Homeರಾಜಕೀಯಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

- Advertisement -
- Advertisement -

ಇತಿಹಾಸಕಾರರು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದು, ಇಂತಹ ಪ್ರಯತ್ನ ಮಾಡುವವರಿಗೆ ತಮ್ಮ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ, ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಕೇಳಿದ್ದೇನೆ. ಬಹುಶಃ ಇದು ನಿಜವಿರಬಹುದು, ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ದೆಹಲಿಯಲ್ಲಿ ನಡೆದ ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

17ನೇ ಶತಮಾನದ ಅಹೋಮ್ ಸಾಮ್ಯಾಜ್ಯದ ಸೇನಾಪತಿ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಅವರು ಮಾತನಾಡುತ್ತಿದ್ದರು. ಲಚಿತ್ ಬರ್ಫುಕನ್‌ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೈಸೂರು ರಾಕೆಟ್‌ಗಳ ಉತ್ಖನನ; ಆಸಕ್ತಿ ಕೆರಳಿಸುವ ಇತಿಹಾಸ

“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಈ ಯಾರು ತಡೆಯುತ್ತಾರೆ ಎಂದು ನಾನು ನಿಮ್ಮನ್ನು ಕೇಳುತ್ತಿದ್ದೇನೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

“ಇತಿಹಾಸವು ಸರಿಯಲ್ಲ ಎಂಬ ಈ ನಿರೂಪಣೆಯನ್ನು ಬಿಟ್ಟುಬಿಡಿ. ಆದರೆ ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ ಎಂದು ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ಬರೆದರೆ ಸಾಕು, ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲಾಗುತ್ತದೆ ಎಂಬ ಕಲ್ಪನೆ ಕೂಡಾ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಒಕ್ಕೂಟ ಸರ್ಕಾರವು ಬೆಂಬಲ ನೀಡಲಿದೆ ಎಂದು ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸದ ಅವಜ್ಞೆ; ದೇಶ ವಿಭಜನೆಗೆ ಸಿಕ್ಕಸಿಕ್ಕವರ ಮೇಲೆ ಆರೋಪ ಹೊರಿಸುವ ಮುನ್ನ..

“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.

ಜನರಿಗೆ ಹೆಚ್ಚಿನ ಪ್ರಯೋಜನ ಆಗುವಂತೆ ಇತಿಹಾಸದ ಹಾದಿಯನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಮೊಘಲ್ ವಿಸ್ತರಣೆಯನ್ನು ತಡೆಯುವಲ್ಲಿ ಲಚಿತ್ ವಹಿಸಿದ ಪಾತ್ರವನ್ನು ಗುರುತಿಸಿದ ಅಮಿತ್‌ ಶಾ, “ಸರಿಘಾಟ್ ಯುದ್ಧದಲ್ಲಿ ಅವರ ಅನಾರೋಗ್ಯದ ಹೊರತಾಗಿಯೂ ಮೊಘಲರನ್ನು ಸೋಲಿಸಿದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನೋವಿಕಾರಿಯೊಬ್ಬನ ವಿರೂಪೀ ಹೇಳಿಕೆಯಿದು. ಮೊಗಲರು ಈ ದೇಶಕ್ಕೆ ಕೊಟ್ಟ ಅನುಪಮ ಕೊಡುಗೆಗಳ ಬಗ್ಗೆ ಇತಿಹಾಸದಲ್ಲಿ ದಾಖಲಿಸಲ್ಪಟ್ಟ ವಿಷಯಗಳೇನು ಎಂಬುದು ಈ ತಡಿಪಾರ್ ನರಹಂತಕ ಮೊದಲು ಕಂಡುಕೊಳ್ಳಲಿ. ಹಾಗೆಯೇ ಹಿಟ್ಲರ್ ಅಭಿಮಾನಿಗಳಾದ ಆರೆಸ್ಸಿಗರು ಸ್ವಾತಂತ್ರ್ಯ ಸಂಗ್ರಾಮಲ್ಲಿ ಬ್ರಿಟಿಷರ ಜೊತೆಗೂಡಿ ದೇಶಕ್ಕೆ ದ್ರೋಹ ಬಗೆದದ್ದು,ಸಾವರ್ಕರ್ ಬ್ರಿಟಿಷರ ಪಿಂಚಣಿಯಲ್ಲಿ ಬದುಕು ನಡೆಸಿದ ಇತಿಹಾಸ ಕೂಡಾ ಈ ದೇಶದ ಪ್ರತೀ ಪ್ರಜೆಗೂ ತಿಳಿಸುವಂತಾಗಲಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...