Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...