Homeಮುಖಪುಟಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

- Advertisement -
- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಮಂಗಳವಾರ (ನ.11) ಮುಕ್ತಾಯಗೊಂಡಿದೆ. ಅತಿ ಹೆಚ್ಚು ಶೇಕಡ 69.76ರಷ್ಟು ಮತದಾನವಾಗಿದೆ.

ಒಟ್ಟು 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಮತ್ತೊಮ್ಮೆ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನ ಮುಕ್ತಾಯಗೊಂಡ ಬಳಿಕ ಅನೇಕ ಟಿವಿ ಮಾಧ್ಯಮಗಳು ಮತ್ತು ಇತರ ರಾಜಕೀಯ ವಿಶ್ಲೇಷಣಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯ (ಎಕ್ಸಿಟ್ ಪೋಲ್‌) ವರದಿಯನ್ನು ಪ್ರಕಟಿಸಿವೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪರವಾಗಿ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ದೈನಿಕ್ ಭಾಸ್ಕರ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 145 ರಿಂದ 160 ಸ್ಥಾನಗಳನ್ನು ಗೆಲ್ಲಲಿದೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಮಹಾಘಟಬಂಧನ್ (ಎಂಜಿಬಿ) 73 ರಿಂದ 91 ಸ್ಥಾನಗಳನ್ನು ಮತ್ತು ಇತರರು 5 ರಿಂದ 10 ಸ್ಥಾನಗಳನ್ನು ಗಳಿಸಲಿದ್ದಾರೆ.

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆಯು ಎನ್‌ಡಿಎ 133 ರಿಂದ 148 ಸ್ಥಾನಗಳನ್ನು, ಮಹಾಘಟಬಂಧನ್ 87 ರಿಂದ 102 ಸ್ಥಾನಗಳನ್ನು, ಜನ ಸುರಾಜ್ ಪಕ್ಷ (ಜೆಎಸ್‌ಪಿ) ಎರಡು ಅಥವಾ ಯಾವುದೇ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಇತರರು ಮೂರರಿಂದ ಆರು ಸ್ಥಾನಗಳನ್ನು ಪಡೆಯುತ್ತಾರೆ ಎಂದು ಅಂದಾಜಿಸಿದೆ.

ಮ್ಯಾಟ್ರಿಝ್ ಸಮೀಕ್ಷೆಯು ಎನ್‌ಡಿಎ 147 ರಿಂದ 167 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎ ಮೈತ್ರಿಕೂಟಕ್ಕೆ 133 ರಿಂದ 159 ಸ್ಥಾನಗಳು ಮತ್ತು ಮಹಾಘಟಬಂಧನ್‌ಗೆ 75 ರಿಂದ 101 ಸ್ಥಾನಗಳು ಮತ್ತು ಜೆಎಸ್‌ಪಿಗೆ ಐದು ಸ್ಥಾನಗಳು ಸಿಗಲಿವೆ ಎಂದಿದೆ.

ಚಾಣಕ್ಯ ಸ್ಟ್ರಾಟಜೀಸ್ ಎನ್‌ಡಿಎ 130ರಿಂದ 138 ಸ್ಥಾನಗಳನ್ನು ಮತ್ತು ಮಹಾಘಟಬಂದನ್ 100 ರಿಂದ 108 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಪಿ-ಮಾರ್ಕ್ ಎನ್‌ಡಿಎ 142 ರಿಂದ 162 ಸ್ಥಾನಗಳನ್ನು ಮಹಾಘಟಬಂದನ್ 80 ರಿಂದ 98 ಮತ್ತು ಜನ ಸುರಾಜ್ 1ರಿಂದ 4 ಸ್ಥಾನಗಳನ್ನು ಪಡೆಯಬಹುದು ಎಂದಿದೆ. ಜೆವಿಸಿ 135 ರಿಂದ150 ಸ್ಥಾನಗಳನ್ನು ಎನ್‌ಡಿಎ ಪಡೆಯಬಹುದು 88 ರಿಂದ 103 ಸ್ಥಾನಗಳು ಮಹಾಘಟಬಂದನ್ ಪಾಲಾಗಬಹುದು ಹಾಗೂ ಜನ ಸುರಾಜ್ ಕನಿಷ್ಠ 1 ಸ್ಥಾನವನ್ನು ಗಳಿಸಬಹುದು ಎಂದು ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಮಹಾಘಟಬಂಧನ್ (ಇಂಡಿಯಾ) ನಡುವೆ ಪ್ರಮುಖವಾಗಿ ಸ್ಪರ್ಧೆ ನಡೆದಿದೆ.

ಎನ್‌ಡಿಎಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಸಂಯುಕ್ತ), ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಒಳಗೊಂಡಿವೆ.

ಮಹಾಘಟಬಂಧನ್‌ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್, ವಿಕಾಸಶೀಲ ಇನ್ಸಾನ್ ಪಕ್ಷ, ಮೂರು ಎಡ ಪಕ್ಷಗಳಾದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ ) ಮತ್ತು ಹೊಸದಾಗಿ ರೂಪುಗೊಂಡ ಇಂಡಿಯನ್ ಇನ್‌ಕ್ಲೂಸಿವ್ ಪಕ್ಷಗಳನ್ನು ಒಳಗೊಂಡಿವೆ.

ಎರಡೂ ಪ್ರಮುಖ ಮೈತ್ರಿಕೂಟಗಳ ಜೊತೆ ಸೇರದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ.

ವಿರೋಧ ಪಕ್ಷಗಳು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಎನ್‌ಡಿಎ ಹೇಳಿದೆ.

2014 ರಿಂದ 2015 ರವರೆಗಿನ ಒಂಬತ್ತು ತಿಂಗಳ ಅವಧಿಯನ್ನು ಹೊರತುಪಡಿಸಿ, ನಿತೀಶ್ ಕುಮಾರ್ ಕಳೆದ 20 ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಮತ್ತು ಮಹಾಘಟಬಂಧನ್ ಶೇಕಡ 37.2ರಷ್ಟು ಒಂದೇ ರೀತಿ ಮತಗಳನ್ನು ಗಳಿಸಿದ್ದವು. ಆದಾಗ್ಯೂ, 243 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದು ಎನ್‌ಡಿಎ ಅಲ್ಪ ಬಹುಮತದೊಂದಿಗೆ ಬಿಹಾರದಲ್ಲಿ ಅಧಿಕಾರಕ್ಕೆ ಮರಳಿತ್ತು. ವಿರೋಧ ಪಕ್ಷಗಳು 110 ಸ್ಥಾನಗಳನ್ನು ಪಡೆದಿತ್ತು.

ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಯನ್ನು ಸೋತಿತ್ತು.

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...