, ಕಾಲೇಜು ನಿರ್ವಹಣೆ ಮಾಡಲು ಪರದಾಡುತ್ತಿವೆ. ಬಹುತೇಕ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಸರ್ಕಾರದ ಅನುದಾನ ಬೇಡ ಎನ್ನುತ್ತಿವೆ. ಅಂತಹ ಕಾಲೇಜುಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರಿಗೆ ವೇತನ ನೀಡಲಾಗುತ್ತಿದೆ. ನಾವು ಮಾತ್ರ ಯಾರಿಗೂ ಬೇಡವಾದ ಕೂಸುಗಳಾಗಿದ್ದೇವೆ ಎಂಬುದು ಅನುದಾನ ನಿರೀಕ್ಷೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಅಳಲು.

ಸರ್ಕಾರ ಕೂಡಲೇ ಈ ಉಪನ್ಯಾಸಕರ ನೆರವಿಗೂ ಬರಬೇಕು. ನಮಗೆ ಅತಿಥಿ ಉಪನ್ಯಾಸಕರಿಗೆ ನೀಡುವಂತೆ ಗೌರವ ಧನವನ್ನು ನೀಡಬೇಕೆಂದು ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. it is drastic problem of our society as well as govt nobady will take care of it u raise this quation its appriciable .how many’s life went off by thease principle policy of many govt …ok take dicision to not vote anybody up to life long

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....