Homeಕರ್ನಾಟಕಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

ಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

- Advertisement -
- Advertisement -

ಯಡಿಯೂರಪ್ಪನವರು ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರಿಂದಲೇ ರಾಜೀನಾಮೆ ಕೊಟ್ಟು ಬಿಜೆಪಿಗೆ ಹೋದೆ ಎಂದು ಅನರ್ಹ ಶಾಸಕ ನಾರಾಯಣಗೌಡ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ದೇವೇಗೌಡರು ಚಪ್ಪಲಿ ಬಿಡುವ ಜಾಗದಲ್ಲಿ ನಿಲ್ಲಿಸುತ್ತಿದ್ದರು ಎಂದೂ ಸಹ ಆರೋಪಿಸಿದ್ದಾರೆ. ಅದಕ್ಕಾಗಿ ಬಿಜೆಪಿಯಿಂದ ನಿಂತಿದ್ದೀನಿ ಎನ್ನುತ್ತಿದ್ದಾರೆ. ಇವರು ಗ್ರಾ.ಪಂ ಸದಸ್ಯರಿಂದ ಹಿಡಿದು ಸಣ್ಣ ಪುಟ್ಟ ಮುಖಂಡರನ್ನು ಕೊಳ್ಳಲು ಸಾಕಷ್ಟು ಹಣದ ಹೊಳೆ ಹರಿಸುತ್ತಿದ್ದಾರೆ ಎಂಬ ಆರೋಪಗಳಿವೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಕೆ.ಆರ್.ಪೇಟೆ ನನ್ನ ಜನ್ಮಭೂಮಿ. ನಾನು ಹುಟ್ಟಿದ ಜಿಲ್ಲೆಯಲ್ಲಿ ಬಿಜೆಪಿ ಒಂದು ಸೀಟೂ ಗೆಲ್ಲದೇ ಇರುವುದಕ್ಕೆ ನಾಚಿಕೆಯಾಗುತ್ತಿದೆ. ಈ ಬಾರಿ ದಯವಿಟ್ಟು ಗೆಲ್ಲಿಸಿ ಎಂದು ಅವಲತ್ತುಕೊಂಡಿದ್ದಾರೆ. ಅವರ ಮಗ ಬಿ.ವೈ.ವಿಜಯೇಂದ್ರನನ್ನು ಅಲ್ಲಿಯೇ ಠಿಕಾಣಿ ಹೂಡಿಸಿ, ಮತಬೇಟೆಗೆ ಇಳಿಸಿದ್ದಾರೆ. ಮಂಡ್ಯ ಸಂಸದೆ ಸುಮಲತಾರವರು ಇದಕ್ಕೆ ಸಾಥ್ ನೀಡಿದ್ದಾರೆ. ಆರ್.ಎಸ್.ಎಸ್ ಅಂಗಸಂಸ್ಥೆಗಳು ಈ ಬಾರಿ ತುಸು ಬಿರುಸಿನಿಂದಲೇ ಪ್ರಚಾರಕ್ಕಿಳಿದಿವೆ.

ಇನ್ನು ತನ್ನ ಭದ್ರಕೋಟೆಯಲ್ಲಿ ಜೆ.ಡಿ.ಎಸ್ ಜಾತಿಬಲವನ್ನು ನೆಚ್ಚಿಕೊಂಡಿದೆ. ಮೊನ್ನೆ ಯಡಿಯೂರಪ್ಪನವರು ವೀರಶೈವ ಲಿಂಗಾಯಿತರ ಒಂದೂ ಓಟು ಕೂಡ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಹೇಳಿದ್ದನ್ನು ಜೆಡಿಎಸ್ ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗರು ಜೆಡಿಎಸ್‌ನತ್ತ ಧ್ರುವೀಕರಣಗೊಳ್ಳುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾರೇ ನಿಂತರೂ ಗೆಲುವು ಖಚಿತ ಎಂಬಂತಿರುವಾಗ, ಅಧಿಕೃತ ಅಭ್ಯರ್ಥಿ ದೇವರಾಜು ಗೆಲುವು ನಿಶ್ಚಿತ ಎನ್ನುವುದು ಜೆಡಿಎಸ್ ಕಾರ್ಯಕರ್ತರ ವಿಶ್ವಾಸ.

ಕಾಂಗ್ರೆಸ್‌ನಿಂದ ಹಳೇ ಹುರಿಯಾಳು ಕೆ.ಬಿ.ಚಂದ್ರಶೇಖರ್ ಕಣಕ್ಕಿಳಿದಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಸೋತು ಕಂಗೆಟ್ಟಿರುವ ಅವರಿಗೆ ಗೆಲುವು ಬೇಕೇ ಬೇಕು. ಯಾವಾಗೆಲ್ಲ ಜೆಡಿಎಸ್ ಅಭ್ಯರ್ಥಿಗಳು ಪಕ್ಷಾಂತರ ಮಾಡಿ ಬೇರೆ ಪಕ್ಷಗಳಿಂದ ಸ್ಪರ್ಧಿಸಿದ್ದರೋ ಆಗೆಲ್ಲಾ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. 1989 ಮತ್ತು 1999ರಲ್ಲಿ ಇದೇ ರೀತಿ ಆಗಿದೆ. ಅದರ ಪುನರಾವರ್ತನೆಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ. ಕ್ಷೇತ್ರದಲ್ಲಿ ಒಂದಷ್ಟು ಬಲ ಹೊಂದಿರುವ ಕರ್ನಾಟಕ ರಾಜ್ಯ ರೈತ ಸಂಘವು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲಿಸುತ್ತಿರುವುದು ಕೆಬಿಸಿಗೆ ಪ್ಲಸ್ ಪಾಯಿಂಟ್.

ಲಿಂಗಾಯಿತ ಸೇರಿದಂತೆ ಕೆಲ ಮೇಲ್ಜಾತಿ ಓಟುಗಳು ಪೂರ್ತಿ ಬಿಜೆಪಿ ಪಾಲಾದರೆ, ಮಾದಿಗರು ಮತ್ತು ನಾಯಕ ಸಮುದಾಯದ ಒಂದಷ್ಟು ಓಟನ್ನು ಬಿಜೆಪಿ ಪಡೆದುಕೊಳ್ಳಲಿದೆಯೆಂದು ಅಂದಾಜಿಸಲಾಗುತ್ತಿದೆ. ಜೆಡಿಎಸ್ ಅತಿ ಹೆಚ್ಚು ಒಕ್ಕಲಿಗ ಓಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಕುರುಬರು, ಮುಸ್ಲಿಮರ ಬಹುತೇಕ ಓಟುಗಳನ್ನು ಪಡೆದರೆ ಒಕ್ಕಲಿಗರು ಮತ್ತು ದಲಿತರ ಒಂದಷ್ಟು ಓಟುಗಳನ್ನು ಸೆಳೆಯುತ್ತದೆ. ಅಲ್ಲಿಗೆ ಒಕ್ಕಲಿಗ ಓಟುಗಳನ್ನು ಎಷ್ಟು ಪಡೆದುಕೊಳ್ಳುತ್ತಾರೆ ಎನ್ನುವದರ ಮೇಲೆ ಜಯ ಜೆಡಿಎಸ್‌ನದೊ ಅಥವಾ ಕಾಂಗ್ರೆಸ್‌ನದೋ ಎನ್ನುವುದು ನಿರ್ಧಾರವಾಗುತ್ತದೆ.

ಇದನ್ನೂ ಓದಿ: ಹುಣಸೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಬಿಗ್ ಫೈಟ್: ಇವರಿಬ್ಬರಲ್ಲಿ ಜೆಡಿಎಸ್ ಯಾರನ್ನು ಗೆಲ್ಲಿಸಲಿದೆ?

ಇದನ್ನೂ ಓದಿ: ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...