Homeಮುಖಪುಟಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

- Advertisement -
- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಮಂಗಳವಾರ (ನ.11) ಮುಕ್ತಾಯಗೊಂಡಿದೆ. ಅತಿ ಹೆಚ್ಚು ಶೇಕಡ 69.76ರಷ್ಟು ಮತದಾನವಾಗಿದೆ.

ಒಟ್ಟು 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಮತ್ತೊಮ್ಮೆ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನ ಮುಕ್ತಾಯಗೊಂಡ ಬಳಿಕ ಅನೇಕ ಟಿವಿ ಮಾಧ್ಯಮಗಳು ಮತ್ತು ಇತರ ರಾಜಕೀಯ ವಿಶ್ಲೇಷಣಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯ (ಎಕ್ಸಿಟ್ ಪೋಲ್‌) ವರದಿಯನ್ನು ಪ್ರಕಟಿಸಿವೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪರವಾಗಿ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ದೈನಿಕ್ ಭಾಸ್ಕರ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 145 ರಿಂದ 160 ಸ್ಥಾನಗಳನ್ನು ಗೆಲ್ಲಲಿದೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಮಹಾಘಟಬಂಧನ್ (ಎಂಜಿಬಿ) 73 ರಿಂದ 91 ಸ್ಥಾನಗಳನ್ನು ಮತ್ತು ಇತರರು 5 ರಿಂದ 10 ಸ್ಥಾನಗಳನ್ನು ಗಳಿಸಲಿದ್ದಾರೆ.

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆಯು ಎನ್‌ಡಿಎ 133 ರಿಂದ 148 ಸ್ಥಾನಗಳನ್ನು, ಮಹಾಘಟಬಂಧನ್ 87 ರಿಂದ 102 ಸ್ಥಾನಗಳನ್ನು, ಜನ ಸುರಾಜ್ ಪಕ್ಷ (ಜೆಎಸ್‌ಪಿ) ಎರಡು ಅಥವಾ ಯಾವುದೇ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಇತರರು ಮೂರರಿಂದ ಆರು ಸ್ಥಾನಗಳನ್ನು ಪಡೆಯುತ್ತಾರೆ ಎಂದು ಅಂದಾಜಿಸಿದೆ.

ಮ್ಯಾಟ್ರಿಝ್ ಸಮೀಕ್ಷೆಯು ಎನ್‌ಡಿಎ 147 ರಿಂದ 167 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎ ಮೈತ್ರಿಕೂಟಕ್ಕೆ 133 ರಿಂದ 159 ಸ್ಥಾನಗಳು ಮತ್ತು ಮಹಾಘಟಬಂಧನ್‌ಗೆ 75 ರಿಂದ 101 ಸ್ಥಾನಗಳು ಮತ್ತು ಜೆಎಸ್‌ಪಿಗೆ ಐದು ಸ್ಥಾನಗಳು ಸಿಗಲಿವೆ ಎಂದಿದೆ.

ಚಾಣಕ್ಯ ಸ್ಟ್ರಾಟಜೀಸ್ ಎನ್‌ಡಿಎ 130ರಿಂದ 138 ಸ್ಥಾನಗಳನ್ನು ಮತ್ತು ಮಹಾಘಟಬಂದನ್ 100 ರಿಂದ 108 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಪಿ-ಮಾರ್ಕ್ ಎನ್‌ಡಿಎ 142 ರಿಂದ 162 ಸ್ಥಾನಗಳನ್ನು ಮಹಾಘಟಬಂದನ್ 80 ರಿಂದ 98 ಮತ್ತು ಜನ ಸುರಾಜ್ 1ರಿಂದ 4 ಸ್ಥಾನಗಳನ್ನು ಪಡೆಯಬಹುದು ಎಂದಿದೆ. ಜೆವಿಸಿ 135 ರಿಂದ150 ಸ್ಥಾನಗಳನ್ನು ಎನ್‌ಡಿಎ ಪಡೆಯಬಹುದು 88 ರಿಂದ 103 ಸ್ಥಾನಗಳು ಮಹಾಘಟಬಂದನ್ ಪಾಲಾಗಬಹುದು ಹಾಗೂ ಜನ ಸುರಾಜ್ ಕನಿಷ್ಠ 1 ಸ್ಥಾನವನ್ನು ಗಳಿಸಬಹುದು ಎಂದು ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಮಹಾಘಟಬಂಧನ್ (ಇಂಡಿಯಾ) ನಡುವೆ ಪ್ರಮುಖವಾಗಿ ಸ್ಪರ್ಧೆ ನಡೆದಿದೆ.

ಎನ್‌ಡಿಎಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಸಂಯುಕ್ತ), ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಒಳಗೊಂಡಿವೆ.

ಮಹಾಘಟಬಂಧನ್‌ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್, ವಿಕಾಸಶೀಲ ಇನ್ಸಾನ್ ಪಕ್ಷ, ಮೂರು ಎಡ ಪಕ್ಷಗಳಾದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ ) ಮತ್ತು ಹೊಸದಾಗಿ ರೂಪುಗೊಂಡ ಇಂಡಿಯನ್ ಇನ್‌ಕ್ಲೂಸಿವ್ ಪಕ್ಷಗಳನ್ನು ಒಳಗೊಂಡಿವೆ.

ಎರಡೂ ಪ್ರಮುಖ ಮೈತ್ರಿಕೂಟಗಳ ಜೊತೆ ಸೇರದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ.

ವಿರೋಧ ಪಕ್ಷಗಳು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಎನ್‌ಡಿಎ ಹೇಳಿದೆ.

2014 ರಿಂದ 2015 ರವರೆಗಿನ ಒಂಬತ್ತು ತಿಂಗಳ ಅವಧಿಯನ್ನು ಹೊರತುಪಡಿಸಿ, ನಿತೀಶ್ ಕುಮಾರ್ ಕಳೆದ 20 ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಮತ್ತು ಮಹಾಘಟಬಂಧನ್ ಶೇಕಡ 37.2ರಷ್ಟು ಒಂದೇ ರೀತಿ ಮತಗಳನ್ನು ಗಳಿಸಿದ್ದವು. ಆದಾಗ್ಯೂ, 243 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದು ಎನ್‌ಡಿಎ ಅಲ್ಪ ಬಹುಮತದೊಂದಿಗೆ ಬಿಹಾರದಲ್ಲಿ ಅಧಿಕಾರಕ್ಕೆ ಮರಳಿತ್ತು. ವಿರೋಧ ಪಕ್ಷಗಳು 110 ಸ್ಥಾನಗಳನ್ನು ಪಡೆದಿತ್ತು.

ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಯನ್ನು ಸೋತಿತ್ತು.

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...