Homeಕರ್ನಾಟಕಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

ಕೆ.ಆರ್.ಪೇಟೆ: ಕಮಲ ಅರಳಿಸಲು ಯಡ್ಡಿ ಪ್ರಯತ್ನ. ಜೆಡಿಎಸ್‌ಗೆ ಜಾತಿಬಲ, ಒಡಕಿನ ಲಾಭ ಪಡೆಯುವುದೇ ಕಾಂಗ್ರೆಸ್?

- Advertisement -
- Advertisement -

ಯಡಿಯೂರಪ್ಪನವರು ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರಿಂದಲೇ ರಾಜೀನಾಮೆ ಕೊಟ್ಟು ಬಿಜೆಪಿಗೆ ಹೋದೆ ಎಂದು ಅನರ್ಹ ಶಾಸಕ ನಾರಾಯಣಗೌಡ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ದೇವೇಗೌಡರು ಚಪ್ಪಲಿ ಬಿಡುವ ಜಾಗದಲ್ಲಿ ನಿಲ್ಲಿಸುತ್ತಿದ್ದರು ಎಂದೂ ಸಹ ಆರೋಪಿಸಿದ್ದಾರೆ. ಅದಕ್ಕಾಗಿ ಬಿಜೆಪಿಯಿಂದ ನಿಂತಿದ್ದೀನಿ ಎನ್ನುತ್ತಿದ್ದಾರೆ. ಇವರು ಗ್ರಾ.ಪಂ ಸದಸ್ಯರಿಂದ ಹಿಡಿದು ಸಣ್ಣ ಪುಟ್ಟ ಮುಖಂಡರನ್ನು ಕೊಳ್ಳಲು ಸಾಕಷ್ಟು ಹಣದ ಹೊಳೆ ಹರಿಸುತ್ತಿದ್ದಾರೆ ಎಂಬ ಆರೋಪಗಳಿವೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಕೆ.ಆರ್.ಪೇಟೆ ನನ್ನ ಜನ್ಮಭೂಮಿ. ನಾನು ಹುಟ್ಟಿದ ಜಿಲ್ಲೆಯಲ್ಲಿ ಬಿಜೆಪಿ ಒಂದು ಸೀಟೂ ಗೆಲ್ಲದೇ ಇರುವುದಕ್ಕೆ ನಾಚಿಕೆಯಾಗುತ್ತಿದೆ. ಈ ಬಾರಿ ದಯವಿಟ್ಟು ಗೆಲ್ಲಿಸಿ ಎಂದು ಅವಲತ್ತುಕೊಂಡಿದ್ದಾರೆ. ಅವರ ಮಗ ಬಿ.ವೈ.ವಿಜಯೇಂದ್ರನನ್ನು ಅಲ್ಲಿಯೇ ಠಿಕಾಣಿ ಹೂಡಿಸಿ, ಮತಬೇಟೆಗೆ ಇಳಿಸಿದ್ದಾರೆ. ಮಂಡ್ಯ ಸಂಸದೆ ಸುಮಲತಾರವರು ಇದಕ್ಕೆ ಸಾಥ್ ನೀಡಿದ್ದಾರೆ. ಆರ್.ಎಸ್.ಎಸ್ ಅಂಗಸಂಸ್ಥೆಗಳು ಈ ಬಾರಿ ತುಸು ಬಿರುಸಿನಿಂದಲೇ ಪ್ರಚಾರಕ್ಕಿಳಿದಿವೆ.

ಇನ್ನು ತನ್ನ ಭದ್ರಕೋಟೆಯಲ್ಲಿ ಜೆ.ಡಿ.ಎಸ್ ಜಾತಿಬಲವನ್ನು ನೆಚ್ಚಿಕೊಂಡಿದೆ. ಮೊನ್ನೆ ಯಡಿಯೂರಪ್ಪನವರು ವೀರಶೈವ ಲಿಂಗಾಯಿತರ ಒಂದೂ ಓಟು ಕೂಡ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಹೇಳಿದ್ದನ್ನು ಜೆಡಿಎಸ್ ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗರು ಜೆಡಿಎಸ್‌ನತ್ತ ಧ್ರುವೀಕರಣಗೊಳ್ಳುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾರೇ ನಿಂತರೂ ಗೆಲುವು ಖಚಿತ ಎಂಬಂತಿರುವಾಗ, ಅಧಿಕೃತ ಅಭ್ಯರ್ಥಿ ದೇವರಾಜು ಗೆಲುವು ನಿಶ್ಚಿತ ಎನ್ನುವುದು ಜೆಡಿಎಸ್ ಕಾರ್ಯಕರ್ತರ ವಿಶ್ವಾಸ.

ಕಾಂಗ್ರೆಸ್‌ನಿಂದ ಹಳೇ ಹುರಿಯಾಳು ಕೆ.ಬಿ.ಚಂದ್ರಶೇಖರ್ ಕಣಕ್ಕಿಳಿದಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಸೋತು ಕಂಗೆಟ್ಟಿರುವ ಅವರಿಗೆ ಗೆಲುವು ಬೇಕೇ ಬೇಕು. ಯಾವಾಗೆಲ್ಲ ಜೆಡಿಎಸ್ ಅಭ್ಯರ್ಥಿಗಳು ಪಕ್ಷಾಂತರ ಮಾಡಿ ಬೇರೆ ಪಕ್ಷಗಳಿಂದ ಸ್ಪರ್ಧಿಸಿದ್ದರೋ ಆಗೆಲ್ಲಾ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. 1989 ಮತ್ತು 1999ರಲ್ಲಿ ಇದೇ ರೀತಿ ಆಗಿದೆ. ಅದರ ಪುನರಾವರ್ತನೆಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ. ಕ್ಷೇತ್ರದಲ್ಲಿ ಒಂದಷ್ಟು ಬಲ ಹೊಂದಿರುವ ಕರ್ನಾಟಕ ರಾಜ್ಯ ರೈತ ಸಂಘವು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲಿಸುತ್ತಿರುವುದು ಕೆಬಿಸಿಗೆ ಪ್ಲಸ್ ಪಾಯಿಂಟ್.

ಲಿಂಗಾಯಿತ ಸೇರಿದಂತೆ ಕೆಲ ಮೇಲ್ಜಾತಿ ಓಟುಗಳು ಪೂರ್ತಿ ಬಿಜೆಪಿ ಪಾಲಾದರೆ, ಮಾದಿಗರು ಮತ್ತು ನಾಯಕ ಸಮುದಾಯದ ಒಂದಷ್ಟು ಓಟನ್ನು ಬಿಜೆಪಿ ಪಡೆದುಕೊಳ್ಳಲಿದೆಯೆಂದು ಅಂದಾಜಿಸಲಾಗುತ್ತಿದೆ. ಜೆಡಿಎಸ್ ಅತಿ ಹೆಚ್ಚು ಒಕ್ಕಲಿಗ ಓಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಕುರುಬರು, ಮುಸ್ಲಿಮರ ಬಹುತೇಕ ಓಟುಗಳನ್ನು ಪಡೆದರೆ ಒಕ್ಕಲಿಗರು ಮತ್ತು ದಲಿತರ ಒಂದಷ್ಟು ಓಟುಗಳನ್ನು ಸೆಳೆಯುತ್ತದೆ. ಅಲ್ಲಿಗೆ ಒಕ್ಕಲಿಗ ಓಟುಗಳನ್ನು ಎಷ್ಟು ಪಡೆದುಕೊಳ್ಳುತ್ತಾರೆ ಎನ್ನುವದರ ಮೇಲೆ ಜಯ ಜೆಡಿಎಸ್‌ನದೊ ಅಥವಾ ಕಾಂಗ್ರೆಸ್‌ನದೋ ಎನ್ನುವುದು ನಿರ್ಧಾರವಾಗುತ್ತದೆ.

ಇದನ್ನೂ ಓದಿ: ಹುಣಸೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಬಿಗ್ ಫೈಟ್: ಇವರಿಬ್ಬರಲ್ಲಿ ಜೆಡಿಎಸ್ ಯಾರನ್ನು ಗೆಲ್ಲಿಸಲಿದೆ?

ಇದನ್ನೂ ಓದಿ: ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯನ ಗೆಲುವಿಗೆ ಮುನ್ನುಡಿ ಬರೆಯಿತೇ ಜೆಡಿಎಸ್?

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...