Homeಮುಖಪುಟಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

- Advertisement -
- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಮಂಗಳವಾರ (ನ.11) ಮುಕ್ತಾಯಗೊಂಡಿದೆ. ಅತಿ ಹೆಚ್ಚು ಶೇಕಡ 69.76ರಷ್ಟು ಮತದಾನವಾಗಿದೆ.

ಒಟ್ಟು 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಮತ್ತೊಮ್ಮೆ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನ ಮುಕ್ತಾಯಗೊಂಡ ಬಳಿಕ ಅನೇಕ ಟಿವಿ ಮಾಧ್ಯಮಗಳು ಮತ್ತು ಇತರ ರಾಜಕೀಯ ವಿಶ್ಲೇಷಣಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯ (ಎಕ್ಸಿಟ್ ಪೋಲ್‌) ವರದಿಯನ್ನು ಪ್ರಕಟಿಸಿವೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪರವಾಗಿ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ದೈನಿಕ್ ಭಾಸ್ಕರ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 145 ರಿಂದ 160 ಸ್ಥಾನಗಳನ್ನು ಗೆಲ್ಲಲಿದೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಮಹಾಘಟಬಂಧನ್ (ಎಂಜಿಬಿ) 73 ರಿಂದ 91 ಸ್ಥಾನಗಳನ್ನು ಮತ್ತು ಇತರರು 5 ರಿಂದ 10 ಸ್ಥಾನಗಳನ್ನು ಗಳಿಸಲಿದ್ದಾರೆ.

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆಯು ಎನ್‌ಡಿಎ 133 ರಿಂದ 148 ಸ್ಥಾನಗಳನ್ನು, ಮಹಾಘಟಬಂಧನ್ 87 ರಿಂದ 102 ಸ್ಥಾನಗಳನ್ನು, ಜನ ಸುರಾಜ್ ಪಕ್ಷ (ಜೆಎಸ್‌ಪಿ) ಎರಡು ಅಥವಾ ಯಾವುದೇ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಇತರರು ಮೂರರಿಂದ ಆರು ಸ್ಥಾನಗಳನ್ನು ಪಡೆಯುತ್ತಾರೆ ಎಂದು ಅಂದಾಜಿಸಿದೆ.

ಮ್ಯಾಟ್ರಿಝ್ ಸಮೀಕ್ಷೆಯು ಎನ್‌ಡಿಎ 147 ರಿಂದ 167 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎ ಮೈತ್ರಿಕೂಟಕ್ಕೆ 133 ರಿಂದ 159 ಸ್ಥಾನಗಳು ಮತ್ತು ಮಹಾಘಟಬಂಧನ್‌ಗೆ 75 ರಿಂದ 101 ಸ್ಥಾನಗಳು ಮತ್ತು ಜೆಎಸ್‌ಪಿಗೆ ಐದು ಸ್ಥಾನಗಳು ಸಿಗಲಿವೆ ಎಂದಿದೆ.

ಚಾಣಕ್ಯ ಸ್ಟ್ರಾಟಜೀಸ್ ಎನ್‌ಡಿಎ 130ರಿಂದ 138 ಸ್ಥಾನಗಳನ್ನು ಮತ್ತು ಮಹಾಘಟಬಂದನ್ 100 ರಿಂದ 108 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಪಿ-ಮಾರ್ಕ್ ಎನ್‌ಡಿಎ 142 ರಿಂದ 162 ಸ್ಥಾನಗಳನ್ನು ಮಹಾಘಟಬಂದನ್ 80 ರಿಂದ 98 ಮತ್ತು ಜನ ಸುರಾಜ್ 1ರಿಂದ 4 ಸ್ಥಾನಗಳನ್ನು ಪಡೆಯಬಹುದು ಎಂದಿದೆ. ಜೆವಿಸಿ 135 ರಿಂದ150 ಸ್ಥಾನಗಳನ್ನು ಎನ್‌ಡಿಎ ಪಡೆಯಬಹುದು 88 ರಿಂದ 103 ಸ್ಥಾನಗಳು ಮಹಾಘಟಬಂದನ್ ಪಾಲಾಗಬಹುದು ಹಾಗೂ ಜನ ಸುರಾಜ್ ಕನಿಷ್ಠ 1 ಸ್ಥಾನವನ್ನು ಗಳಿಸಬಹುದು ಎಂದು ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಮಹಾಘಟಬಂಧನ್ (ಇಂಡಿಯಾ) ನಡುವೆ ಪ್ರಮುಖವಾಗಿ ಸ್ಪರ್ಧೆ ನಡೆದಿದೆ.

ಎನ್‌ಡಿಎಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಸಂಯುಕ್ತ), ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಒಳಗೊಂಡಿವೆ.

ಮಹಾಘಟಬಂಧನ್‌ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್, ವಿಕಾಸಶೀಲ ಇನ್ಸಾನ್ ಪಕ್ಷ, ಮೂರು ಎಡ ಪಕ್ಷಗಳಾದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ ) ಮತ್ತು ಹೊಸದಾಗಿ ರೂಪುಗೊಂಡ ಇಂಡಿಯನ್ ಇನ್‌ಕ್ಲೂಸಿವ್ ಪಕ್ಷಗಳನ್ನು ಒಳಗೊಂಡಿವೆ.

ಎರಡೂ ಪ್ರಮುಖ ಮೈತ್ರಿಕೂಟಗಳ ಜೊತೆ ಸೇರದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ.

ವಿರೋಧ ಪಕ್ಷಗಳು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಎನ್‌ಡಿಎ ಹೇಳಿದೆ.

2014 ರಿಂದ 2015 ರವರೆಗಿನ ಒಂಬತ್ತು ತಿಂಗಳ ಅವಧಿಯನ್ನು ಹೊರತುಪಡಿಸಿ, ನಿತೀಶ್ ಕುಮಾರ್ ಕಳೆದ 20 ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಮತ್ತು ಮಹಾಘಟಬಂಧನ್ ಶೇಕಡ 37.2ರಷ್ಟು ಒಂದೇ ರೀತಿ ಮತಗಳನ್ನು ಗಳಿಸಿದ್ದವು. ಆದಾಗ್ಯೂ, 243 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದು ಎನ್‌ಡಿಎ ಅಲ್ಪ ಬಹುಮತದೊಂದಿಗೆ ಬಿಹಾರದಲ್ಲಿ ಅಧಿಕಾರಕ್ಕೆ ಮರಳಿತ್ತು. ವಿರೋಧ ಪಕ್ಷಗಳು 110 ಸ್ಥಾನಗಳನ್ನು ಪಡೆದಿತ್ತು.

ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಯನ್ನು ಸೋತಿತ್ತು.

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...