Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...