Homeಮುಖಪುಟಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

- Advertisement -
- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಮಂಗಳವಾರ (ನ.11) ಮುಕ್ತಾಯಗೊಂಡಿದೆ. ಅತಿ ಹೆಚ್ಚು ಶೇಕಡ 69.76ರಷ್ಟು ಮತದಾನವಾಗಿದೆ.

ಒಟ್ಟು 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಮತ್ತೊಮ್ಮೆ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನ ಮುಕ್ತಾಯಗೊಂಡ ಬಳಿಕ ಅನೇಕ ಟಿವಿ ಮಾಧ್ಯಮಗಳು ಮತ್ತು ಇತರ ರಾಜಕೀಯ ವಿಶ್ಲೇಷಣಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯ (ಎಕ್ಸಿಟ್ ಪೋಲ್‌) ವರದಿಯನ್ನು ಪ್ರಕಟಿಸಿವೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪರವಾಗಿ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ದೈನಿಕ್ ಭಾಸ್ಕರ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 145 ರಿಂದ 160 ಸ್ಥಾನಗಳನ್ನು ಗೆಲ್ಲಲಿದೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಮಹಾಘಟಬಂಧನ್ (ಎಂಜಿಬಿ) 73 ರಿಂದ 91 ಸ್ಥಾನಗಳನ್ನು ಮತ್ತು ಇತರರು 5 ರಿಂದ 10 ಸ್ಥಾನಗಳನ್ನು ಗಳಿಸಲಿದ್ದಾರೆ.

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆಯು ಎನ್‌ಡಿಎ 133 ರಿಂದ 148 ಸ್ಥಾನಗಳನ್ನು, ಮಹಾಘಟಬಂಧನ್ 87 ರಿಂದ 102 ಸ್ಥಾನಗಳನ್ನು, ಜನ ಸುರಾಜ್ ಪಕ್ಷ (ಜೆಎಸ್‌ಪಿ) ಎರಡು ಅಥವಾ ಯಾವುದೇ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಇತರರು ಮೂರರಿಂದ ಆರು ಸ್ಥಾನಗಳನ್ನು ಪಡೆಯುತ್ತಾರೆ ಎಂದು ಅಂದಾಜಿಸಿದೆ.

ಮ್ಯಾಟ್ರಿಝ್ ಸಮೀಕ್ಷೆಯು ಎನ್‌ಡಿಎ 147 ರಿಂದ 167 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎ ಮೈತ್ರಿಕೂಟಕ್ಕೆ 133 ರಿಂದ 159 ಸ್ಥಾನಗಳು ಮತ್ತು ಮಹಾಘಟಬಂಧನ್‌ಗೆ 75 ರಿಂದ 101 ಸ್ಥಾನಗಳು ಮತ್ತು ಜೆಎಸ್‌ಪಿಗೆ ಐದು ಸ್ಥಾನಗಳು ಸಿಗಲಿವೆ ಎಂದಿದೆ.

ಚಾಣಕ್ಯ ಸ್ಟ್ರಾಟಜೀಸ್ ಎನ್‌ಡಿಎ 130ರಿಂದ 138 ಸ್ಥಾನಗಳನ್ನು ಮತ್ತು ಮಹಾಘಟಬಂದನ್ 100 ರಿಂದ 108 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಪಿ-ಮಾರ್ಕ್ ಎನ್‌ಡಿಎ 142 ರಿಂದ 162 ಸ್ಥಾನಗಳನ್ನು ಮಹಾಘಟಬಂದನ್ 80 ರಿಂದ 98 ಮತ್ತು ಜನ ಸುರಾಜ್ 1ರಿಂದ 4 ಸ್ಥಾನಗಳನ್ನು ಪಡೆಯಬಹುದು ಎಂದಿದೆ. ಜೆವಿಸಿ 135 ರಿಂದ150 ಸ್ಥಾನಗಳನ್ನು ಎನ್‌ಡಿಎ ಪಡೆಯಬಹುದು 88 ರಿಂದ 103 ಸ್ಥಾನಗಳು ಮಹಾಘಟಬಂದನ್ ಪಾಲಾಗಬಹುದು ಹಾಗೂ ಜನ ಸುರಾಜ್ ಕನಿಷ್ಠ 1 ಸ್ಥಾನವನ್ನು ಗಳಿಸಬಹುದು ಎಂದು ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಮಹಾಘಟಬಂಧನ್ (ಇಂಡಿಯಾ) ನಡುವೆ ಪ್ರಮುಖವಾಗಿ ಸ್ಪರ್ಧೆ ನಡೆದಿದೆ.

ಎನ್‌ಡಿಎಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಸಂಯುಕ್ತ), ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಒಳಗೊಂಡಿವೆ.

ಮಹಾಘಟಬಂಧನ್‌ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್, ವಿಕಾಸಶೀಲ ಇನ್ಸಾನ್ ಪಕ್ಷ, ಮೂರು ಎಡ ಪಕ್ಷಗಳಾದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ ) ಮತ್ತು ಹೊಸದಾಗಿ ರೂಪುಗೊಂಡ ಇಂಡಿಯನ್ ಇನ್‌ಕ್ಲೂಸಿವ್ ಪಕ್ಷಗಳನ್ನು ಒಳಗೊಂಡಿವೆ.

ಎರಡೂ ಪ್ರಮುಖ ಮೈತ್ರಿಕೂಟಗಳ ಜೊತೆ ಸೇರದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ.

ವಿರೋಧ ಪಕ್ಷಗಳು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಎನ್‌ಡಿಎ ಹೇಳಿದೆ.

2014 ರಿಂದ 2015 ರವರೆಗಿನ ಒಂಬತ್ತು ತಿಂಗಳ ಅವಧಿಯನ್ನು ಹೊರತುಪಡಿಸಿ, ನಿತೀಶ್ ಕುಮಾರ್ ಕಳೆದ 20 ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಮತ್ತು ಮಹಾಘಟಬಂಧನ್ ಶೇಕಡ 37.2ರಷ್ಟು ಒಂದೇ ರೀತಿ ಮತಗಳನ್ನು ಗಳಿಸಿದ್ದವು. ಆದಾಗ್ಯೂ, 243 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದು ಎನ್‌ಡಿಎ ಅಲ್ಪ ಬಹುಮತದೊಂದಿಗೆ ಬಿಹಾರದಲ್ಲಿ ಅಧಿಕಾರಕ್ಕೆ ಮರಳಿತ್ತು. ವಿರೋಧ ಪಕ್ಷಗಳು 110 ಸ್ಥಾನಗಳನ್ನು ಪಡೆದಿತ್ತು.

ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಯನ್ನು ಸೋತಿತ್ತು.

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...