Homeರಾಜಕೀಯಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

- Advertisement -
- Advertisement -

ಇತಿಹಾಸಕಾರರು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದು, ಇಂತಹ ಪ್ರಯತ್ನ ಮಾಡುವವರಿಗೆ ತಮ್ಮ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ, ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಕೇಳಿದ್ದೇನೆ. ಬಹುಶಃ ಇದು ನಿಜವಿರಬಹುದು, ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ದೆಹಲಿಯಲ್ಲಿ ನಡೆದ ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

17ನೇ ಶತಮಾನದ ಅಹೋಮ್ ಸಾಮ್ಯಾಜ್ಯದ ಸೇನಾಪತಿ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಅವರು ಮಾತನಾಡುತ್ತಿದ್ದರು. ಲಚಿತ್ ಬರ್ಫುಕನ್‌ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೈಸೂರು ರಾಕೆಟ್‌ಗಳ ಉತ್ಖನನ; ಆಸಕ್ತಿ ಕೆರಳಿಸುವ ಇತಿಹಾಸ

“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಈ ಯಾರು ತಡೆಯುತ್ತಾರೆ ಎಂದು ನಾನು ನಿಮ್ಮನ್ನು ಕೇಳುತ್ತಿದ್ದೇನೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

“ಇತಿಹಾಸವು ಸರಿಯಲ್ಲ ಎಂಬ ಈ ನಿರೂಪಣೆಯನ್ನು ಬಿಟ್ಟುಬಿಡಿ. ಆದರೆ ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ ಎಂದು ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ಬರೆದರೆ ಸಾಕು, ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲಾಗುತ್ತದೆ ಎಂಬ ಕಲ್ಪನೆ ಕೂಡಾ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಒಕ್ಕೂಟ ಸರ್ಕಾರವು ಬೆಂಬಲ ನೀಡಲಿದೆ ಎಂದು ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸದ ಅವಜ್ಞೆ; ದೇಶ ವಿಭಜನೆಗೆ ಸಿಕ್ಕಸಿಕ್ಕವರ ಮೇಲೆ ಆರೋಪ ಹೊರಿಸುವ ಮುನ್ನ..

“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.

ಜನರಿಗೆ ಹೆಚ್ಚಿನ ಪ್ರಯೋಜನ ಆಗುವಂತೆ ಇತಿಹಾಸದ ಹಾದಿಯನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಮೊಘಲ್ ವಿಸ್ತರಣೆಯನ್ನು ತಡೆಯುವಲ್ಲಿ ಲಚಿತ್ ವಹಿಸಿದ ಪಾತ್ರವನ್ನು ಗುರುತಿಸಿದ ಅಮಿತ್‌ ಶಾ, “ಸರಿಘಾಟ್ ಯುದ್ಧದಲ್ಲಿ ಅವರ ಅನಾರೋಗ್ಯದ ಹೊರತಾಗಿಯೂ ಮೊಘಲರನ್ನು ಸೋಲಿಸಿದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನೋವಿಕಾರಿಯೊಬ್ಬನ ವಿರೂಪೀ ಹೇಳಿಕೆಯಿದು. ಮೊಗಲರು ಈ ದೇಶಕ್ಕೆ ಕೊಟ್ಟ ಅನುಪಮ ಕೊಡುಗೆಗಳ ಬಗ್ಗೆ ಇತಿಹಾಸದಲ್ಲಿ ದಾಖಲಿಸಲ್ಪಟ್ಟ ವಿಷಯಗಳೇನು ಎಂಬುದು ಈ ತಡಿಪಾರ್ ನರಹಂತಕ ಮೊದಲು ಕಂಡುಕೊಳ್ಳಲಿ. ಹಾಗೆಯೇ ಹಿಟ್ಲರ್ ಅಭಿಮಾನಿಗಳಾದ ಆರೆಸ್ಸಿಗರು ಸ್ವಾತಂತ್ರ್ಯ ಸಂಗ್ರಾಮಲ್ಲಿ ಬ್ರಿಟಿಷರ ಜೊತೆಗೂಡಿ ದೇಶಕ್ಕೆ ದ್ರೋಹ ಬಗೆದದ್ದು,ಸಾವರ್ಕರ್ ಬ್ರಿಟಿಷರ ಪಿಂಚಣಿಯಲ್ಲಿ ಬದುಕು ನಡೆಸಿದ ಇತಿಹಾಸ ಕೂಡಾ ಈ ದೇಶದ ಪ್ರತೀ ಪ್ರಜೆಗೂ ತಿಳಿಸುವಂತಾಗಲಿ.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...